ಮಂಗಳೂರಲ್ಲಿ ನ್ಯೂರೋ ಸೆನ್ಸರಿ ಡೆವಲಪ್ಮೆಂಟ್ ಥೆರಪಿ ಸಂಚಾರಿ ಘಟಕ
ಮಂಗಳೂರು, ಆ 9: ಸೇವಾಭಾರತಿ ಮಂಗಳೂರು, ಇದರ ವತಿಯಿಂದ ನ್ಯೂರೋ ಸೆನ್ಸರಿ ಡೆವಲಪ್ಮೆಂಟ್ ಥೆರಪಿ ಸಂಚಾರಿ ಘಟಕ ಇದೇ ಅಗಸ್ಟ್ 10, ಶನಿವಾರ ಬೆಳಿಗ್ಗೆ ಹತ್ತು ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ನ್ಯೂರೋ ಸೆನ್ಸರಿ ಡೆವಲಪಮೆಂಟ್ ಥೆರಪಿ ಘಟಕವನ್ನು ಉದ್ಘಾಟಿಸಲಿದ್ದಾರೆ.
ಎಂಆರ್ ಪಿಎಲ್ ಸಮೂಹ ಪ್ರಭಂದಕ (ಮಾನವ ಸಂಪನ್ಮೂಲ) ಬಿ.ಎಚ್.ವಿ. ಪ್ರಸಾದ್ ಅವರು ಎಂಆರ್ ಪಿಎಲ್ ವತಿಯಿಂದ ನೀಡಲಾಗುವ ಬಸ್ ಅನ್ನು ಸೇವಾಭಾರತಿಗೆ ಹಸ್ತಾಂತರಿಸಲಿದ್ದಾರೆ. ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ನ್ಯೂರೋ ಸೆನ್ಸರಿ ಡೆವಲಪ್ ಮೆಂಟ್ ಥೆರಪಿ ಸಂಚಾರಿ ಘಟಕ ಸುಧಾರಿತ ಫಿಸಿಯೋಥೆರಪಿ ಚಿಕಿತ್ಸಾ ವ್ಯವಸ್ಥೆ ಇಲ್ಲದಿರುವ ಗ್ರಾಮೀಣ ಪ್ರದೇಶಗಳಲ್ಲಿ ದಿವ್ಯಾಂಗರ ಮನೆ ಬಾಗಿಲಿಗೆ ಭೇಟಿ ಕೊಟ್ಟು, ಮಕ್ಕಳ ಎಳವೆಯಲ್ಲಿಯೇ ವೈಕಲ್ಯಗಳ ಪತ್ತೆ ಹಚ್ಚುವಿಕೆ, ಅವಶ್ಯಕ ಫಿಸಿಯೋಥೆರಪಿ ಮತ್ತು ಸ್ವೀಚ್ ಥೆರಪಿ ಚಿಕಿತ್ಸೆ ಕೊಡುವುದು ಮತ್ತು ಅನುವರ್ತಿ ಕಾರ್ಯ ಕೈಗೊಳ್ಳುವುದು ಮಾಡಲಿದೆ.
ಮಂಗಳೂರಿನಿಂದ 56 ಕಿ.ಮೀ ವ್ಯಾಪ್ತಿಯಲ್ಲಿರುವ ಬಿ.ಸಿ.ರೋಡ್, ಬಂಟ್ವಾಳ, ಪುತ್ತೂರು, ಗುರುಪುರಕ್ಕೆ ವಾರಕ್ಕೆ ಒಂದು ಅಥವಾ ಎರಡು ಬಾರಿ ಹೋಗಿ ಫಿಸಿಯೋಥೆರಪಿ ಹಾಗೂ ಸ್ವೀಚ್ ಥೆರಪಿಗೆ ಹಲವಾರು ವರ್ಷಗಳಿಂದ ಚಿಕಿತ್ಸೆ ಕೊಡಲಾಗುತ್ತಿರುವುದು ಇದರ ಉಪಯುಕ್ತತೆಯನ್ನು ಹೆಚ್ಚಿಸಲು, ಸರಕಾರದ ಯೋಜನೆಯಾದ ಸರ್ವ ಶಿಕ್ಷಣ ಅಭಿಯಾನದ ಸಹಕಾರದಿಂದ ಫಲಾನುಭವಿಗಳ ವ್ಯಾಪ್ತಿ ಕ್ಷೇತ್ರವನ್ನು ವಿಸ್ತರಿಸಲಾಗುವುದು.
ಸೆರೆಬ್ರಲ್ ಪಾಲ್ಸಿ, ಡಿಲೇಯ್ಡ್ ಮೈಲ್ ಸ್ಟೋನ್, ಡೌನ್ ಸಿಂಡ್ರೋಮ್, ಕಾಟಿಸಂ ಡಿಸಾರ್ಡರ್ ಇರುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುವುದು. ಕಿರು ವಯಸ್ಸಿನಲ್ಲಿಯೇ ನ್ಯೂನತೆಯನ್ನು ಪತ್ತೆ ಹಚ್ಚುವಿಕೆಯಲ್ಲಿ ಶಿಕ್ಷಕರಿಗೆ ವರ್ಗಗಳನ್ನು ನಡೆಸುವುದು ಮತ್ತು ಹೆತ್ತವರಿಗೆ ಸಲಹೆ, ಸೂಚನೆಗಳನ್ನು ಕೊಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಎಂದು ಸೇವಾಭಾರತಿ ಪ್ರಕಟನೆ ತಿಳಿಸಿದೆ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ












Click it and Unblock the Notifications