ಬಸ್ನಲ್ಲಿ ಯುವತಿ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ
ಮಂಗಳೂರು, ಏಪ್ರಿಲ್ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಮುನ್ನಲೆಗೆ ಬಂದಿದೆ. ಬಸ್ನಲ್ಲಿ ಯುವತಿಯ ಜೊತೆ ಮಾತನಾಡಿದಕ್ಕೆ ಅನ್ಯಕೋಮಿನ ಯುವಕನ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.
ಉಜಿರೆಯ ಕಕ್ಕಿಂಜೆ ನಿವಾಸಿ ಝಾಹಿರ್ (22) ಹಲ್ಲೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಝಾಹಿರ್ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಮಂಗಳೂರಿನಿಂದ ಉಜಿರೆಗೆ ಬಸ್ನಲ್ಲಿ ತೆರಳುವಾಗ, ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದ ಎನ್ನಲಾಗಿದೆ. ಬಳಿಕ ಝಾಹಿರ್ ಬಸ್ನಲ್ಲಿ ಯುವತಿಯ ಪಕ್ಕದಲ್ಲೇ ಕುಳಿತುಕೊಂಡಿದ್ದಾನೆ ಎನ್ನಲಾಗಿದೆ.

ಈ ದೃಶ್ಯವನ್ನು ಕಂಡ ಬಸ್ಬಲ್ಲಿದ್ದ ಹಿಂದೂ ಸಂಘಟನೆಯ ಯುವಕರು ಉಜಿರೆಯಲ್ಲಿದ್ದ ಇತರ ಕಾರ್ಯಕರ್ತರಿಗೆ ಮಾಹಿತಿ ರವಾನಿಸಿದ್ದರು. ಯುವತಿ ಬೆಳ್ತಂಗಡಿಯಲ್ಲಿ ಬಸ್ನಿಂದ ಇಳಿದು ಹೋಗಿದ್ದಾಳೆ. ಬಳಿಕ ಝಾಹಿರ್ ಉಜಿರೆಯಲ್ಲಿ ತೆರಳಿದ್ದು, ಉಜಿರೆಯಲ್ಲಿ ಕಾದು ಕುಳಿತಿದ್ದ ಯುವಕರ ತಂಡ ಝಾಹಿರ್ನನ್ನು ಬಸ್ನಿಂದ ಕೆಳಗಿಳಿಸಿ ಹಲ್ಲೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಝಾಹಿರ್ ಮೇಲೆ ಹಲ್ಲೆ ನಡೆಸುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪ್ರಕರಣ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಯುವಕನಿಂದ ದೂರು ದಾಖಲಿಸಿ ಪೊಲೀಸರು ತನಿಖೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಹಾಡಹಗಲೇ ರಸ್ತೆಯಲ್ಲಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹಲ್ಲೆಗೊಳಗಾದ ಯುವಕ ಝಾಹಿರ್ ಪರಿಚಯಸ್ಥರೇ ಆಗಿರುವ ತೋಟತ್ತಾಡಿ ಗ್ರಾಮದ ನಿವಾಸಿ ದಿನೇಶ್, ಮುಂಡಾಜೆ ನಿವಾಸಿ ಗ್ರಾಮದ ಸಚಿನ್, ತೋಟತ್ತಾಡಿ ಗ್ರಾಮದ ನಿವಾಸಿ ನಿತೇಶ್ ಹಾಗೂ ಸೋಮಂತಡ್ಕ ಗ್ರಾಮದ ನಿವಾಸಿ ಅವಿನಾಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಬಂಧಿತ ನಾಲ್ವರು ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 34, ಕ್ರೈ ನಂಬರ್ 27/2023 ಕಲಂ 323, 341 ಹಾಗೂ 506 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.
ಚಿಕನ್ ಸಾರು ಖಾಲಿಯಾಗಿದ್ದಕ್ಕೆ ಅಪ್ಪ-ಮಗನ ಜಗಳ: ಕೊಲೆಯಲ್ಲಿ ದುರಂತ ಅಂತ್ಯ
ಚಿಕನ್ ಸಾರು ಖಾಲಿಯಾಗಿದ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಗಲಾಟೆ ಕೊನೆಯಲ್ಲಿ ಮಗನ ದುರಂತ ಸಾವಿನಲ್ಲಿ ಅಂತ್ಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಹಾಗೂ ಮಗ ಶಿವರಾಮ ನಡುವೆ ಕಲಹವಾಗಿ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ.

ಮಗ ಶಿವರಾಮ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಾತೃ ಮಜಲು ನಿವಾಸಿ ಶೀನ ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ. ಮಗ ಶಿವರಾಮ ಮನೆಗೆ ಬರುವಾಗ ಮನೆಯಲ್ಲಿ ಚಿಕನ್ ಸಾರು ಖಾಲಿಯಾಗಿದೆ. ಇದೇ ವಿಚಾರಕ್ಕೆ ಕೋಪಗೊಂಡ ಶಿವರಾಮ ಮನೆಯಲ್ಲಿ ಜಗಳ ಪ್ರಾರಂಭಿಸಿದ್ದಾನೆ.
ಮಗನ ಮಾತುಗಳಿಗೆ ತಂದೆ ಶೀನ ಎದುರಾಡಿದ್ದು,ತಂದೆ ಹಾಗೂ ಮಗನ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಆರೋಪಿ ಶೀನ ಕೋಪಗೊಂಡು ಮಗನ ತಲೆಗೆ ತಂದೆ ಬಡಿಗೆಯಿಂದ ಹೊಡೆದಿದ್ದಾರೆ. ಬಲವಾದ ಏಟಿನಿಂದ ತಲೆ ಒಡೆದು ಪುತ್ರ ಶಿವರಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ,ಶಿವರಾಮ ಅವರ ಪತ್ನಿ ಕವಿತಾ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಕೊಲೆ ಆರೋಪಿ ಶೀನನನ್ನ ವಶಕ್ಕೆ ಪಡೆದು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಶಿವರಾಮ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications