ಪಕ್ಷ ಗುಡಿಸು-ಒರೆಸು ಅಂದ್ರೂ ಮಾಡುತ್ತೇವೆ: ನಳೀನ್ ಕುಮಾರ್ ಕಟೀಲ್ ಭಾವುಕ
ಮಂಗಳೂರು, ಮಾರ್ಚ್ 12: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹೆಚ್ಚಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರು ಸಹ ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ನಳಿನ್ ಕುಮಾರ್ ಕಟೀಲ್ ಸ್ಪರ್ಧೆಗೆ ಅವಕಾಶ ನೀಡುವುದಿಲ್ಲ ಎನ್ನುವ ಚರ್ಚೆ ಮುನ್ನೆಲೆಯಲ್ಲಿದೆ. ಈ ಬಗ್ಗೆ ಸ್ವತಃ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಭಾವುಕರಾಗಿ ಮಾತನಾಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು ಸಹ ಸ್ವಾಗತಿಸುತ್ತೇನೆ. ಪಾರ್ಟಿ ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು, ಚಲಾವಣೆ ಆಗ್ತಾ ಇರಬೇಕು ಎಂದಿದ್ದಾರೆ.

ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು. ಪಾರ್ಟಿ ಗುಡಿಸು ಹೇಳಿದ್ರೆ ಗುಡಿಸುತ್ತೇವೆ. ಒರೆಸು ಅಂದ್ರೆ ಒರೆಸುತ್ತೇವೆ. ಪಾರ್ಟಿ ಹೇಳಿದ ಕೆಲಸ ಮಾಡುತ್ತೇವೆ. ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕು ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ನಾವು ಕಾರ್ಯವನ್ನು ನಂಬಿರುವಂತವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.
ಮಾತು ಮುಂದುವರಿಸಿದ ನಳೀನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಮಾತನಾಡಿರುವುದನ್ನು ರಾತ್ರಿ ನೋಡಿದೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೊಂಡ್ರು ಅದು ಪಕ್ಷದ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನನಗೂ ಮೂರು ಬಾರಿ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು.

ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ. ಬೆಳೆಸುವ ಕೆಲಸ ಕಾರ್ಯ ಆಗುತ್ತದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ವಿಚಾರಕ್ಕಾಗಿ ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಅಂದ್ರು ಮಾಡಿದೆ. ಲೋಕಸಭೆಗೆ ನಿಲ್ಲು ಅಂದ್ರು ನಿಂತೆ, ರಾಜ್ಯಾಧ್ಯಕ್ಷನೂ ಆದೆ. ಯಾವ ಪಾರ್ಟಿಯಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ. ಇಲ್ಲಿ ಯಾರನ್ನು ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಗ್ಲಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ ಎಂದು ಭಾವುಕರಾದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್











Click it and Unblock the Notifications