Get Updates
Get notified of breaking news, exclusive insights, and must-see stories!

ಮಂಗಳೂರಿನಲ್ಲಿ ನೈತಿಕ ಪೊಲೀಸ್ ​ಗಿರಿ: ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರಿನ ನೋಟಿಸ್

ಮಂಗಳೂರು: ಮಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ಬಾಲು ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

Moral policing Case: Exile notice for 3 Bajrang Dal workers in Mangaluru

ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್​ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಇದೀಗ ಈ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು? ಎಂದು ಕಾರಣ ಕೇಳಿ ನೋಟಿಸ್​ ನೀಡಿದೆ. ಇಂದು ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾ‌ನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.

ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡಿಪಾರು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್​ಗಳಿಂದ ಗಡಿಪಾರಿಗೆ ವರದಿಯನ್ನು ಕೇಳಲಾಗಿದೆ. ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾತನಾಡಿ, ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನುವುದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಲಾಗಿದೆ ಎಂದರು.

ನೈತಿಕ ಪೊಲೀಸ್‌ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನು ಗಡಿಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟಿಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ. ರೌಡಿಶೀಟ್ ತೆರೆಯೋದು ಅಥವಾ ಗೂಂಡಾ ಕಾಯ್ದೆ ಹಾಕುವ ಕೆಲಸವೂ ಆಗುತ್ತಿದೆ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುವರನ್ನು ಗುರುತಿಸಿದ್ದೇವೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+