ಇಂದಿನಿಂದ ಕುದ್ರೋಳಿ ಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾರ್ಚ್ 31 ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಮಂಗಳೂರು, ಮಾರ್ಚ್ 31: ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀಭಗವತಿ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾರ್ಚ್ 31 ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇಂದು ಮಹಾಪೂಜೆಯ ನಡೆದು, ಬಳಿಕ ಸಂಜೆ 30 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ವಿಶೇಷ ಆನೆ ಚಪ್ಪರದ ಉದ್ಘಾಟನೆ ನಡೆಯಲಿದೆ. ರಾತ್ರಿ ಶ್ರೀಚೀರುಂಭ ಭಗವತಿ ಕ್ಷೇತ್ರದಲ್ಲಿ ಮಹಾಪೂಜೆ, ನಡಾವಳಿ ಉತ್ಸವ ನಡೆಯಲಿದೆ.[ಈ ಹುಡುಗನಲ್ಲಿನ ಪ್ರಾಣಿ ದಯೆ ಎಲ್ಲರಲ್ಲೂ ಬರಲಿ (ವಿಶೇಷ ವರದಿ)]
ಏಪ್ರಿಲ್ 1 ರಂದು ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀ ಪಾಡಂಗರೇ ಭಗವತೀ ಕ್ಷೇತ್ರದಲ್ಲಿ ಮಹಾಪೂಜೆ, ರಾತ್ರಿ 10:30ಕ್ಕೆ ಭೇಟಿಕಳ ಶ್ರೀ ಭಗವತಿ ಮಾತೆಯರ ಭವ್ಯ ಶೋಭಾಯಾತ್ರೆ ನಡೆದು, ಮುಂಜಾನೆ 3.30ಕ್ಕೆ ಕೆಂಡ ಸೇವೆ ಮೂರ್ತಿಯ ದರ್ಶನ ನಡೆಯಲಿದೆ.[ಮಂಗಳೂರಿನ ಈ ಮುಸ್ತಫಾರಿಗೆ ಹಸುಗಳೇ ಮಕ್ಕಳು..!]
ಏಪ್ರಿಲ್ 2ರಂದು ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀಪುಲ್ಲೂರಾಳಿ ಭಗವತೀ ಕ್ಷೇತ್ರದಲ್ಲಿ ಕೆಂಡಸೇವೆ, ಮೂರ್ತಿದರ್ಶನ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ರಾತ್ರಿ 8.15 ರಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ .