ಉಚ್ಚಿಲದಲ್ಲಿ ಕಡಲ್ಕೊರೆತದಿಂದಾಗಿ ನಳಿನ್ ಗೆ ತರಾಟೆ
ತೊಕ್ಕೋಟ್ಟು, ಜುಲೈ 03; ಉಚ್ಚಿಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಸಂಸದರಲ್ಲಿ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಡಲ್ಕೊರೆತ ಪ್ರದೇಶವಾದ ಉಳ್ಳಾಲ, ಸೋಮೇಶ್ವರ ಹಾಗೂ ಉಚ್ಚಿಲದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಅಲ್ಲಿಂದ ಉಚ್ಚಿಲದಲ್ಲಿ ಮನೆ ಕಡಲು ಪಾಲಾಗಿ ಸಂತ್ರಸ್ತರಾಗಿರುವ ಯಮುನಾ ಮತ್ತು ವಸಂತ್ ಅವರ ಮನೆಗೆ ಭೇಟಿ ನೀಡಿದರು.
'ಈಗ ನಡೆಯುತ್ತಿರುವ ತಾತ್ಕಾಲಿಕ ಕಲ್ಲುಹಾಕುವ ಕಾಮಗಾರಿಗೆ ವ್ಯಯಿಸುವ ಹಣದಲ್ಲಿ ಸ್ವಲ್ಪ ಹಣವನ್ನು ಸಂತ್ರಸ್ತರಿಗೆ ಕೊಟ್ಟರೆ ಎಲ್ಲಾದರೂ ಹೋಗಿ ಸ್ವಂತ ಸೂರು ಕಟ್ಟಿ ಕುಳಿತುಕೊಂಡು ಜೀವನ ಸಾಗಿಸುತ್ತೇವೆ. ತೆರಿಗೆ ಹಣವನ್ನು ಸರಕಾರ ಪೋಲು ಮಾಡುವುದು ಶೋಭೆ ತರಲಾರದು ಎಂದು ಉಚ್ಚಿಲ ಬೋವಿ ಸಮಾಜದವರು ಬೇಸರ ವ್ಯಕ್ತಪಡಿಸಿದ್ದಾರೆ. [ಉಳ್ಳಾಲದಲ್ಲಿ ಭಾರೀ ಕಡಲ್ಕೊರೆತ, ಜನರಿಗೆ ಆತಂಕ]

ಮರಳುಗಾರಿಕೆ ನಿಷೇಧ ಕಾರಣ: ಕಡಲ್ಕೊರೆತ ಆರಂಭವಾಗಲು ನೇತ್ರಾವತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಳುಗಾರಿಕೆ ನಡೆಯುತ್ತಿರುವುದೇ ಇದಕ್ಕೆ ಮುಖ್ಯ ಕಾರಣ. ನಿರಂತರ ಮರಳುಗಾರಿಕೆ ನಿಲ್ಲಿಸಿ ಕಡಲ್ಕೊರೆತ ತಡೆಯಬೇಕೆ ಹೊರತು ಸಮುದ್ರ ಆರ್ಭಟಿಸಿದ ನಂತರ ಕಲ್ಲು ಹಾಕಿದರೆ ಯಾವುದೇ ಪ್ರಯೋಜನ ಇಲ್ಲ, ಕನಿಷ್ಟ ಎರಡು ವರ್ಷ ನೇತ್ರಾವತಿ ನದಿಯಲ್ಲಿ ನಡೆಯುವ ಮರಳುಗಾರಿಕೆ ನಿಷೇಧ ಹೇರಿದರೆ ತನ್ನಿಂತಾನಿಯೇ ಕಡಲ್ಕೊರೆತ ನಿಲ್ಲುತ್ತದೆ ಎಂದು ಹೇಳಿದರು.[ರಂಜಾನ್ ಖಾದ್ಯಗಳ ಮಳಿಗೆಗಳಲ್ಲಿ ಒಂದು ಸುತ್ತು!]
ಸಮುದ್ರದಲ್ಲಿ ಮೀನುಗಳು ಉತ್ಪತ್ತಿಯಾಗುತ್ತವೆಯೇ ಹೊರತು ಮರಳು ಉತ್ಪತ್ತಿಯಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಜನ ಪ್ರತಿನಿಧಿಗಳು, ಅಧಿಕಾರಿಗಳು ಸೇರಿ ನಡೆಯುವ ಮರಳುಗಾರಿಕೆಯನ್ನು ತಡೆದರೆ ಫಲಿತಾಂಶದತ್ತ ಸಾಗಬಹುದು ಎಂದು ಮೀನುಗಾರರು ಸಲಹೆ ನೀಡಿದರು.[ನೀವಿದ್ದಲ್ಲೆ ಬರಲಿದೆ ರುಚಿ ರುಚಿ ಮೀನು ಖಾದ್ಯ]
ಬಳಿಕ ಮಧ್ಯಗಳ ಜತೆಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ತಡೆಗೋಡೆ ಕಾಮಗಾರಿಗಾಗಿ 900 ಕೋಟಿ ರೂ ಪ್ರಸ್ತಾಪಿಸಲಾಗಿದ್ದು ಅದರಲ್ಲಿ 238 ಕೋಟಿ ರೂ. ಉಳ್ಳಾಲದಲ್ಲಿ ಬ್ರೇಕ್ ವಾಟರ್ ಕಾಮಗಾರಿಗಾಗಿ ಬಿಡುಗಡೆಯಾಗಿದೆ.
ಮುಂದಿನ ದಿನದಲ್ಲಿ ಉಚ್ಚಿಲಕ್ಕೂ ಬ್ರೇಕ್ ವಾಟರ್ ವಿಸ್ತರಿಸಲು ಕೇಂದ್ರಕ್ಕೆ ಸುಮಾರು 38 ಕೋಟಿ ರೂ. ಅನುದಾನಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ.
ಮೀನುಗಾರರ ಬೇಡಿಕೆಯಂತೆ ಸಂತ್ರಸ್ತರನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಿನ ವಾರವೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದು ಚರ್ಚಿಸಲಾವುದು ಎಂದು ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications