ಮಗುವಿನೊಂದಿಗೆ ತಾಯಿ ನಾಪತ್ತೆ; ಪ್ರಿಯಕರನ ಜೊತೆ ಪರಾರಿ ಶಂಕೆ!
ಪುತ್ತೂರು ಗ್ರಾಮವೊಂದರ ಯುವತಿ ತನ್ನ ಎರಡೂವರೆ ವರ್ಷ ಪ್ರಾಯದ ಪುತ್ರನ ಜತೆ ನಾಪತ್ತೆಯಾಗಿದ್ದಾರೆ. ಕಳೆದ ಗುರುವಾರ ಪುತ್ತೂರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಮಗುವಿನೊಂದಿಗೆ ಹೋದವರು ತಿರುಗಿ ಬಂದಿಲ್ಲ.
ಮಂಗಳೂರು, ಮೇ 10: ಪತಿ ವಿದೇಶದಲ್ಲಿರುವ ಹಿನ್ನಲೆಯಲ್ಲಿ ತವರು ಮನೆಯಲ್ಲಿ ವಾಸ್ತವ್ಯ ಹೊಂದಿದ್ದ ಮಹಿಳೆಯೊಬ್ಬರು ತನ್ನ ಎರಡೂವರೆ ವರ್ಷ ಪ್ರಾಯದ ಮಗುವಿನ ಸಮೇತ ನಾಪತ್ತೆಯಾದ ಘಟನೆ ಪುತ್ತೂರಿನ ಗ್ರಾಮವೊಂದರಲ್ಲಿ ನಡೆದಿದೆ. ಘಟನೆಯ ಕುರಿತು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗದೆ.
ಇಲ್ಲಿನ ಗ್ರಾಮವೊಂದರ ಯುವತಿ ತನ್ನ ಎರಡೂವರೆ ವರ್ಷ ಪ್ರಾಯದ ಪುತ್ರನ ಜತೆ ನಾಪತ್ತೆಯಾಗಿದ್ದಾರೆ. ಅವರ ಪತಿ ವಿದೇಶದಲ್ಲಿದ್ದು, ಈ ಹಿನ್ನಲೆಯಲ್ಲಿ ಕೆಲ ಸಮಯದಿಂದೀಚೆಗೆ ಆಕೆ ತನ್ನ ಮಗುವಿನೊಂದಿಗೆ ತವರಿನಲ್ಲಿ ವಾಸ್ತವ್ಯ ಹೊಂದಿದ್ದರು. ಕಳೆದ ಗುರುವಾರ ಪುತ್ತೂರು ಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ತನ್ನ ಮಗುವಿನೊಂದಿಗೆ ಪೇಟೆಗೆ ತೆರಳಿದವರು ಹಿಂತಿರುಗಿ ಮನೆಗೆ ಬಂದಿಲ್ಲ.

ಈ ಕುರಿತು ಅವರಿಗಾಗಿ ಹುಡುಕಾಡಿದ ಮನೆಮಂದಿ ಮಹಿಳೆ ಪತ್ತೆಯಾಗದ ಹಿನ್ನಲೆಯಲ್ಲಿ ಇದೀಗ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ತಂದೆ ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಿಳೆಯ ತನ್ನದೇ ಸಮುದಾಯದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರೆಂದು ಹೇಳಲಾಗುತ್ತಿದ್ದು, ಇದೀಗ ಆಕೆ ಮಗುವಿನೊಂದಿಗೆ ಆತನ ಜೊತೆಗೆ ಪರಾರಿಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮಹಿಳೆ ವಿವಾಹಕ್ಕೂ ಮುನ್ನವೇ ಆತನನ್ನು ಪ್ರೀತಿಸುತ್ತಿದ್ದರು ಎಂದೂ ಹೇಳಲಾಗುತ್ತಿದ್ದು, ಆಕೆ ಆತನ ಜತೆಗೆ ತೆರಳಿರಬಹುದೆಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications