ಆಳ್ವಾಸ್ ನುಡಿಸಿರಿಗೆ ದಿನಗಣನೆ ಆರಂಭ, ಭರದಿಂದ ಸಾಗಿದ ಸಿದ್ಧತೆ
ಮಂಗಳೂರು, ನವೆಂಬರ್. 13:ಕನ್ನಡ ನಾಡು, ನುಡಿ, ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 'ಆಳ್ವಾಸ್ ನುಡಿಸಿರಿ 2018'ಗೆ ದಿನಗಣನೆ ಆರಂಭವಾಗಿದೆ. ನವೆಂಬರ್ 16 ರಿಂದ ಆರಂಭ ಗೊಳ್ಳಲಿರುವ ನುಡಿಸಿರಿ ಸಮ್ಮೇಳನಕ್ಕೆ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಆವರಣದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.
ಮೂರು ದಿನಗಳ ಕಾಲ ನಡೆಯಲಿರುವ ಈ ನುಡಿಸಿರಿ ಸಮ್ಮೇಳನ ಈ ಬಾರಿ 'ಕರ್ನಾಟಕ ದರ್ಶನ- ಬಹುರೂಪಿ ಆಯಾಮಗಳು' ಎಂಬ ಪರಿಕಲ್ಪನೆಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ, ಸಂಶೋಧಕಿ ಡಾ. ಮಲ್ಲಿಕಾ ಎಸ್.ಘಂಟಿ ವಹಿಸಲಿದ್ದಾರೆ. ಸಂಶೋಧಕ ಡಾ.ಷ.ಶೆಟ್ಟರ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಈ ಬಾರಿ ಪ್ರಮುಖವಾಗಿ ಒಟ್ಟು 4 ಗೋಷ್ಠಿಗಳು ನಡೆಯಲಿದ್ದು, 'ರಾಮಾಯಣ:ಸಮಕಾಲೀನ ನೆಲೆಗಳು' ಕುರಿತು ಲಕ್ಷ್ಮೀಶ ತೋಳ್ಪಾಡಿ, 'ಮಹಾಭಾರತ: ಸಮಕಾಲೀನ ನೆಲೆಗಳು' ಕುರಿತು ಉಮಾಕಾಂತ ಭಟ್ಟ ವಿಷಯ ಮಂಡಿಸಲಿದ್ದಾರೆ.
ಎರಡನೇ ಗೋಷ್ಠಿಯಲ್ಲಿ 'ವಚನ' ಕುರಿತು ಡಾ. ವಿಜಯ ಕುಮಾರ ಎಸ್. ಕಟಗಿಹಳ್ಳಿಮಠ, 'ಕೀರ್ತನ' ಕುರಿತು ಡಾ.ಎಚ್.ಎನ್.ಮುರಳೀಧರ, 'ಸೂಫಿ' ಕುರಿತು ರಂಜಾನ್ ದರ್ಗಾ, 'ತತ್ತ್ವಪದ' ಕುರಿತು ಡಾ.ಬಸವರಾಜ ಸಬರದ ವಿಷಯ ಮಂಡಿಸಲಿದ್ದಾರೆ.
ಮೂರನೆಯ ಗೋಷ್ಠಿಯಲ್ಲಿ 'ಶಿಕ್ಷಣ ಮತ್ತು ಸಾಮರಸ್ಯ'ದ ಕುರಿತು ಬಿ.ಗಣಪತಿ ಹಾಗೂ ನಾಲ್ಕನೆಯ ಗೋಷ್ಠಿಯಲ್ಲಿ 'ಜನಪದ ಸಾಹಿತ್ಯ'ದ ಕುರಿತು ಡಾ. ಪಿ.ಕೆ.ರಾಜಶೇಖರ, 'ಜನಪದ ಆರಾಧನೆ'ಯ ಕುರಿತು ಡಾ.ಅಂಬಳಿಕೆ ಹಿರಿಯಣ್ಣ ಹಾಗೂ 'ಜನಪದ ಕಲಾ ಪರಂಪರೆ'ಯ ಕುರಿತು ಡಾ.ಡಿ.ಬಿ.ನಾಯಕ ವಿಚಾರ ಮಂಡಿಸಲಿದ್ದಾರೆ.

ವಿವಿಧ ವಿಷಯಗಳ ಕುರಿತು ವಿಚಾರ ಮಂಡನೆ
ಸಮ್ಮೇಳನದಲ್ಲಿ ಈ ಬಾರಿ ಒಟ್ಟು 8 ವಿಶೇಷೋಪನ್ಯಾಸಗಳು ನಡೆಯಲಿವೆ. ಕನ್ನಡ ಪದ ಸೃಷ್ಟಿ ಸ್ವೀಕರಣ ಮತ್ತು ಬಳಕೆ ಕುರಿತು ಪ್ರೊ.ಎಂ.ಕೃಷ್ಣೇ ಗೌಡ, ಇತ್ತೀಚಿನ ಮಹತ್ವದ ಪ್ರಕಟಣೆಗಳ ಕುರಿತು ರಘುನಾಥ ಚ.ಹ, ಅಖಂಡ ಕರ್ನಾಟಕದ ಕುರಿತು ವೈ.ಎಸ್.ವಿ.ದತ್ತ, ಸಮಾಜಾಭಿವೃದ್ಧಿಯಲ್ಲಿ ವ್ಯಕ್ತಿ ಹೊಣೆಗಾರಿಕೆ ಕುರಿತು ಪ್ರೊ.ಜಿ.ಬಿ.ಶಿವರಾಜ್, ಜೀವನ ಪದ್ಧತಿಯ ಆತಂಕದ ನೆಲೆಗಳು ಕುರಿತು ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ, ಸಮಕಾಲೀನ ಸಂದರ್ಭ: ಮಹಿಳಾ ಬಿಕ್ಕಟ್ಟುಗಳು ಕುರಿತು ಡಾ.ಎಂ.ಉಷಾ, ಸಾಮಾಜಿಕ ಜಾಲತಾಣ ಕುರಿತು ರೋಹಿತ್ ಚಕ್ರತೀರ್ಥ ಹಾಗೂ ಐಟಿಯಿಂದ ಮೇಟಿಗೆ ಕುರಿತು ವಸಂತ ಕಜೆ ವಿಚಾರಗಳನ್ನು ಮಂಡಿಸಲಿದ್ದಾರೆ.

ನುಡಿ ನಮನ ಸಲ್ಲಿಕೆ
ಕನ್ನಡ ನಾಡು -ನುಡಿ-ಸಂಸ್ಕೃತಿಗಾಗಿ ಸೇವೆ ಸಲ್ಲಿಸಿ ವರ್ತಮಾನದಲ್ಲಿ ನಮ್ಮೊಂದಿಗೆ ಇಲ್ಲದ ವಿದ್ವಾಂಸರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮದಲ್ಲಿ ವಿದ್ವಾಂಸ ಡಾ. ಪ್ರಭುಶಂಕರ ಅವರ ಕುರಿತು ಡಾ. ಎನ್.ಎಸ್.ತಾರಾನಾಥ, ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜ ಅವರ ಕುರಿತು ಡಾ.ಜಿ.ಎಂ.ಹೆಗಡೆ ಹಾಗೂ ಕವಿ ಡಾ. ಸುಮತೀಂದ್ರ ನಾಡಿಗರ ಕುರಿತು ಮಹಾಬಲಮೂರ್ತಿ ಕೊಡ್ಲಕೆರೆ ನುಡಿನಮನ ಸಲ್ಲಿಸಲಿದ್ದಾರೆ.

ಮಾತಿನ ಗೌರವಾರ್ಪಣೆ
ಕನ್ನಡದ ಖ್ಯಾತ ತತ್ತ್ವಪದಗಾರರೂ ಸೂಫಿ ಸಂತರೂ ಆಗಿರುವ ಸಂತ ಶಿಶುನಾಳ ಶರೀಫರ ಇನ್ನೂರನೆಯ ವರ್ಷಾಚರಣೆಯ ವರ್ಷದ ಹಿನ್ನೆಲೆಯಲ್ಲಿ ನಾಡೋಜ ಡಾ.ಮಹೇಶ್ ಜೋಶಿಯವರು ಸಂತ ಶಿಶುನಾಳ ಶರೀಫರ ಕುರಿತು ಮಾತಿನ ಗೌರವಾರ್ಪಣೆ ನಡೆಸಿಕೊಡಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ
ರತ್ನಾಕರವರ್ಣಿ ವೇದಿಕೆ, ಸಂತ ಶಿಶುನಾಳ ಶರೀಫ ಸಭಾಂಗಣ, ಕು.ಶಿ.ಹರಿದಾಸ ಭಟ್ಟ ವೇದಿಕೆ ಮತ್ತು ಕಮಲಾದೇವಿ ಚಟ್ಟೋಪಾಧ್ಯಾಯ ವೇದಿಕೆಗಳಲ್ಲಿ ಮುಸ್ಸಂಜೆಯಿಂದ ತಡರಾತ್ರಿಯವರೆಗೆ ಹಾಗೂ ಡಾ.ವಿ.ಎಸ್.ಆಚಾರ್ಯ ಸಭಾಭವನದ ಮಿಜಾರುಗುತ್ತು ಭಗವಾನ್ ಶೆಟ್ಟಿ ವೇದಿಕೆ, ಕೆ.ವಿ.ಸುಬ್ಬಣ್ಣ ಬಯಲುರಂಗ ಮಂದಿರ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಕೃಷಿ ಆವರಣದ ಆನಂದ ಬೋಳಾರ್ ವೇದಿಕೆಗಳಲ್ಲಿ ಹಗಲು ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications