"ಮೋಕೆದ ಸಿಂಗಾರಿ" ಖ್ಯಾತಿಯ ತುಳು ಸಾಹಿತಿ ಸೀತಾರಾಮ್ ಕುಲಾಲ್ ನಿಧನ
ಮಂಗಳೂರು, ಜುಲೈ 28: ತುಳು ನಾಡಿನಲ್ಲಿ ಅತ್ಯಂತ ಜನಪ್ರಿಯ ಹಾಡು 'ಮೋಕೆದ ಸಿಂಗಾರಿ' ಸೃಷ್ಠಿಕರ್ತ, ತುಳು ಶಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ತುಳು ಸಾಹಿತಿ ಎಂ.ಕೆ.ಸೀತಾರಾಮ್ ಕುಲಾಲ್ (78) ಭಾನುವಾರ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾರಾಮ್ ಕುಲಾಲ್, ತಮ್ಮ ಸ್ವ ಗೃಹದಲ್ಲಿ ನಿಧನರಾದರು.
ಮೋಕೆದ ಸಿಂಗಾರಿ ಉಂತುದೆ ವಯ್ಯಾರಿ ಯಾನ್ ಮೂಲೆ ಕಾತೊಂದುಲ್ಲೆ ಮರತೇ ಪೋಪನಾ, ಪಕ್ಕಿಲು ಮೂಜಿ ಒಂಜೇ ಗೂಡುಡು ಬದ್ಕೊಂದುಂಡುಗೆ, ಪರಶುರಾಮನ ಕೊಡಲಿಗ್ ಪುಟ್ಟಿನ ತುಳುನಾಡ್, ಬ್ರಹ್ಮನ ಬರವು ಮಾಜಂದೆ ಪೊಂಡಾ ಅಪ್ಪೆ ಮನಸ್ ಬಂಗಾರ ಅಮ್ಮ ತೆನಸು ಸಿಂಗಾರ, ಡಿಂಗಿರಿ ಮಾಮ ಡಿಂಗಿರಿ ಮಾಮ ಪೊಡಿದ್ ಪಾರಡಾ... ಹೀಗೆ 11 ತುಳು ಚಿತ್ರಗಳಿಗೆ 25ಕ್ಕೂ ಮಿಕ್ಕಿ ಸೂಪರ್ ಹಿಟ್ ಹಾಡುಗಳನ್ನು ನೀಡಿದ ಖ್ಯಾತಿ ಎಂ.ಕೆ.ಸೀತಾರಾಮ್ ಕುಲಾಲ್ ಸಲ್ಲುತ್ತದೆ.
ಸೀತಾರಾಮ್ ಕುಲಾಲ್ ಅವರು ಮೊದಲು ದಾಸಿ ಪುತ್ರ ಕನ್ನಡ ನಾಟಕದ ಮೂಲಕ ರಂಗ ಭೂಮಿ ಪ್ರವೇಶಿಸಿದರು. ಆ ನಂತರ ಪಗೆತ ಪುಗೆ ತುಳು ಚಲನ ಚಿತ್ರಕ್ಕೆ ಸಾಹಿತ್ಯ ನೀಡುವುದರೊಂದಿಗೆ ತುಳು ಚಿತ್ರರಂಗದ ಪ್ರವೇಶಿಸಿದ್ದರು.

ಅಲ್ಲದೆ ಬಯ್ಯಮಲ್ಲಿಗೆ ಬೊಳ್ಳಿತೋಟ ಉಡಲ್ದ ತುಡರ್ ಬದ್ಕದ ಬಿಲೆ, ಕೋಟಿ ಚೆನ್ನಯ, ಬದಿ ಸೇರಿ ಒಟ್ಟು ಹನ್ನೊಂದು ಚಿತ್ರಗಳಿಗೆ ಅವರು ಸಾಹಿತ್ಯವನ್ನು ನೀಡಿದ್ದಾರೆ. ಸುಮಾರು 17 ಕನ್ನಡ ಚಾರಿತ್ರಿಕ ನಾಟಕ, 6 ಕನ್ನಡ ಪೌರಾಣಿಕ ಸೇರಿ ಒಟ್ಟು 66 ಕೃತಿಗಳನ್ನು ರಚಿಸಿದ್ದಾರೆ.
ನಟರಾಗಿ, ನಾಟಕಕಾರರಾಗಿ, ಸಾಹಿತಿಯಾಗಿ, ನಿರ್ದೇಶಕರಾಗಿ ತುಳು ರಂಗಭೂಮಿಗೆ ಹಾಗೂ ತುಳು ಚಲನ ಚಿತ್ರ ರಂಗಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಹಲವಾರು ಸಂಘ- ಸಂಸ್ಧೆಗಳು ಗೌರವಿಸಿದ್ದವು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications