ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ ಉಮಾನಾಥ್ ಕೋಟ್ಯಾನ್, ವಿಡಿಯೋ ವೈರಲ್

ಮಂಗಳೂರು ಜುಲೈ 2: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ತೋರುತ್ತಿದ್ದ ಮೂಡಬಿದಿರೆ ನಾಡಕಚೇರಿಯ ಅಧಿಕಾರಿಗಳನ್ನು ಮುಲ್ಕಿ -ಮೂಡಬಿದರೆ ಶಾಸಕ ಉಮಾನಾಥ ಕೋಟ್ಯಾನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾರ್ವಜನಿಕರ ಕುಂದು ಕೊರತೆ ನೀಗಿಸಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿನ್ನೆ ಸೋಮವಾರ ಏಕಾಏಕಿ ನಾಡಕಚೇರಿಗೆ ತೆರಳಿದ್ದಾರೆ. ಈ ವೇಳೆ ಜನರು ಸರತಿ ಸಾಲಿನಲ್ಲಿ ನಿಂತದ್ದನ್ನು ಕಂಡ ಶಾಸಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದರು. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ. ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತರೂ ಅವರ ಸಮಸ್ಯೆ ಕೇಳುವವರಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Moodbidre MLA warns officials against negligence

ಸವಲತ್ತುಗಳಿಗಾಗಿ ಅವರು ನಿಮ್ಮಲ್ಲಿ ಗೋಗರೆಯಬೇಕೇ? ಅಧಿಕಾರಿಗಳು ಯಾವಾಗಲೂ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಇನ್ನು ಮೇಲೆ ಕೆಲಸದ ವೇಳೆ ಯಾರಾದರೂ ಮೊಬೈಲ್ ಬಳಸುತ್ತಿರುವುದು ಕಂಡಲ್ಲಿ ಅವರನ್ನು ನೋಡಿಕೊಳ್ಳುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+