ಮೂಡಬಿದಿರೆ; ಭಾವೈಕ್ಯತೆಯ ಸಂದೇಶ ಸಾರಿದ ಪುಟ್ಟ ಆ್ಯಂಬುಲೆನ್ಸ್ನ ಮಹಾಯಾನ
ಮಂಗಳೂರು, ಸೆಪ್ಟೆಂಬರ್, 19: ಮೂಡಬಿದಿರೆಯ ಮಾಸ್ತಿಕಟ್ಟೆಯ ಅಡಿಕೆ ಗೋದಾಮಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಯುವಕನೊಬ್ಬ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದ. ತಲೆಗೆ ಗಂಭೀರ ಏಟು ಬಿದ್ದ ಪರಿಣಾಮ ಯುವಕ ತೀವ್ರವಾಗಿ ಗಾಯಗೊಂಡಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಮಂಗಳೂರಿನಿಂದ ಉತ್ತರ ಪ್ರದೇಶದ ಮೊರಾದಾಬಾದ್ಗೆ ಆ್ಯಂಬುಲೆನ್ಸ್ನಲ್ಲಿ ಸಾಗಿಸಿದ್ದಾರೆ.
ಹತ್ತಿರದಲ್ಲಿರುವ ಆಸ್ಪತ್ರೆಗಳಿಗೆ ರೋಗಿಯನ್ನು ದಾಖಲಿಸುವುದು, ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವುದು ಸಾಮಾನ್ಯವಾಗಿ ನಡೆಯುತ್ತಿರುತ್ತದೆ. ಆದರೆ ಮಂಗಳೂರಿನ ಮೂಡಬಿದಿರೆಯಿಂದ ಉತ್ತರ ಪ್ರದೇಶದ ಮೊರದಾಬಾದ್ಗೆ ಸುಮಾರು 2,700 ಕಿಲೋ ಮೀಟರ್ ದೂರದವರೆಗೆ ರೋಗಿಯನ್ನು ಆ್ಯಂಬುಲೆನ್ಸ್ ಮೂಲಕ ಸ್ಥಳಾಂತರ ಮಾಡಿದ್ದು, ಅಪರೂಪದ ಸಾಧನೆ ಆಗಿದೆ.
ಉತ್ತರ ಪ್ರದೇಶದ ಮೊರದಾಬಾದ್ ನಿವಾಸಿಯಾದ ಮಹಾಂದಿ ಹಸನ್ ಎಂಬುವರು ಮೂಡಬಿದಿರೆಯ ಮಾಸ್ತಿಕಟ್ಟೆಯ ಅಡಿಕೆ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುವ ವೇಳೆ ಬಿದ್ದು ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನರಾಗಿ ಮೂಡಬಿದಿರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಕುಟುಂಬ ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ನೆಲೆಸಿದ್ದು, ಆಸ್ಪತ್ರೆ ವೈದ್ಯರ ಒಪ್ಪಿಗೆ ಪಡೆದು ಮೊರದಾಬಾದ್ಗೆ ಸ್ಥಳಾಂತರಿಸಲು ನಿರ್ಧರಿಸಿದ್ದರು.
ಅದರಂತೆ ಶುಕ್ರವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಹೋಗಲು ನಿರ್ಧರಿಸಲಾಗಿತ್ತು. ಮಹಾಂದಿ ಹಸನ್ ಅವರ ತಂದೆ ಮೂಡಬಿದಿರೆಯ ಐರಾವತ ಆಂಬ್ಯುಲೆನ್ಸ್ ಮಾಲೀಕ ಅನಿಲ್ ರೂಬನ್ ಮೆಂಡೋನ್ಸಾ ಅವರನ್ನು ಆಸ್ಪತ್ರೆಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿಸುವಂತೆ ಕೋರಿಕೊಂಡಿದ್ದರು. ಆ್ಯಂಬುಲೆನ್ಸ್ನ ಚಾಲಕ ಅಶ್ವತ್ಥ್ ಶುಕ್ರವಾರ ರೋಗಿಯನ್ನು ವಿಮಾನ ನಿಲ್ದಾಣಕ್ಕೆ ಕೊಂಡೊಯ್ದಿದ್ದರು.
ಈ ವೇಳೆ ವಿಮಾನಯಾನ ಸಂಸ್ಥೆ ವೈದ್ಯರು ಮತ್ತು ದಾದಿಯರಿಲ್ಲದೆ ವಿಮಾನದಲ್ಲಿ ಕೊಂಡೊಯ್ಯಲು ನಿರಾಕರಿಸಿತು. ಬಳಿಕ ರೋಗಿಯನ್ನು ಮೂಡಬಿದಿರೆಯ ಆಸ್ಪತ್ರೆಗೆ ಮತ್ತೆ ದಾಖಲಿಸಲಾಯಿತು. ರೋಗಿ ಮೆಹಂದಿ ಹಸನ್ ತಂದೆ ಬಬ್ಬು ಶನಿವಾರ ಬೆಳಗ್ಗೆ ಅನಿಲ್ ರೂಬನ್ ಮೆಂಡೋನ್ಸಾ ಅವರಿಗೆ ಫೋನ್ ಮಾಡಿ, ಆಂಬ್ಯುಲೆನ್ಸ್ನಲ್ಲಿ ಮೊರದಾಬಾದ್ಗೆ ತಲುಪಿಸಲು ಕೋರಿದ್ದರು. ಬಳಿಕ ಆ್ಯಂಬುಲೆನ್ಸ್ ಮಾಲೀಕ ಅನಿಲ್ ರೂಬನ್ ಮೆಂಡೋನ್ಸಾ ಅವರು ಪೊಲೀಸರಿಗೆ ಮಾಹಿತಿ ನೀಡಿ, ಮೂಡಬಿದಿರೆಯಿಂದ ಮೊರದಾಬಾದ್ಗೆ ರೋಗಿಯ ಹಸ್ತಾಂತರಕ್ಕೆ ಒಪ್ಪಿದ್ದಾರೆ.

ಸೆ.12ರಂದು ಮೊರದಾಬಾದ್ ತಲುಪಿದ ಆ್ಯಂಬುಲೆನ್ಸ್
ಅಶ್ವತ್ಥ್ ಅವರೊಂದಿಗೆ ಅನಿಲ್ ರೂಬನ್ ಮೆಂಡೋನ್ಸಾ ಕುಳಿತು ರೋಗಿ ಮಹಾಂದಿ ಹಸ್ಸನ್ ಅವರನ್ನು ಆ್ಯಂಬುಲೆನ್ಸ್ನಲ್ಲಿ ಕೊಂಡೊಯ್ದರು. ಈ ಸಂದರ್ಭದಲ್ಲಿ ಮಹಾಂದಿ ಹಸನ್ ಅವರ ತಂದೆ ಮತ್ತು ಸ್ನೇಹಿತರು ಜೊತೆಗಿದ್ದರು. ಸೆಪ್ಟೆಂಬರ್ 10ರಂದು ಮೂಡಬಿದಿರೆಯಿಂದ ಹೊರಟ ಆ್ಯಂಬುಲೆನ್ಸ್ ಸೋಮವಾರ ಸೆಪ್ಟೆಂಬರ್ 12ರ ಬೆಳಗ್ಗೆ ಮೊರದಾಬಾದ್ ತಲುಪಿದೆ.

ಗಂಟೆಗೆ 120 ಕೀಲೋ ಮೀಟರ್ ವೇಗದಲ್ಲಿ ಚಾಲನೆ
41 ಗಂಟೆಗಳಲ್ಲಿ ಈ ಆ್ಯಂಬುಲೆನ್ಸ್ ಗುರಿ ಮುಟ್ಟಿದ್ದು, ಹೈವೇಗಳಲ್ಲಿ ಗಂಟೆಗೆ 120 ಕೀಲೋ ಮೀಟರ್ ವೇಗದಲ್ಲಿ ಚಲಿಸಿದೆ. ಈ ಬಗ್ಗೆ ಮಾತನಾಡಿದ ಆ್ಯಂಬುಲೆನ್ಸ್ ಮಾಲೀಕ ಅನಿಲ್ ರೂಬನ್ ಮೆಂಡೋನ್ಸಾ ಅವರು, ಮೂಡಬಿದಿರೆಯಿಂದ ಮೊರದಾಬಾದ್ಗೆ ತಲುಪಿಸುವಂತೆ ಮಹಾಂದಿ ಹಸನ್ ಅವರ ತಂದೆಯ ಒತ್ತಾಯಕ್ಕೆ ಮಣಿದು ಪೊಲೀಸರಿಗೆ ಮಾಹಿತಿ ನೀಡಿದ್ದೆ. ಆಸ್ಪತ್ರೆ ವೈದ್ಯರು ನಿಮ್ಮ ರಿಸ್ಕ್ನಲ್ಲಿ ಕೊಂಡೊಯ್ಯಬಹುದೆಂದು ತಿಳಿಸಿದ್ದರು. ಸುಮಾರು 2,700 ಕಿಲೋ ಮೀಟರ್ ದೂರ ಹೋಗಿ ರೋಗಿಯನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದೇವೆ. ಡೀಸೆಲ್ ಹಾಕಲು ನಿಲ್ಲಿಸಿದ್ದು ಬಿಟ್ಟರೆ ಎಲ್ಲಿಯೂ ವಿಶ್ರಾಂತಿ ಪಡೆಯದೆ ನಿರಂತರವಾಗಿ ಚಲಿಸಿ ಗುರಿ ಮುಟ್ಟಿದ್ದಾರೆ. ಚಾಲಕ ಸೇರಿದಂತೆ ಯಾರು ಊಟ, ತಿಂಡಿಗೂ ವಾಹನವನ್ನು ನಿಲ್ಲಿಸಿಲ್ಲ.

ಚಾಲಕನಿಗೆ ಅಭಿನಂದನೆಗಳ ಮಹಾಪೂರ
ರೋಗಿಗೆ ಮೂರು ಗಂಟೆಗೊಮ್ಮೆ ದ್ರವ ಆಹಾರ ನೀಡಬೇಕಿದ್ದು, ಈ ಸಂದರ್ಭದಲ್ಲಿ ವಾಹನ ಚಾಲಕ ಹತ್ತಿರದಲ್ಲಿ ಸಿಗುವ ಜ್ಯೂಸ್ ಕುಡಿದು ವಾಹನ ಚಾಲನೆಗೆ ಸಜ್ಜಾಗುತ್ತಿದ್ದರು. ನಾವು ಮೊರದಾಬಾದ್ ತಲುಪಿದಾಗ ನೀವು ವೈದ್ಯರಿಲ್ಲದೆ ಇಷ್ಟು ದೂರ ಹೇಗೆ ಬಂದಿದ್ದೀರಿ ಎಂದು ಅಲ್ಲಿನ ವೈದ್ಯರು ಆಶ್ಚರ್ಯ ಚಕಿತರಾದರು. ಈ ರೋಗಿ ಕುಟುಂಬ ಸಂಪರ್ಕದಲ್ಲಿದ್ದು, ಇದೀಗ ಆತನಿಗೆ ಪ್ರಜ್ಞೆ ಬಂದು ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಾನೆ ಎನ್ನುವ ಮಾಹಿತಿ ಸಿಕ್ಕಿದೆ ಎಂದು ಹೇಳಿದರು. ಮಧ್ಯಪ್ರದೇಶದಲ್ಲಿ ಆ್ಯಂಬುಲೆನ್ಸ್ ಹೋಗುತ್ತಿದ್ದ ವೇಳೆ ರೋಗಿಗೆ ಹವಾಮಾನ ಬದಲಾವಣೆಯಿಂದ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿತ್ತು. ಸಣ್ಣ ಮಟ್ಟಿಗೆ ಆರೋಗ್ಯ ಚಿಕಿತ್ಸೆ ಕಲಿತಿದ್ದ ಮೆಂಡೋನ್ಸಾ ಅವರು ಆಕ್ಸಿಜನ್ ಪ್ರಮಾಣ ಹೆಚ್ಚು ಮಾಡಿ ಸರಿಪಡಿಸಿದ್ದರು.

ಮಾರ್ಗದರ್ಶಕನಾಗಿದ್ದ ಆ್ಯಂಬುಲೆನ್ಸ್ ಮಾಲಿಕ
ಚಾಲಕ ಅಶ್ವತ್ಥ್ ಅವರು ವಾಹನ ಚಲಾಯಿಸಿದರೆ, ಅನಿಲ್ ಅವರು ರೋಗಿಯನ್ನು ಉಪಚರಿಸಿ ಗೂಗಲ್ ಮ್ಯಾಪ್ ಮೂಲಕ ರಸ್ತೆಯ ಮಾರ್ಗವನ್ನು ತೋರಿಸುತ್ತಿದ್ದರು. ಒಟ್ಟಿನಲ್ಲಿ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು 2,700 ಕಿಲೋ ಮಿಟರ್ ದೂರಕ್ಕೆ ಸ್ಥಳಾಂತರಿಸುವ ಪ್ರಯತ್ನದಲ್ಲಿ ಯಶಸ್ವಿ ಆಗಿದ್ದಾರೆ. ಮೂಡಬಿದಿರೆಯಿಂದ ಮೊರಾದಾಬಾದ್ಗೆ ಇಂಧನ ವೆಚ್ಚವೇ 49 ಸಾವಿರ ಆಗಿದ್ದು, ರೋಗಿಯ ಕುಟುಂಬ ನೀಡಿದ ಸ್ವಲ್ಪ ಹಣ ಪಡೆದು ಹಿಂದುರುಗಿದ್ದಾರೆ. ಹೀಗೆ ಚಿಕ್ಕ ಆ್ಯಂಬುಲೆನ್ಸ್ನ ಮಹಾಯಾನ ಭಾವೈಕ್ಯತೆಗೂ ಸಾಕ್ಷಿ ಆಗಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಅನಿಲ್ ಎಂಬುವವರ ಅಂಬುಲೆನ್ಸ್ನಲ್ಲಿ ಅಶ್ವತ್ಥ್ ಎಂಬ ಹಿಂದೂ ಡ್ರೈವರ್ ಹಸನ್ ಎಂಬ ಮುಸ್ಲಿಂ ರೋಗಿಯನ್ನು 2,700 ಕೀಲೋ ಮೀಟರ್ ದೂರ ತೆಗೆದುಕೊಂಡು ಹೋಗಿದ್ದು ಭಾವೈಕ್ಯತೆಯನ್ನು ಸಾರಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications