Lok Sabha Election 2024: ನಳಿನ್ ಕುಮಾರ್ ಕಟೀಲ್ಗೆ ಮಹತ್ವದ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್
ಬೆಂಗಳೂರು, ಮಾರ್ಚ್ 28: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಕೋಕ್ ನೀಡಲಾಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
ಈ ಪೈಕಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ಗೂ ಕೂಡ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಇದರ ಬೆನ್ನಲ್ಲೇ ಮಹತ್ವದ ಜವಾಬ್ದಾರಿಯನ್ನು ಬಿಜೆಪಿ ನಳೀನ್ ಕುಮಾರ್ ಕಟೀಲ್ ಹೆಗಲಿಗೆ ನೀಡಿದೆ.

ಬಿಜೆಪಿ ಕಾರ್ಯಕರ್ತನಾಗಿ, ಸಂಸದನಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ನಳೀನ್ ಕುಮಾರ್ ಕಟೀಲ್ಗೆ ಈ ಬಾರಿ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಕಮಲ ಅರಳಿಸಬೇಕು ಎನ್ನುವ ಬಹುದೊಡ್ಡ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ನಳೀನ್ ಕುಮಾರ್ ಕಟೀಲ್ಗೆ ನೀಡಿದೆ.
ಈ ಬಾರಿ ದಕ್ಷಿಣ ಭಾರತ ರಾಜ್ಯಗಳ ಮೇಲೆ ಹೆಚ್ಚಿನ ಗಮನ ವಹಿಸಿರುವ ಬಿಜೆಪಿ ವರಿಷ್ಠರು ಶತಾಯಗಾತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ಗುರಿಯಲ್ಲಿದ್ದಾರೆ. ಹೀಗಾಗಿ ಕೇರಳ ಜೊತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಮಹಾರಾಷ್ಟ್ರದ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಹರಿಯಾಣ ಬಿಜೆಪಿಯ ಮಾಜಿ ಮುಖ್ಯಸ್ಥ ಓಪಿ ಧನಕರ್ ಅವರನ್ನು ದೆಹಲಿಯ ಉಸ್ತುವಾರಿಗೆ ನೇಮಿಸಲಾಗಿದೆ.
ಕರ್ನಾಟಕದ ಶಾಸಕ ಅಭಯ್ ಪಾಟೀಲ್ಗೆ ತೆಲಂಗಾಣಕ್ಕೆ ಮತ್ತು ಅವಿನಾಶ್ ರೈ ಖನ್ನಾ ಅವರನ್ನು ತ್ರಿಪುರಕ್ಕೆ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Heat Wave Karnataka: ಕರಾವಳಿ ಬಿಸಿ ಕಾವಲಿಯ ಮೇಲೆ ಮಾಲಿನ್ಯದ ಥಡ್ಕಾ: ರಾಜಾರಾಂ ತಲ್ಲೂರು ಬರಹ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications