Get Updates
Get notified of breaking news, exclusive insights, and must-see stories!

ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವದಿಸಿದ ಜನಾರ್ಧನ್ ಪೂಜಾರಿ

Recommended Video

      ಸಂಸದ ನಳಿನ್ ಕುಮಾರ್ ಅವರನ್ನು ಆಶೀರ್ವದಿಸಿದ ಜನಾರ್ಧನ್ ಪೂಜಾರಿ | Oneindia Kannada

      ಮಂಗಳೂರು, ನವೆಂಬರ್ 19: ದಕ್ಷಿಣ ಕನ್ನಡ ಜಿಲ್ಲಾ ಬಿಲ್ಲವ ಸಂಘದಿಂದ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೊಡಿ ಮರ ಸಲ್ಲಿಸುವ ಕಾರ್ಯಕ್ರಮ ಇಂದು ನಡೆಯಿತು.

      ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪೂಜಾರಿ ಅವರ ಬಳಿ ತೆರಳಿ ಅವರ ಆರೋಗ್ಯ ವಿಚಾರಿಸಿದರು.

      ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ತಲೆ ಸವರಿದ ಜನಾರ್ಧನ್ ಪೂಜಾರಿ ಆಶೀರ್ವಾದ ಮಾಡಿದರು.

      ಪೂಜಾರಿ ಆರೋಗ್ಯ ವಿಚಾರಿಸದ ಸಿಎಂ

      ಪೂಜಾರಿ ಆರೋಗ್ಯ ವಿಚಾರಿಸದ ಸಿಎಂ

      ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಂಟ್ವಾಳಕ್ಕೆ ಆಗಮಿಸಿದ್ದರು. ಕಾಂಗ್ರೆಸ್‌ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿರುವ ಮಾಹಿತಿ ಇದ್ದರೂ ಸಿ.ಎಂ, ಸಮೀಪದಲ್ಲೇ ಇದ್ದ ಪೂಜಾರಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿರಲಿಲ್ಲ.

      ಸಿಎಂ ನಡೆಗೆ ಆಕ್ರೋಶ

      ಸಿಎಂ ನಡೆಗೆ ಆಕ್ರೋಶ

      ಈ ಕುರಿತು ಕಾಂಗ್ರೆಸ್ ಪಕ್ಷದಿಂದಲೇ ಭಾರೀ ಅಸಮಾಧಾನ ಕೇಳಿ ಬಂದಿತ್ತು. ಮಂಗಳೂರು ತನಕ ಬಂದೂ ಹಿರಿಯ ಕಾಂಗ್ರೆಸ್ ರಾಜಕಾರಣಿಯೊಬ್ಬರ ಆರೋಗ್ಯ ವಿಚಾರಿಸಲೂ ಹಿಂದೇಟು ಹಾಕಿದ್ದ ಸಿದ್ದರಾಮಯ್ಯನವರ ಮೇಲೆ ಕಾಂಗ್ರೆಸಿಗರು ಮುನಿಸಿಕೊಂಡಿದ್ದರು.

      ಸಂತಸಗೊಂಡ ಪೂಜಾರಿ

      ಸಂತಸಗೊಂಡ ಪೂಜಾರಿ

      ಆದರೆ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಪೂಜಾರಿ ಆರೋಗ್ಯ ವಿಚಾರಿಸಿದ್ದು, ಅದಕ್ಕೆ ಸಂತಸಗೊಂಡ ಪೂಜಾರಿ ನಳಿನ್ ತಲೆ ಸವರಿ ಆಶೀರ್ವಾದಿಸಿದರು.

      ಫೋಟೋ ವೈರಲ್

      ಫೋಟೋ ವೈರಲ್

      ಪೂಜಾರಿ ಹಾಗೂ ನಳಿನ್ ಕುಮಾರ್ ಕಟೀಲ್ ನಡುವಿನ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಚರ್ಚೆ ಹುಟ್ಟು ಹಾಕಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+