ಸಿದ್ದರಾಮಯ್ಯರಲ್ಲಿ ರಾಮನ ಹೆಸರಿದೆ, ರಾವಣನ ಗುಣವಿದೆ - ನಳಿನ್ ಕುಮಾರ್ ಕಟೀಲ್
ಮಂಗಳೂರು, ಜನವರಿ 04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಶ್ರೀರಾಮ, ಮತ್ತೆ ಯಾಕೆ ಅಲ್ಲಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎನ್ನುವ ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆಗೆ ಸಂಸದ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದು, ಹೆಸರಿಟ್ಟ ತಕ್ಷಣ ಎಲ್ಲರೂ ರಾಮನಾಗಲು ಸಾಧ್ಯವಿಲ್ಲ ಎಂದಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಎನ್ನುವುದು ಭಾವನಾತ್ಮಕ ನಂಬಿಕೆಗಳ ಸಂಕೇತ. ಮರ್ಯಾದ ಪುರುಷ ರಾಮನನ್ನು ಆದರ್ಶ ಪುರುಷನಾಗಿ ಸ್ವೀಕರಿಸಲಾಗಿದೆ. ರಾಮನಿಗೆ ಇನ್ನೊಂದು ಹೋಲಿಕೆ ಇಲ್ಲ. ರಾಮನಿಗೆ ರಾಮನೇ ಹೋಲಿಕೆ. ಹೆಸರಿಟ್ಟ ತಕ್ಷಣ ಎಲ್ಲರೂ ರಾಮನಾಗಲು ಸಾಧ್ಯವಿಲ್ಲ. ಸಿದ್ದರಾಮಯ್ಯರಲ್ಲಿ ರಾಮನ ಹೆಸರಿದೆ, ರಾವಣನ ಗುಣವಿದೆ ಎಂದರು.

ರಾಜ್ಯದಲ್ಲಿ ಗೋದ್ರಾ ಮಾದರಿಯ ಹತ್ಯಾಕಾಂಡಕ್ಕೆ ಸಂಚು, ಅಯೋಧ್ಯೆಗೆ ಹೋಗುವವರಿಗೆ ಭದ್ರತೆ ಕೊಡಬೇಕೆಂದು ಹೇಳಿಕೆ ನೀಡಿರುವ ಬಿ.ಕೆ.ಹರಿಪ್ರಸಾದ್ ಅವರ ಮೇಲೆ ಕಿಡಿಕಾರಿದ ಸಂಸದ ನಳಿನ್ ಕುಮಾರ್ ಕಟೀಲ್, ತಕ್ಷಣ ಹರಿಪ್ರಸಾದ್ ಬಂಧನವಾಗಲಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ ಸಿಎಂ, ಗೃಹಸಚಿವರು, ಉಪ ಮುಖ್ಯಮಂತ್ರಿಗಳು ತಮಗೇನು ಗೊತ್ತಿಲ್ಲ ಎನ್ನುತ್ತಿದ್ದಾರೆ. ಬಿ.ಕೆ ಹರಿಪ್ರಸಾದ್ ತಮ್ಮಲ್ಲಿರುವ ಮಾಹಿತಿಯನ್ನು ಗೃಹ ಇಲಾಖೆಗೆ ನೀಡಲಿ. ಇಲ್ಲದಿದ್ದಲ್ಲಿ ತಕ್ಷಣ ಅವರ ಬಂಧನವಾಗಲಿ. ಏಕೆಂದರೆ ಗೋದ್ರಾ ಘಟನೆಯ ಹಿಂದೆ ಕಾಂಗ್ರೆಸ್ ಇತ್ತು. ಮೋದಿ ಸರ್ಕಾರವನ್ನು ಬೀಳಿಸಬೇಕು ಎನ್ನುವ ಕುತಂತ್ರವನ್ನು ಆಗ ಕಾಂಗ್ರೆಸ್ ಮಾಡಿತ್ತು. ಇಂದು ಮತ್ತೆ ಈ ಹೇಳಿಕೆಯನ್ನು ಹರಿಪ್ರಸಾದ್ ಹೇಳಿದ್ದಾರೆಂದರೆ ಈ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡಿತ್ತು ಎಂದು ಆರೋಪಿಸುತ್ತೇನೆ ಎಂದರು.

ಭಾರತ ಹಿಂದೂರಾಷ್ಟ್ರ ಆದಲ್ಲಿ ಅಪಾಯಕಾರಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ನಳಿನ್ ಕುಮಾರ್ ಕಟೀಲ್, ಭಾರತ ಹಿಂದೂರಾಷ್ಟ್ರವೇ. ಹಿಂದೂ ಎನ್ನುವ ಶಬ್ದ ಜಾತ್ಯಾತೀತವಾದ್ದದು. ಮಹಾತ್ಮಾ ಗಾಂಧೀಜಿಯವರು ಈ ದೇಶದಲ್ಲಿ ರಾಮ ರಾಜ್ಯದ ಪರಿಕಲ್ಪನೆ ಕಂಡಿದ್ದರು. ಅವರು ಭಾರತವನ್ನು ಜಾತ್ಯಾತೀತ ಮಾಡಲು ಹೇಳಿಲ್ಲ. ರಾಮ ರಾಜ್ಯ ಮಾಡಲು ಹೇಳಿದ್ದರು. ರಾಮ ರಾಜ್ಯದ ಪರಿಕಲ್ಪನೆಯೇ ಹಿಂದೂ ರಾಷ್ಟ್ರದ ಪರಿಕಲ್ಪನೆ.
ಗಾಂಧಿ ಒಪ್ಪಿರುವ ವಿಚಾರವನ್ನು ಯತೀಂದ್ರ ಅವರು ಒಪ್ಪುವುದಿಲ್ಲ ಅಂದರೆ ಗಾಂಧಿಯನ್ನು ಯತೀಂದ್ರ ಒಪ್ಪುತ್ತಾರೋ ಇಲ್ಲವೋ ಎಂದು ಸ್ಪಷ್ಟಪಡಿಸಬೇಕು. ಹಿಂದೂ ರಾಷ್ಟ್ರ ಆದ ಕಾರಣಕ್ಕೆ ಈ ದೇಶದಲ್ಲಿ ಜಾತ್ಯಾತೀತತೆ ಉಳಿದಿದೆ. ಹಿಂದೂ ರಾಷ್ಟ್ರದ ಪರಿಣಾಮ ಈ ದೇಶ ಉಳಿದಿದೆ. ಕಾಂಗ್ರೆಸ್ ಕಾಲದಲ್ಲಿ ಈ ದೇಶದಲ್ಲಿ ಪಾಕಿಸ್ತಾನದ ತರಹದ ಆಡಳಿತವಿತ್ತು. ಆಗ ಭಯೋತ್ಪಾದನೆ, ನಕ್ಸಲ್ ಚಟುವಟಿಕೆ ತಾಂಡವವಾಡುತ್ತಿತ್ತು. ಈಗ ಹಿಂದೂ ರಾಷ್ಟ್ರದ ಪರಿಕಲ್ಪನೆಯಡಿ ಎಲ್ಲವೂ ನಿಂತಿದೆ ಎಂದರು.
ಕರಸೇವಕರ ಬಂಧನದ ವಿಚಾರವಾಗಿ ಮಾತನಾಡಿದ ಅವರು, ನಾನೂ ಕರಸೇವಕ, ರಾಮಭಕ್ತ. ಯಾವ ಕರಸೇವಕರನ್ನು ಬಂಧಿಸುತ್ತಿರುವ ಸರ್ಕಾರ, ಶಕ್ತಿಯಿದ್ದರೆ ನನ್ನನ್ನು ಬಂಧಿಸಲಿ. ಎಲ್ಲಾ ಕರ ಸೇವಕರನ್ನು ಬಂಧಿಸಲಿ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications