ಮಂಗಳೂರಿನಲ್ಲಿ ಮೋದಿ ವಿಜಯೋತ್ಸವಕ್ಕಾಗಿ ಯಕ್ಷಗಾನ ಪ್ರದರ್ಶನ ಆಯೋಜನೆ!
ಮಂಗಳೂರು, ಮೇ.08:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಮುಗಿದಿದೆ. ಇನ್ನು ಏನಿದ್ದರೂ ಫಲಿತಾಂಶಕ್ಕಾಗಿ ಮೇ 23 ರವರೆಗೆ ಕಾಯಬೇಕಾಗಿದೆ. ದೇಶದ ಇತರ ಭಾಗಗಳಲ್ಲಿ ಇನ್ನು ಎರಡು ಹಂತದ ಚುನಾವಣೆ ನಡೆಯಬೇಕಾಗಿದೆ.
ಆದರೆ ಈ ನಡುವೆ ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ಕೂಗು ಗಟ್ಟಿಗೊಳ್ಳುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸದಲ್ಲಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಸಂಭ್ರಮಾಚರಣೆಗೆ ಯಕ್ಷಗಾನ ಬುಕ್ಕಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ.
ದೇಶದ ಇತರ ಭಾಗಗಳಲ್ಲಿ ಇನ್ನೂ ಎರಡು ಹಂತದ ಚುನಾವಣೆ ಬಾಕಿಯಿದೆ. ಆದರೆ ಮಂಗಳೂರಿನಲ್ಲಿ 'ನಮೋ ಎಗೈನ್, ನಮೋ ಫಿರ್ಸೇ, ಟೀಮ್ಮೋದಿ, ನಮೋ ಮಿಷನ್400 ಪ್ಲಸ್' ಟೀಮ್ ಗಳು ದೇಶಾದ್ಯಂತ ಬಿಜೆಪಿ ಜಯಭೇರಿ ಬಾರಿಸಿ ಬಹುಮತದೊಂದಿಗೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಯಕ್ಷಗಾನ ಬುಕ್ಕಿಂಗ್ ಮಾಡಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಮೇಳದಿಂದ ಮೇ.24 ರಂದು ರಾತ್ರಿ 8:30ಕ್ಕೆ ಮಂಗಳೂರಿನ ರಥಬೀದಿಯಲ್ಲಿ "ಶ್ರೀ ದೇವಿ ಮಹಾತ್ಮ್ಯಂ" ಎಂಬ ಪುಣ್ಯ ಕಥಾ ಪ್ರಸಂಗ ನಡೆಯಲಿದೆ. ಚೌಕಿ ಪೂಜೆಯ ಬಳಿಕ ಅನ್ನಪ್ರಸಾದವೂ ನಡೆಯಲಿದೆ ಎಂದು ಆಮಂತ್ರಣ ಮುದ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.
ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬ ಸಂಕಲ್ಪದಿಂದ ಟೀಂ ಮೋದಿ ತಂಡವು ಕಟೀಲು ಮೇಳದವರಿಂದ ಕಳೆದ ಡಿಸೆಂಬರ್ 29ರಂದು ದೇವಿ ಮಹಾತ್ಮ್ಯಂ ಯಕ್ಷಗಾನ ಆಯೋಜಿಸಿತ್ತು.












Click it and Unblock the Notifications