ಮೂಡುಬಿದಿರೆ-ಮಂಗಳೂರು ಚತುಷ್ಪಥ: ನ್ಯಾಯಯುತ ದರ ಸಿಗದೆ ಭೂಮಿ ಕೊಡಲ್ಲವೆಂದ ಭೂಮಾಲೀಕರು
ಮಂಗಳೂರು, ಫೆಬ್ರವರಿ 11: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ-169 ಚತುಷ್ಪಥಕ್ಕೆ ಪೂರ್ವ ಭೂಸ್ವಾಧೀನ ಮಾಡುವುದಕ್ಕೆ ಮಾಡಿರುವ ಅಂತಿಮ ಅವಾರ್ಡ್ನಲ್ಲಿ ಮಾರುಕಟ್ಟೆ ದರದಲ್ಲಿ ನ್ಯಾಯಯುತ ಪರಿಹಾರ ದೊರಕಿಲ್ಲ.
ಇದನ್ನು ಸರಿಪಡಿಸದಿದ್ದರೆ ಜಮೀನು ಬಿಟ್ಟು ಕೊಡುವುದಿಲ್ಲ. ಹೆದ್ದಾರಿ ಪ್ರಾಧಿಕಾರದ ಧೋರಣೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧ ಎಂದು ಯೋಜನೆಯ ಭೂಮಾಲೀಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಹೇಳಿದರು.
ತಮಗಾಗುವ ಅನ್ಯಾಯ ಬಗ್ಗೆ ಈಗಾಗಲೇ ಸಮಿತಿ ಸಭೆ ನಡೆಸಲಾಗಿದೆ. ಫೆ.12ರಂದು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಭೇಟಿ ಮಾಡಲಿದ್ದೇವೆ. ಫೆ.22 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಬಳಿಗೆ ನಿಯೋಗ ಹೋಗುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ಅವರು ತಿಳಿಸಿದರು.

ಜಿಲ್ಲಾಧಿಕಾರಿಯವರು 2020ರ ಡಿ.29 ರಂದು ಬೆಂಗಳೂರಿನಲ್ಲಿರುವ ಎನ್ಎಚ್ಎಐ ಪ್ರಾದೇಶಿಕ ವ್ಯವಸ್ಥಾಪಕರಿಗೆ ಪತ್ರ ಬರೆದು ತಾವು ಸೂಚಿಸಿರುವಂತೆ ಭೂ ದರ ನಿಗದಿಪಡಿಸದಿದ್ದರೆ ಭೂಮಾಲೀಕರಿಗೆ ಹೆಚ್ಚಿನ ನಷ್ಟವಾಗಲಿದೆ. ಹಾಗಾಗಿ ನ್ಯಾಯಯುತ ದರ ಕಾಯಿದೆ 2013ರ ಕಲಂ 26ರಡಿ ಮಾರುಕಟ್ಟೆ ದರ ನಿಗದಿಪಡಿಸಲು ಸೂಚಿಸಿದ್ದರು.
ಆದರೆ ಬೆಂಗಳೂರಿನ ಅಧಿಕಾರಿ 20 ಸೆಂಟ್ಸ್ ಒಳಗಿನ ಜಮೀನಿಗೆ ಮಾರುಕಟ್ಟೆ ದರ ಒಳಪಡಿಸಬಾರದು ಎಂದು ಜನವರಿಯಲ್ಲಿ ಪತ್ರ ಬರೆದಿದ್ದಾರೆ. ಈಗಾಗಲೇ 1894 ರದ್ದುಪಡಿಸಿ ನ್ಯಾಯಯುತ ದರ ಕಾಯ್ದೆ 2013 ಜಾರಿಗೆ ಬಂದಿರುವುದರಿಂದ ಸಿವಿಸಿ ನಿರ್ದೇಶನ ಅಪ್ರಸ್ತುತವಾಗಲಿದೆ.
ಜಿಲ್ಲಾಧಿಕಾರಿ ನಿರ್ದೇಶನ ಬರುವುದಕ್ಕೆ ಮೊದಲೇ ವಿಶೇಷ ಭೂಸ್ವಾಧೀನಾಧಿಕಾರಿ ಗ್ರಾಮಗಳ ಭೂಮೌಲ್ಯವನ್ನು ಅತಿ ಕಡಿಮೆ ದರ ನಿಗದಿಪಡಿಸಿ ಅವಾರ್ಡ್ ಆದೇಶವನ್ನು ಯೋಜನಾ ನಿರ್ದೇಶಕರಿಗೆ ಸಲ್ಲಿಸಿರುವುದು ತಿಳಿದುಬಂದಿದೆ. ಆದರೆ ಪ್ರಾಧಿಕಾರದವರಿಗೆ ವಿಶೇಷ ಭೂಸ್ವಾಧೀನಾಧಿಕಾರಿಯವರ ಅವಾರ್ಡ್ ರಚನೆ ವಿಚಾರದಲ್ಲಿ ನಿರ್ದೇಶನ ನೀಡಲು ಅಧಿಕಾರವಿಲ್ಲ ಎಂದರು. ಸಮಿತಿ ಸಂಚಾಲಕ ಪ್ರಕಾಶ್ಚಂದ್ರ, ಕಾರ್ಯದರ್ಶಿ ವಿಶ್ವಜಿತ್, ಬೃಜೇಶ್ ಶೆಟ್ಟಿ ಮಿಜಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications