Get Updates
Get notified of breaking news, exclusive insights, and must-see stories!

ವೈರಲ್ ಆಯ್ತು ಹಿಂದೂ ಯುವತಿ‌, ಮುಸ್ಲಿಂ ಯುವಕನ ಪ್ರೇಮ ವಿವಾಹದ ಲಗ್ನ ಪತ್ರಿಕೆ

ಮಂಗಳೂರು, ಜನವರಿ 04: ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಗಿ ವೈರಲ್ ಆಗುತ್ತಿರುವ ಹಿಂದೂ ಯುವತಿ‌ ಹಾಗೂ ಮುಸ್ಲಿಂ ಯುವಕನ ವಿವಾಹ ಆಮಂತ್ರಣ ಪತ್ರಿಕೆಯೊಂದು ಇದೀಗ ವಿವಾದ ಸೃಷ್ಟಿಸಿದೆ.

ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಪ್ರೇಮ ವಿವಾಹದ ಆಮಂತ್ರಣ ಪತ್ರಿಕೆ ಇದಾಗಿದ್ದು, ಆಮಂತ್ರಣ ಪತ್ರಿಕೆ ಬಹಿರಂಗಗೊಂಡ ಬಳಿಕ ಈಗ ವಿವಾದ ಸೃಷ್ಟಿಯಾಗಿದೆ. ಕಳೆದ 3 ದಿನಗಳಿಂದ ಈ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನನ್ನು ವಧು-ವರ ಎಂದು ಹೆಸರಿಸಲಾಗಿದೆ.

ಚೇಳ್ಯಾರು ಪದವಿನ ಬಿಲ್ಲವ ಸಮಾಜದ ಯುವತಿಯ ವಿವಾಹವು, ತಡಂಬೈಲು ಅಝೀಂಖಾನ್ ಎಂಬುವವರ ಮಗನೊಂದಿಗೆ ನಿಶ್ಚಯವಾಗಿದ್ದು, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜನವರಿ 20 ರಂದು ವಿವಾಹ ನಡೆಯಲಿದೆ ಎಂದು ಬರೆಯಲಾಗಿದೆ.

ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಹಿರಿಯ ಪೊಲೀಸ್ ಆಧಿಕಾರಿಗಳ ನೇತೃತ್ವದಲ್ಲಿ ಸುರತ್ಕಲ್ ಠಾಣೆಯಲ್ಲಿ ಮಾತುಕತೆ ನಡೆದಿದೆ. ವಿಭಾಗದ ಡಿಸಿಪಿ ಹನುಮಂತರಾಯ ಸುರತ್ಕಲ್ ಠಾಣೆಯಲ್ಲಿ ಎರಡೂ ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುರತ್ಕಲ್ ಇನ್‌ಸ್ಪೆಕ್ಟರ್ ಕೆ.ಜಿ. ರಾಮಕೃಷ್ಣ ಉಪಸ್ಥಿತರಿದ್ದರು. ಮುಂದೆ ಓದಿ...

 ವಿವಾಹಕ್ಕೆ ಸಮ್ಮತಿ

ವಿವಾಹಕ್ಕೆ ಸಮ್ಮತಿ

ಉಭಯ ಕುಟುಂಬಗಳು ವಿವಾಹಕ್ಕೆ ಸಮ್ಮತಿ ಸೂಚಿಸಿವೆ. ಯುವಕ-ಯುವತಿ ಪ್ರಬುದ್ಧರಾಗಿರುವ ಕಾರಣ ಅವರ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ಆಮಂತ್ರಣ ಪತ್ರಿಕೆ ಹಂಚಿಕೆ

ಆಮಂತ್ರಣ ಪತ್ರಿಕೆ ಹಂಚಿಕೆ

ಚೇಳಾರುವಿನ ಹಿಂದು ಯುವತಿ ಹಾಗೂ ತಡಂಬೈಲ್ ಮಹಮ್ಮದ್ ಸಲೀಂ ಯಾನೆ ಪ್ರವೀಣ್ ಹಲವು ಸಮಯದಿಂದ ಪ್ರೀತಿಸುತ್ತಿದ್ದು, ವಿವಾಹವಾಗಲು ನಿರ್ಧರಿಸಿದ್ದರು. ಇವರ ಮದುವೆ ಜನವರಿ 20ರಂದು ಕಟೀಲು ದೇವಸ್ಥಾನದಲ್ಲಿ ನಡೆಸಲು ಉಭಯ ಕುಟುಂಬಗಳು ನಿರ್ಧರಿಸಿ, ಆಮಂತ್ರಣ ಪತ್ರಿಕೆ ಹಂಚಿದ್ದರು. ಇದನ್ನು ತಿಳಿದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಈ ವಿವಾಹವನ್ನು ಆಕ್ಷೇಪಿಸಿದ್ದಾರೆ. ಲವ್ ಜಿಹಾದ್ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದಾರೆ.

ಅಯ್ಯಪ್ಪ ಮಾಲಾಧಾರಿ

ಅಯ್ಯಪ್ಪ ಮಾಲಾಧಾರಿ

ಮಹಮ್ಮದ್ ಸಲೀಂ ಅವರ ಕುಟುಂಬ ಹಿಂದೂ ನಂಬಿಕೆಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದಾರೆ. ಇದಕ್ಕೆ ಕಾರಣಗಳು ಇದೆ. ಮಹಮ್ಮದ್ ಸಲೀಂ ಅವರ ತಾಯಿ ಹಿಂದೂವಾಗಿದ್ದು ಮೂಲತಃ ಶಿವಮೊಗ್ಗದವರಾಗಿದ್ದಾರೆ. ಇವರು ಕುಟುಂಬ ಕಳೆದ 25 ವರ್ಷಗಳಿಂದ ಚೇಳಾರುವಿನಲ್ಲಿ ವಾಸಿಸುತ್ತಿದ್ದು, ಹಿಂದು ಧರ್ಮದ ನಂಬಿಕೆ, ಆಚರಣೆ ಮೇಲೆ ವಿಶೇಷ ಪ್ರೀತಿಹೊಂದಿದೆ. ಅದಲ್ಲದೇ ಮಹಮ್ಮದ್ ಸಲೀಂ ಅಯ್ಯಪ್ಪ ಮಾಲಾಧಾರಿಯಾಗಿದ್ದಾರೆ.

ಮದುವೆಯಾಗಲು ನಿರ್ಧಾರ

ಮದುವೆಯಾಗಲು ನಿರ್ಧಾರ

ಮಹಮ್ಮದ್ ಸಲೀಂ 4 ವರ್ಷಗಳಿಂದ ಶಬರಿಮಲೆ ಮಾಲೆ ಹಾಕಿ ವ್ರತಾಚರಣೆ ಮಾಡಿ ಯಾತ್ರೆ ಹೋಗುತ್ತಿದ್ದಾರೆ. ಈ ಬಾರಿ ಜನವರಿ 6ರಂದು ಶಬರಿಮಲೆ ಯಾತ್ರೆಗೆ ತೆರಳಲಿದ್ದು ಯಾತ್ರೆಯಿಂದ ಬಂದ ಬಳಿಕ ಮದುವೆ ಆಗಲು ನಿರ್ಧರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+