ಮಂಗಳೂರಿನ 'ಪಿಲಿಕುಳ ಜೈವಿಕ ಉದ್ಯಾನವನ' ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
ಮಂಗಳೂರು, ಅಕ್ಟೋಬರ್ 6: ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನ ಇನ್ನಷ್ಟು ಸುಂದರಗೊಳ್ಳುತ್ತಿದೆ. ಉದ್ಯಾನವನದಲ್ಲಿ ಎಂ.ಆರ್.ಪಿ.ಎಲ್ ಪ್ರಾಯೋಜಕತ್ವದಲ್ಲಿ ಪ್ರಥಮ ಹಂತದ ಹಸಿರೀಕರಣ ಯೋಜನೆ ಪೂರ್ಣಗೊಂಡಿದ್ದು ಉದ್ಘಾಟನೆಗೆ ಸಿದ್ಧವಾಗಿದೆ.
ಉದ್ಯಾನವನದ 30 ಎಕರೆ ಪ್ರದೇಶಗಳಲ್ಲಿ 2000 ಕ್ಕೂ ಹೆಚ್ಚು ಪಶ್ಚಿಮ ಘಟ್ಟದ ವಿವಿಧ ತಳಿಯ ಸಸ್ಯಗಳನ್ನು ನೆಡಲಾಗಿದೆ . ಜೈವಿಕ ಉದ್ಯಾನವನದಲ್ಲಿರುವ 300 ಕ್ಕೂ ಮಿಕ್ಕಿ ಸಸ್ಯಹಾರಿ ಪ್ರಾಣಿಗಳಿಗೆ ತಿನ್ನಲು ನೇಪಿಯರ್ ಸಿ.ಒ 4 ಜಾತಿಯ ಮೇವನ್ನು ಅಲ್ಲಿಯೇ ಬೆಳೆಸಲು ಯೋಜನೆ ರೂಪಿಸಲಾಗಿದೆ.

ನಿಸರ್ಗಧಾಮದಲ್ಲಿ ಔಷಧೀಯ ಸಸ್ಯಗಳ
ಪಶ್ಚಿಮ ಘಟ್ಟದ ವಿವಿಧ ತಳಿಯ 2000 ಸಸ್ಯಗಳನ್ನು ನೆಡಲಾಗಿದ್ದು ಇದರಲ್ಲಿ ಔಷಧೀಯ ಸಸ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೆಡಲಾಗಿದೆ.

ಚಿಟ್ಟೆ ಆಕರ್ಷಣೆಗೆ ಮೆಗಾ ಪ್ಲಾನ್
ಇದೇ ಪ್ರದೇಶದಲ್ಲಿ ಚಿಟ್ಟೆಗಳನ್ನು ಆಕರ್ಷಿಸುವ ಉದ್ದೇಶದಿಂದ ಚಿಟ್ಟೆಗಳಿಗೆ ಪ್ರೀಯವಾದ 1000 ಕ್ಕೂ ಹೆಚ್ಚು ವಿವಿಧ ಜಾತಿಯ ಸಸ್ಯಗಳನ್ನು ನೆಡಲಾಗಿದೆ. ಇದರಿಂದ ಚಿಟ್ಟೆಗಳು ಉದ್ಯಾನವನಕ್ಕೆ ಆಗಮಿಸಲಿವೆ.

ಸುಂದರ ತಾವರೆಗಳು
ವಿವಿಧ ಜಾತಿಯ ಸುಂದರ ತಾವರೆಗಳು ಹಾಗೂ ಜಲ ಸಸ್ಯಗಳು ಮುಂಬರುವ ದಿನಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಲಿದೆ . ಮೃಗಾಲಯದ ಪ್ರಾಣಿ ಪಕ್ಷಿಗಳಿಗಾಗಿಯೇ ಬಾಳೆ, ಅನಾನಸ್, ಕಬ್ಬು, ಗೆಡ್ಡೆ ಗೆಣಸುಗಳನ್ನು ಬೆಳೆಸಲಾಗುತ್ತಿದೆ. ಈ ಪ್ರದೇಶವು ಸಸ್ಯಶಾಸ್ತ್ರ ಅಧ್ಯಯನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.

ಅಕ್ಟೋಬರ್ 8ರಂದು ಉದ್ಘಾಟನೆ
ಅಕ್ಟೋಬರ್ 8 ರಂದು ಜೈವಿಕ ಉದ್ಯಾನವನದಲ್ಲಿ ಪೂರ್ಣಗೊಂಡ ಪ್ರಥಮ ಹಂತದ ಹಸಿರೀಕರಣ ಯೋಜನೆ ಉದ್ಘಾಟನೆ ಗೊಳ್ಳಲಿದೆ. ಈ ಸಂದರ್ಭದಲ್ಲಿ ಎರಡನೇ ಹಂತದ ಯೋಜನೆಗೂ ಚಾಲನೆ ದೊರಕಲಿದೆ .
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications