ಕನ್ನಡ ನಾಡು-ನುಡಿ-ಸಂಸ್ಕೃತಿಯ ಮೇರು ಹಬ್ಬ ಆಳ್ವಾಸ್ ನುಡಿಸಿರಿ
ಮೂಡುಬಿದಿರೆ, ನವೆಂಬರ್, 06 : ನಮ್ಮ ನಾಡಿನ ಮೇರು ಕಲಾಪ್ರಕಾರಗಳಾದ ಯಕ್ಷಗಾನ, ಭರತನಾಟ್ಯ, ಹಿಂದೂಸ್ತಾನಿ-ಕರ್ನಾಟಕ-ಸುಗಮ ಸಂಗೀತ, ಸಾಹಿತ್ಯದ ಸೊಗಡು ಈ ಎಲ್ಲವನ್ನು ಒಂದೇ ವೇದಿಕೆಯಲ್ಲಿ ಕಾಣುವ ಸಾಂಸ್ಕೃತಿಕ ವೈಭವಕ್ಕೊಂದು ಪರ್ಯಾಯ ಹೆಸರು 'ಆಳ್ವಾಸ್ ನುಡಿಸಿರಿ' ನವೆಂಬರ್ ನಲ್ಲಿ ಆಯೋಜನೆಗೊಂಡಿದೆ.
ಕನ್ನಡ ನಾಡು-ನುಡಿ-ಸಂಸ್ಕೃತಿಯ ದ್ಯೋತಕವಾದ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ 'ಆಳ್ವಾಸ್ ನುಡಿಸಿರಿ-2015' ನವೆಂಬರ್ 26 ರಿಂದ 29ರ ವರೆಗೆ ಮೂಡುಬಿದಿರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ವಿಜೃಂಭಣೆಯಿಂದ ಜರುಗಲಿದೆ.
ಸಾಂಸ್ಕೃತಿಕ ವೈಭವದ ಆಳ್ವಾಸ್ ನುಡಿಸಿರಿ ಉದ್ಘಾಟನೆ ನವೆಂಬರ್ 26ರ ಗುರುವಾರದಂದು ನಡೆಯಲಿದೆ. ಉಳಿದಂತೆ 27,28,29ರಂದು 'ಕರ್ನಾಟಕ: ಹೊಸತನದ ಹುಡುಕಾಟ' ಎನ್ನುವ ಪ್ರಧಾನ ಪರಿಕಲ್ಪನೆಯಲ್ಲಿ ವಿವಿಧ ಗೋಷ್ಠಿಗಳು, ಸಂಸ್ಮರಣೆ, ಕವಿಸಮಯ-ಕವಿನಮನ, ವಿಶೇಷ ಉಪನ್ಯಾಸಗಳು ರತ್ನಾಕರವರ್ಣಿ ವೇದಿಕೆಯಲ್ಲಿ ಜರುಗಲಿದೆ. 29 ರಂದು 3 ಗಂಟೆಗೆ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ.[ವಿಶ್ವ ನುಡಿಸಿರಿ : ಡಾ. ಮೋಹನ್ ಆಳ್ವ ಸಂದರ್ಶನ]

ಆಳ್ವಾಸ್ ನುಡಿಸಿರಿ-2015ರ ಅಧ್ಯಕ್ಷರು : ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ
ರಾಮನಗರ ಜಿಲ್ಲೆಯ ಕನಕಪುರದಲ್ಲಿ ಜನಿಸಿದ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀಯವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾದ ಇವರು, ರೀಡರ್, ಪ್ರೊಫೆಸರ್, ವಿಭಾಗ ನಿರ್ದೇಶಕ, ಕಲಾವಿಭಾಗದ ಡೀನ್ ಆಗಿ ಸುಮಾರು 40 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಿರಿಯ ಪ್ರಾಧ್ಯಾಪಕರು ಹಾಗೂ ಈ ಶತಮಾನದ ಹಿರಿಯ ವಿದ್ವಾಂಸರು ಕೂಡ ಹೌದು.
ಹಳೆಗನ್ನಡ ಸಾಹಿತ್ಯ, ವ್ಯಾಕರಣ, ಛಂದಸ್ಸು, ಅಲಂಕಾರ ಶಾಸ್ತ್ರ, ಸಾಹಿತ್ಯ ಚರಿತ್ರೆ, ಗ್ರಂಥ ಸಂಪಾದನೆ, ನಿಘಂಟು ಶಾಸ್ತ್ರ, ಹಸ್ತಪ್ರತಿ ಶಾಸ್ತ್ರಗಳಲ್ಲಿ ಮೇರು ಪಾಂಡಿತ್ಯ ಪಡೆದುಕೊಂಡಿದ್ದಾರೆ. ಕನ್ನಡ ಸಂಶೋಧನಾ ಕ್ಷೇತ್ರದ ಗಣ್ಯ ಹಾಗೂ ಚಿರಸ್ಮರಣೀಯ ಹೆಸರುಗಳಲ್ಲಿ ವೆಂಕಟಾಚಲ ಶಾಸ್ತ್ರಿಯವರ ಹೆಸರು ಅಗ್ರಗಣ್ಯವಾಗಿದೆ.
ಆಳ್ವಾಸ್ ನುಡಿಸಿರಿ 2015ರ ಉದ್ಘಾಟಕರಾಗಿ ಡಾ.ವೀಣಾ ಶಾಂತೇಶ್ವರ
ಡಾ.ವೀಣಾ ಶಾಂತೇಶ್ವರ ಅವರು ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕಿಯಾಗಿ 39 ವರ್ಷಗಳ ಸುದೀರ್ಘ ಕಾಲ ಕಾರ್ಯನಿರ್ವಹಿಸಿದ್ದಾರೆ. ಒಂಬತ್ತು ವರ್ಷಗಳ ಕಾಲ ಪ್ರಾಚಾರ್ಯರಾಗಿದ್ದರು. ಕಥೆ, ಕಾದಂಬರಿ, ಅನುವಾದ ಹೀಗೆ ಸಾಹಿತ್ಯದ ವಿಭಿನ್ನ ವಲಯದಲ್ಲಿ ತಮ್ಮನ್ನು ಗುರುತಿಸಿಕೊಂಡ ಇವರು ಉತ್ತಮ ಸಂಘಟಕರು ಹಾಗೂ ಆಡಳಿತಗಾರರು ಹೌದು. ಮುಖ್ಯವಾಗಿ ಸ್ತ್ರೀ ಸಂವೇದನಾಶೀಲ ಬರಹಗಾರರಲ್ಲಿ ಇವರು ಕೂಡ ಮುಖ್ಯ ವೇದಿಕೆಯಲ್ಲಿದ್ದಾರೆ.
ನುಡಿಸಿರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಾತ್ರ ನಾಲ್ಕು ದಿನಗಳ ಕಾಲ ಉಚಿತ ಊಟೋಪಚಾರ, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಉಳಿದವರು 100 ರೂ ಶುಲ್ಕ ಪಾವತಿಸಬೇಕಾಗುತ್ತದೆ. ನಾಡಿನ ಪ್ರಸಿದ್ಧ ಸಾಹಿತಿ, ವಿದ್ವಾಂಸರು, ಕವಿಗಳು ಸೇರಿದಂತೆ ಸುಮಾರು 20,000ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಡಾ. ಪದ್ಮನಾಭ್ ಶೆಣೈ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, [email protected]/ 8971161797
ಡಾ. ಮೌಲ್ಯ ಜೀವನ್ ರಾಮ್, ಮುಖ್ಯಸ್ಥರು, ಸಮೂಹ ಸಂವಹನ ವಿಭಾಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ - 9480341338
ಶ್ರೀನಿವಾಸ್ ಪೆಜಥಯ್ಯಾ, ಸಹ ಪ್ರಾಧ್ಯಾಪಕರು, ಸಮೂಹ ಸಂವಹನ ವಿಭಾಗ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ - 9743703596
ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದಿದ್ದರೆ ನಿಮ್ಮ ಮಾಹಿತಿಗಳನ್ನು [email protected] ಮತ್ತು www.alvasnudisiri.com ಕಳುಹಿಸಿ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications