ಪುತ್ತೂರಿನಲ್ಲಿ ಕಟೀಲ್, ಸದಾನಂದ ಗೌಡ ಫೋಟೋಗಳಿಗೆ ಚಪ್ಪಲಿ ಹಾರ, ಫೋಟೋ ವೈರಲ್
ಮಂಗಳೂರು, ಮೇ, 15: ರಾಜ್ಯದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪುತ್ತೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ಹೀನಾಯ ಸೋಲನುಭವಿಸುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಇದರಿಂದ ಬೇಸತ್ತ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ.ಸದಾನಂದ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ನಡೆದಿದೆ.
ಈಗಾಗಲೇ ರಾಜ್ಯದಲ್ಲೆಡೆ ಬಿಜೆಪಿ ಸೋಲುಂಡಿದ್ದು, ಇದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಪ್ರಮುಖವಾಗಿ ಘಟಾನುಘಟಿ ಬಿಜೆಪಿ ನಾಯಕರೇ ಸೋಲುಂಡಿರುವುದು ಆಶ್ಚರ್ಯ ಮೂಡಿಸಿದೆ. ಇದನ್ನೆಲ್ಲ ಗಮನಿಸಿದರೆ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಮಾಡಿಸಿದ್ದು, ಅದರಲ್ಲಿರುವ ಫೋಟೋಗಳಿಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಅಷ್ಟೇ ಅಲ್ಲದೆ "ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ" ಅಂತಾ ಬ್ಯಾನರ್ನಲ್ಲಿ ಬರೆಸುವ ಮೂಲಕ ತಮ್ಮ ಆಕ್ರೋಶದ ಜ್ವಾಲೆಯನ್ನು ಹೊರಹಾಕಿದ್ದಾರೆ. ಈ ಬ್ಯಾನರ್ ಅನ್ನು ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಅಳವಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದು, ಅವರು ಕಾಂಗ್ರೆಸ್ ವಿರುದ್ದ 4 ಸಾವಿರ ಮತಗಳ ಅಂತರದಲ್ಲಿ ಸೋಲುಂಡಿದ್ದರು. ಮತ್ತೊಂದೆಡೆ ಇದೇ ಕ್ಷೇತ್ರದಲ್ಲಿ ಬಿಜೆಪಿಯು ಕೂಡ ಕಡಿಮೆ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.
ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು ಬಿಜೆಪಿ ಸೋಲಿಗೆ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದಗೌಡ ಅವರೇ ಕಾರಣ ಅಂತಾ ಕಿಡಿಕಾರುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications