14 ನೇ ಆಳ್ವಾಸ್ ನುಡಿಸಿರಿ ಸಮ್ಮೇಳನಕ್ಕೆ ಸಿದ್ದಗೊಂಡ ಮೂಡಬಿದ್ರೆ
ಮಂಗಳೂರು, ನವೆಂಬರ್ 30: ಜೈನ ಕಾಶಿ ಮೂಡಬಿದ್ರೆಯಲ್ಲಿ ಆಳ್ವಾಸ್ ನುಡಿಸಿರಿಯ ಕಂಪು ಹರಡಲು ಕ್ಷಣಗಣನೆ ಆರಂಭವಾಗಿದೆ. 14 ನೇ ವರ್ಷದ 'ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಸಮ್ಮೇಳನ' ಶುಕ್ರವಾರದಿಂದ ಆರಂಭಗೊಳ್ಳಲಿದೆ. 3 ದಿನಗಳ ಕಾಲ ನಡೆಯುವ ಈ ಆಳ್ವಾಸ್ ನುಡಿಸಿರಿ ಸಮ್ಮೇಳನ ಈ ಭಾರಿ ಹಲವು ವಿಶೇಷತೆಗಳನ್ನು ಹೊಂದಿದೆ.
ಕನ್ನಡ ನಾಡು, ನುಡಿ, ಜಲ ಕುರಿತ ಗಂಭೀರ ಚಿಂತನೆಗೆ ವೇದಿಕೆಯಾಗುವ ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ವೈಭವ ಡಿಸೆಂಬರ್ 1ರಿಂದ ಡಿಸೆಂಬರ್ 3 ರವರೆಗೆ ನಡೆಯಲಿದೆ. ನುಡಿಸಿರಿಯು ಕಲೆ ಮತ್ತು ಸಾಹಿತ್ಯಾಸಕ್ತರಿಗೆ ಸಂಸ್ಕೃತಿಯ ರಸದೌತಣ ಉಣಬಡಿಸಲಿದೆ.
ಲಕ್ಷಾಂತಕ ಕಲಾಸಕ್ತರ ಸಮಾಗಮಕ್ಕೆ ಮೂಡಬಿದ್ರೆ ವೇದಿಕೆಯಾಗಲಿದ್ದು, 14 ನೇ ವರ್ಷದ ಆಳ್ವಾಸ್ ನುಡಿಸಿರಿಯನ್ನು ಖ್ಯಾತ ವಿಮರ್ಶಕ ಡಾ. ಸಿ. ಎನ್. ರಾಮಚಂದ್ರನ್ ಉದ್ಘಾಟಿಸಲಿದ್ದಾರೆ.

ನುಡಿಸಿರಿ ಸರ್ವಧ್ಯಕ್ಷ ನಾಗತಿಹಳ್ಳಿ
ನುಡಿಸಿರಿಯ ಸರ್ವಧ್ಯಕ್ಷತೆಯನ್ನು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಹಿಸಲಿದ್ದಾರೆ. 'ಕರ್ನಾಟಕ ಬಹುತ್ವದ ನೆಲೆಗಳು' ಎಂಬ ಪ್ರಧಾನ ಪರಿಕಲ್ಪನೆಯಡಿ 3 ದಿನಗಳ ಕಾಲ ವಿಚಾರಗೋಷ್ಠಿಗಳು ನಡೆಯಲಿವೆ. 12 ವೇದಿಕೆಗಳಲ್ಲಿ ಕನ್ನಡ ನಾಡು, ನುಡಿ, ಜಲದ ಕುರಿತು ಒಂದೆಡೆ ಗಂಭೀರ ಚರ್ಚೆ ನಡೆದರೆ ಮತ್ತೊಂದೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ಕಲಾಸಕ್ತರ ಮನ ತಣಿಸಲಿದೆ.

ಕೃಷಿ ಸಿರಿ ಹೈಲೈಟ್
ಈ ಬಾರಿಯ ಆಳ್ವಾಸ್ ನುಡಿಸಿರಿ ಸಮ್ಮೇಳನದಲ್ಲಿ 15 ಮಂದಿ ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಆಳ್ವಾಸ್ ನುಡಿಸಿರಿಯಲ್ಲಿ ಆಳ್ವಾಸ್ ಕೃಷಿಸಿರಿ ಸಮ್ಮೇಳನ ನಡೆಯಲಿದ್ದು 3 ದಿನಗಳ ಕಾಲವೂ ಕೃಷಿಕರಿಗೆ ಮಾಹಿತಿ ಮತ್ತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಗುರುವಾರ ಸಂಜೆ ಕೃಷಿಸಿರಿ ಸಮೇಳನಕ್ಕೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಚಾಲನೆ ನೀಡಲಿದ್ದಾರೆ. ಜಾನುವಾರು ಪ್ರದರ್ಶನ, ಫಲಪುಷ್ಟ ಪ್ರದರ್ಶನ, ಅತೀ ವಿರಳ ಸಮುದ್ರ ಚಿಪ್ಪುಗಳ ಪ್ರದರ್ಶನ ಸೇರಿದಂತೆ ಕುತೂಹಲಕಾರಿ ಸಂಗತಿಗಳಿಗೆ ಕೃಷಿಸಿರಿಯು ವೇದಿಕೆಯಾಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಸುಗ್ಗಿ
ಆಳ್ವಾಸ್ ನುಡಿಸಿರಿಯ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ಕೂಡಾ ನಡೆಯಲಿದ್ದು 5 ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕನ್ನಡದ ಕಲರವ ಕಾಣಲಿದ್ದು ಈ ಭಾರಿ ವಿಶೇಷವಾಗಿ ದೇಸಿ ಕ್ರೀಡೆಗಳಿಗೂ ಆದ್ಯತೆ ನೀಡಲಾಗಿದೆ.

ಕೋಣಗಳ ಸೌಂದರ್ಯ ಸ್ಪರ್ಧೆ
ತುಳುನಾಡಿನ ಜನಪದ ಕ್ರೀಡೆ ಕಂಬಳದ ಓಟದ ಕೋಣಗಳ ಸೌಂದರ್ಯ ಸ್ಪರ್ಧೆ ಕೂಡ ಏರ್ಪಡಿಸಲಾಗಿದೆ . ವಿಜೇತ ಕೋಣಗಳಿಗೆ ಪ್ರಥಮ 50 ಸಾವಿರ, ದ್ವಿತೀಯ 30 ಸಾವಿರ ಮತ್ತು ತೃತೀಯ 20 ರೂಪಾಯಿ ಬಹುಮಾನ ಘೋಷಿಸಲಾಗಿದೆ. ಕೋಣ ಓಡಿಸುವವರ ಸೌಂದರ್ಯ ಸ್ಪರ್ಧೆ ಕೂಡ ನಡೆಯುತ್ತಿದ್ದು ಅದರಲ್ಲಿ ಪ್ರಥಮ 20 ಸಾವಿರ ರೂಪಾಯಿ ಮತ್ತು ದ್ವಿತೀಯ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ.

ಶ್ರೀಮಂತ ಸಂಸ್ಕೃತಿಯ ಅನಾವರಣ
ಒಂದೆಡೆ ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕೀಯ ಮೇಲಾಟಗಳಿಗೆ ವೇದಿಕೆಯಾಗಿ ವಿವಾದಗಳ ಸುಳಿಯಲ್ಲಿ ಸಿಲುಕಿದೆ. ಇತ್ತ ಜೈನ ಕಾಶಿ ಮೂಡಬಿದ್ರೆಯಲ್ಲಿ ಸಾಂಸ್ಕೃತಿಕ ಉತ್ಸವಕ್ಕೆ ಸಿದ್ದತೆಗಳು ಜೋರಾಗಿವೆ. ಸಾಹಿತ್ಯಾಸಕ್ತರಿಗೆ ದಾಹವನ್ನು ಆಳ್ವಾಸ್ ನುಡಿಸಿರಿ ತಣಿಸಲಿದ್ದು ಕನ್ನಡದ ಶ್ರೀಮಂತ ಸಂಸ್ಕೃತಿಯ ಅನಾವರಣ ನಡೆಯಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications