ವಿಧವೆ ಸೊಸೆಗೆ ಮರುಮದುವೆ ಮಾಡಿಸಿ ಮಾದರಿಯಾದ ಸುಳ್ಯದ ಮಹಿಳೆ
ಮಂಗಳೂರು, ಜುಲೈ 16: ನಿಮ್ಮ ಮನೆಗೆ ಬರುವ ಸೊಸೆಯನ್ನು ಸ್ವಂತ ಮಗಳಂತೆ ನೋಡಿಕೊಳ್ಳಿ ಎಂದು ಮದುವೆ ಸಂದರ್ಭ ಗಂಡಿನ ಕಡೆಯ ಪೋಷಕರಿಗೆ ಹೆಣ್ಣುಮಕ್ಕಳ ತಂದೆ- ತಾಯಿ ವಿನಂತಿ ಮಾಡುವುದು ಉಂಟು. ಈ ಮನವಿಗೆ ಅದೆಷ್ಟು ಮಂದಿ ಸ್ಪಂದಿಸುತ್ತಾರೋ ಗೊತ್ತಿಲ್ಲ. ಆದರೆ ಈ ವಿಚಾರದಲ್ಲಿ ಇತರರಿಗೆ ಮಾದರಿ ಎನಿಸುವಂತೆ ನಡೆದುಕೊಂಡಿರುವ ಮಹಿಳೆ (ಅತ್ತೆ)ಯೊಬ್ಬರ ಬಗ್ಗೆ ವರದಿ ಇಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಹಿಳೆಯೊಬ್ಬರು ತನ್ನ ವಿಧವೆ ಸೊಸೆಗೆ ಮರು ಮದುವೆ ಮಾಡಿಸುವ ಮೂಲಕ ಮಾದರಿಯಾಗಿದ್ದಾರೆ. ಸುಳ್ಯ ತಾಲ್ಲೂಕಿನ ಕಳಂಜ ಗ್ರಾಮದ ಗೋಪಾಲಕಜೆ ನಿವಾಸಿ ಶಾಂತಪ್ಪ ಗೌಡರ ಮಗಳು ಸುಶೀಲಾ ಅವರಿಗೆ ಅದೇ ಗ್ರಾಮದ ಪದ್ಮಯ್ಯ ಅವರ ಮಗ ಮಾಧವ ಎಂಬುವರ ಜತೆ 3 ವರ್ಷಗಳ ಹಿಂದೆ ವಿವಾಹವಾಗಿತ್ತು. ಆದರೆ ಮದುವೆಯಾದ ವರ್ಷದೊಳಗೆ ರಸ್ತೆ ಅಪಘಾತವೊಂದರಲ್ಲಿ ಮಾಧವ ಮೃತಪಟ್ಟಿದ್ದರು.
ಅದಾಗಲೇ ಗರ್ಭಿಣಿಯಾಗಿದ್ದ ಸುಶೀಲಾಗೆ ಪತಿ ಮಾಧವರ ಅಕಾಲಿಕ ಮರಣದಿಂದ ದಿಕ್ಕೇ ತೋಚದಂತಾಗಿತ್ತು. ಆದರೆ ಅತ್ತೆ ಕುಂಞಕ್ಕ ಅವರಿಗೆ ಚಿಕ್ಕ ವಯಸ್ಸಿನ ಸೊಸೆಯ ಚಿಂತೆ ಕಾಡತೊಡಗಿತ್ತು. ಸೊಸೆಯ ಜೀವನ ಹೀಗೇ ಮುಗಿದು ಹೋಗಬಾರದು ಎಂದು ತೀರ್ಮಾನಿಸಿದ ಅತ್ತೆ ಕುಂಞಕ್ಕ, ಕುಟುಂಬ ಸದಸ್ಯರ ಮನವೊಲಿಸಿ ಸೊಸೆಯ ಮರು ಮದುವೆಗೆ ನಿಶ್ಚಯಿಸಿದರು.

ಆದರೆ, ಇದಕ್ಕೆ ಸೊಸೆ ಸುಶೀಲಾ ವಿರೋಧಿಸಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ್ದ ಸುಶೀಲಾ, ಮಗನ ಭವಿಷ್ಯದ ಸಲುವಾಗಿ ಮರು ಮದುವೆ ಆಗದಿರಲು ನಿಶ್ಚಯಿಸಿದ್ದರು. ಆದರೆ ಪತಿಯ ಮನೆಯವರ ಸತತ ಪ್ರಯತ್ನಗಳ ನಂತರ ಒಪ್ಪಿಗೆ ಸೂಚಿಸಿದರು. ಅದರಂತೆ ಕುಂಞಕ್ಕ ಅವರ ಮುತುವರ್ಜಿಯಲ್ಲಿ ಬಂಟ್ವಾಳ ತಾಲ್ಲೂಕಿನ ಕನ್ಯಾನದ ಜಯಪ್ರಕಾಶ್ ಎಂಬುವರೊಂದಿಗೆ ಸುಶೀಲಾರ ವಿವಾಹವನ್ನು ನಿಶ್ಚಯಿಸಲಾಯಿತು. ಗ್ರಾಮದ ಕೋಟೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹ ಕೂಡ ಮಾಡಲಾಯಿತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications