ತಿಂಗಳೊಳಗೆ ಕುಡ್ಲ ಎಕ್ಸ್ ಪ್ರೆಸ್ ರೈಲು ಸಂಚಾರ: ಸುರೇಶ್ ಪ್ರಭು
ಮಂಗಳೂರು, ಮಾರ್ಚ್. 29 : ಮಂಗಳೂರು-ಹಾಸನ-ಶ್ರವಣಬೆಳಗೋಳ ಮಾರ್ಗವಾಗಿ ಬೆಂಗಳೂರು ಸಂಪರ್ಕಿಸುವ ಕುಡ್ಲ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಒಂದು ತಿಂಗಳೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ದಕ್ಷಿಣ ಕನ್ನಡ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ಭರವಸೆ ನೀಡಿದ್ದಾರೆ.
ಈ ಬಗ್ಗೆ ಮಂಗಳವಾರ ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿಯಾದ ನಳಿನ್ ಕುಡ್ಲ ಎಕ್ಸ್ ಪ್ರೆಸ್ ರೈಲಿಗೆ ಶೀಘ್ರ ಚಾಲನೆ ನೀಡುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಸಚಿವರು, ಒಂದು ತಿಂಗಳೊಳಗಾಗಿ ಪ್ರಾರಂಭಿಸುವ ಭರವಸೆ ನೀಡಿದ್ದಾರೆ.

ಇದಲ್ಲದೆ ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಹೆಚ್ಚುವರಿ ಪ್ಲಾಟ್ ಫಾರಂ ಮತ್ತು ನೇತ್ರಾವತಿ ಕ್ಯಾಬಿನ್ ನಿಂದ ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಡಬ್ಲಿಂಗ್ ಕಾಮಗಾರಿಯನ್ನು ಶೀಘ್ರ ಪೂರೈಸುವಂತೆಯೂ ಕಟೀಲ್ ಮನವಿ ಸಲ್ಲಿಸಿದ್ದಾರೆ.
ಮಂಗಳೂರು - ಬೆಂಗಳೂರು ರೈಲು ಮಾರ್ಚ್ 26 ರಂದು ಸಂಚಾರ ಆರಂಭಿಸಬೇಕಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿದೆ. ಕುಡ್ಲ ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರಂ ಹಾಗೂ ನಿಲುಗಡೆಗೆ ಸ್ಥಳಾವಕಾಶವಿಲ್ಲ ಎಂದು ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗವು ಹೇಳಿತ್ತು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications