ಕುಕ್ಕೆ ಸುಬ್ರಹ್ಮಣ್ಯಕ್ಕೆ 2.5 ಕೋಟಿಯ ಬ್ರಹ್ಮರಥ ನೀಡಲಿರುವ ಮುತ್ತಪ್ಪ ರೈ
Recommended Video

ಮಂಗಳೂರು, ಮಾರ್ಚ್ 14: ಪರಶುರಾಮ ಸೃಷ್ಟಿಯ ಸಪ್ತ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬ್ರಹ್ಮ ರಥ ನೀಡಲು ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್ ಪಾಲುದಾರ ಅಜಿತ್ ಶೆಟ್ಟಿ ನಿರ್ಧರಿಸಿದ್ದಾರೆ.
ಜಂಟಿಯಾಗಿ ಎರಡೂವರೆ ಕೋಟಿ ಮೌಲ್ಯದ ಬ್ರಹ್ಮರಥವನ್ನು ದೇವಸ್ಥಾನಕ್ಕೆ ನೀಡಲು ನಿರ್ಧರಿಸಿದ್ದಾರೆ. ಗುರುವಾರ ಇಬ್ಬರೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಬ್ರಹ್ಮರಥ ನೀಡುವುದಕ್ಕೆ ಎಲೆ ವೀಳ್ಯ ಸ್ವೀಕರಿಸಲಿದ್ದಾರೆ.
ಬಳಿಕ ಬ್ರಹ್ಮರಥ ಕೆತ್ತನೆಯ ಕಾರ್ಯ ಆರಂಭವಾಗಲಿದೆ. ಬ್ರಹ್ಮರಥವನ್ನ ರಾಷ್ಟ್ರ, ರಾಜ್ಯ, ಶಿಲ್ಪಕಲಾ ಅಕಾಡಮಿ ಪ್ರಶಸ್ತಿ ಪುರಸ್ಕೃತ, ರಾಷ್ಟ್ರೀಯ ಶಿಲ್ಪ ಗುರು ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿರುವ ಖ್ಯಾತ ಶಿಲ್ಪಿ, ಕುಂದಾಪುರ ತಾಲೂಕಿನ ಕೋಟಾದ ಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯರ ಉಸ್ತುವಾರಿಯಲ್ಲಿ ತಯಾರಿಸಲಾಗುತ್ತೆ. ರಥದ ಕೆತ್ತನೆಗೆ ದಾಂಡೇಲಿ ಅರಣ್ಯದಿಂದ ದೊಡ್ಡ ಮರ ತರಲಾಗತ್ತೆ. ಬ್ರಹ್ಮರಥ 64.10 ಅಡಿ ಉದ್ದ, 18 ಅಡಿ ಅಗಲವಿರಲಿದೆ.

ಈ ಹಿಂದೆ ಮುತ್ತಪ್ಪ ರೈ ತಮ್ಮ ಗ್ರಾಮದ ದೇವರು ಪುತ್ತೂರು ಮಹಾಲಿಂಗೇಶ್ವರನಿಗೆ 1 ಕೋಟಿ ಮೌಲ್ಯದ ಬ್ರಹ್ಮರಥವನ್ನು ಕೊಟ್ಟು ಗಮನ ಸೆಳೆದಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಬ್ರಹ್ಮರಥ ಬೇಕೆಂಬ ಬೇಡಿಕೆ ಕಳೆದ 10 ವರ್ಷಗಳಿಂದಲೂ ಇತ್ತು. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಕೂಡ ಮನವಿ ಸಲ್ಲಿಸಿತ್ತು.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇದೀಗ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಜಂಟಿಯಾಗಿ ಎರಡೂವರೆ ಕೋಟಿ ಮೌಲ್ಯದ ಬ್ರಹ್ಮರಥವನ್ನು ನೀಡಲು ಮುಂದಾಗಿದ್ದಾರೆ. ಮುತ್ತಪ್ಪ ರೈ ಈ ಹಿಂದೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1ಕೋಟಿ ರೂ ವೆಚ್ಚದ ಬ್ರಹ್ಮರಥವನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಿಸಿ ದೇವಸ್ಥಾನಕ್ಕೆ ನೀಡಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೀಡಲಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications