ಮಂಗಳೂರಿನಲ್ಲಿ ಮೋದಿ ವಿರುದ್ಧ ಆನಂದ್ ಶರ್ಮಾ ವಾಗ್ದಾಳಿ
ಮಂಗಳೂರು ಮೇ 04: ಕಾಂಗ್ರೆಸ್ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉನ್ನತ ಸ್ಥಾನವನ್ನು ಪಕ್ಷದಲ್ಲಿ ನೀಡಲಾಗಿದೆ. ಲೋಕಸಭೆಯಲ್ಲಿ ವಿಪಕ್ಷ ಸ್ಥಾನವನ್ನು ನೀಡಲಾಗಿದೆ. ಆದರೆ ಮಲ್ಲಿಕಾರ್ಜುನ ಖರ್ಗೆಯ ಸ್ಥಾನಕ್ಕೆ ಸರಿಯಾದ ಮಾನ್ಯತೆ ಕೇಂದ್ರ ಸರಕಾರ ನೀಡಿಲ್ಲ ಎಂದು ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿಯ ಕೆಲಸ ಕಾರ್ಯ ಬಿಟ್ಟು ಕರ್ನಾಟಕ ಸುತ್ತುತ್ತಿದ್ದಾರೆ. ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿ ಆದರೆ ಕರ್ನಾಟಕದಲ್ಲಿ ಮೋದಿ ಬಿಜೆಪಿಯ ಪ್ರಚಾರ ಮಂತ್ರಿ ಆಗಿದ್ದಾರೆ ಎಂದು ವ್ಯಂಗ್ಯ ವಾಗಿದ್ದಾರೆ.
ಜನರಿಗೆ ಸುಳ್ಳು ಹೇಳುತ್ತಾ ಮೋದಿಯವರು ಕನಸಿನ ಸಾಮ್ರಾಜ್ಯ ಕಟ್ಟುತ್ತಿದ್ದಾರೆ ಎಂದು ಹೇಳಿದ ಅವರು ಮೋದಿ ಕೇವಲ ಸುಳ್ಳುಗಳನ್ನು ಮಾತ್ರ ಮಾತನಾಡುತ್ತಾರೆ. ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ಮೋದಿ ಮೋಸ ಮಾಡಿದ್ದಾರೆ ಈ ಕಾರಣ ಮೋದಿ ಕರ್ನಾಟಕ ಜನರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು.

ಮೋದಿ ಚುನಾವಣಾ ಪ್ರಚಾರ ಮಾಡುವ ಬದಲು ಕರ್ನಾಟಕದ ಜನರಲ್ಲಿ ಕ್ಷಮೆ ಕೇಳಬೇಕಾಗಿದೆ.
ಯುವಕರಿಗೆ ಇನ್ನೂ ಮೋದಿ ಉದ್ಯೋಗ ದೊರಕಿಸಿಕೊಟ್ಟಿಲ್ಲ. ಯುವಕರಿಗೆ ಪಕೋಡಾ, ಪಾನ್ ಬ್ಯುಸಿನೆಸ್ ಮಾಡಿ ಎಂದು ಮೋದಿ ಹೇಳುತ್ತಾರೆ ಎಂದು ಅವರು ವ್ಯಂಗ್ಯವಾಡಿದರು.
ಈ ದೇಶದಲ್ಲಿ ಎರಡು ಕಾನೂನು ಇದೆ ಎಂದು ಮೋದಿ ಭಾವಿಸಿದ್ದಾರೆ. ಬಿಜೆಪಿಯವರಿಗೆ, ವಿರೋಧಿಗಳಿಗೆ ಎರಡು ಕಾನೂನು ಇದೆ ಎಂದು ಮೋದಿ ಭಾವಿಸಿದ್ದಾರೆ. ನಮ್ಮದು ಬಹುಸಂಸ್ಕೃತಿಯುಳ್ಳ ದೇಶ. ಮೋದಿ, ಅಮಿತ್ ಶಾ ದೇಶವನ್ನ ಹಾಳು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಕಾಂಗ್ರೆಸ್ ಕೇಳಿದ ಪ್ರಶ್ನೆಗಳಿಗೆ ಮೊದಲು ಮೋದಿ ಉತ್ತರಿಸಲಿ . ಮೋದಿ ಮೊದಲು ಮೌನವ್ರತ ತೊರೆಯಿರಿ ಎಂದು ಕರೆ ನೀಡಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications