ಸಜಿಪನಾಡಲ್ಲಿ ಎಚ್1 ಎನ್1 ಸೋಂಕಿಗೆ ಯುವತಿ ಬಲಿ, 2 ವಾರದಲ್ಲಿ ಮನೆಯ 4 ಮಂದಿ ಸಾವು!
ಮಂಗಳೂರು, ಅಕ್ಟೋಬರ್. 16: ಬಂಟ್ವಾಳದ ಸಜಿಪನಾಡು ಯುವತಿಯೊಬ್ಬಳು ಶಂಕಿತ ಎಚ್1 ಎನ್1 ಸೋಂಕು ಬಾಧಿಸಿ ಮೃತಪಟ್ಟಿರುವ ಘಟನೆ ನಡೆದಿದೆ.
ತಾಯಿ ಮತ್ತು ಮಗಳು ಇಬ್ಬರೂ ಈ ಶಂಕಿತ ಎಚ್1 ಎನ್ 1 ಸೋಂಕಿಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಸಜಿಪನಾಡು ಗ್ರಾಮಸ್ಥರು ತೀವ್ರ ಆತಂಕಕ್ಕೀಡಾಗಿದ್ದಾರೆ.
ಮೃತ ಯುವತಿ ಝರೀನಾ (22) ತೀವ್ರ ಜ್ವರದಿಂದ ನರಳುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ (ಅ.16) ಮೃತಪಟ್ಟಿದ್ದಾಳೆ. ಝಬೀನಾ ಅವರ ತಾಯಿ ಅವ್ವಮ್ಮ ಅಕ್ಟೋಬರ್ 10 ರಂದು ಶಂಕಿತ ಎಚ್1ಎನ್1 ಸೊಂಕಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ಅವ್ವಮ್ಮ ಶಂಕಿತ ಎಚ್1ಎನ್1 ಸೊಂಕಿನಿಂದ ಮೃತಪಟ್ಟಿರುವುದಾಗಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಅವ್ವಮ್ಮ ಅವರ ಮಗಳು ಝುಬೀನಾ ಕೂಡಾ ಎಚ್1ಎನ್1 ಬಾಧಿತರಾಗಿದ್ದರೆಂದು ಈಗ ಶಂಕಿಸಲಾಗಿದ್ದು, ಅವರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಸಜಿಪನಡು ಗ್ರಾಮದ ಮತ್ತೋರ್ವ ವ್ಯಕ್ತಿ ಕೂಡ ತೀವ್ರ ಜ್ವರದಿಂದ ಬಳಲುತ್ತಿದ್ದು, ಅವರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ವೈದ್ಯಕೀಯ ವರದಿ ಇನ್ನಷ್ಟೇ ಬರಬೇಕಿದೆ.
ಕಳೆದ ಏಳೆಂಟು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಝರೀನಾ ಅವರ ಮನೆಯ ಯಜಮಾನ ಮಯ್ಯದ್ದಿ ಅಕ್ಟೋಬರ್ 1ರಂದು ಮನೆಯಲ್ಲಿ ಮೃತಪಟ್ಟಿದ್ದರು.
ಈ ಮೊದಲು ಝರೀನಾ ನವಜಾತ ಶಿಶು ಕೂಡ ಅಕ್ಟೋಬರ್ 4ರಂದು ಕೊನೆಯುಸಿರೆಳೆದಿತ್ತು. ಎಚ್1ಎನ್1 ಬಾಧಿತ ಅವ್ವಮ್ಮ ಅವರು ಕೂಡ ಅಕ್ಟೋಬರ್ 10ರಂದು ಮೃತಪಟ್ಟಿದ್ದರು. ಎರಡು ವಾರದಲ್ಲಿ ಮನೆಯ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಇಡೀ ಕುಟುಂಬವೇ ತಲ್ಲಣಗೊಂಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications