'ಕಾಂಗ್ರೆಸ್ ಮುಖಂಡರು ಮರಳು ಮಾಫಿಯಾ ಜೊತೆ ಸೇರಿ ಹಣ ಮಾಡಿದ್ದಾರೆ'
ಮಂಗಳೂರು, ಅಕ್ಟೋಬರ್. 26: ಕಾಂಗ್ರೆಸ್ ಮುಖಂಡರು ಮರಳು ಮಾಫಿಯಾದವರೊಂದಿಗೆ ಸೇರಿ ಹಣ ಮಾಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮರಳು ಕ್ಷಾಮ ಸೃಷ್ಟಿಯ ಹಿಂದೆ ಮರಳು ಮಾಫಿಯಾ ಕೈವಾಡವಿದೆ. ಈ ಜಿಲ್ಲೆಯಲ್ಲಿ ಮರಳು ನೀತಿಯ ಬಗ್ಗೆ ಸ್ಪಷ್ಟತೆ ಇಲ್ಲ. ಮರಳು ಮಫಿಯಾ ದಕ್ಷಿಣಕನ್ನಡ ಜಿಲ್ಲಾಡಳಿತವನ್ನು ನಿಯಂತ್ರಿಸುತ್ತಿದೆ.
ಮರಳು ಅಭಾವದ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತಲೆಕೆಡಿಸಿಕೊಂಡಿಲ್ಲ. ಕರಾವಳಿಯಾದ್ಯಂತ ಮರಳು ಕ್ಷಾಮ ತಲೆದೋರಿದ್ದು, ಜನಸಾಮಾನ್ಯರ ಮನೆ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ಮೊಟಕುಗೊಂಡಿವೆ. ಅದಲ್ಲದೇ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ.ರಾಜ್ಯ ಸರ್ಕಾರ ತಕ್ಷಣ ಮರಳು ಅಭಾವಕ್ಕೆ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ನಳಿನ ಕುಮಾರ್ ಕಟೀಲ್ ಒತ್ತಾಯಿಸಿದರು.

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿಯೂ ಭ್ರಷ್ಟಾಚಾರದ ನಡೆದಿದೆ ಎಂದು ಆರೋಪಿಸಿರುವ ನಳಿನ್ ಕುಮಾರ್ ಕಟೀಲ್, ಸಭೆ ನಡೆಸದೆ ತರಾತುರಿಯಲ್ಲಿ ಯೋಜನೆಗಳ ಪ್ರಕಟ ಮಾಡಲಾಗಿದ್ದು, ಮೂರು ಯೋಜನೆಗಳಿಗೆ ತರಾತುರಿಯಲ್ಲಿ ಅನುಮೋದನೆ ನೀಡಲಾಗಿದೆ.
ಎ ಬಿ ಶೆಟ್ಟಿ ಸರ್ಕಲ್ ನಿಂದ ನೆಹರೂ ಮೈದಾನದ ರಸ್ತೆ , ಕ್ಲಾಕ್ ಟವರ್ ನಿರ್ಮಾಣ , ಬಸ್ ಸ್ಟ್ಯಾಂಡ್ ನಿರ್ಮಾಣ ಯೋಜನೆಯಲ್ಲಿ ಅವ್ಯವಹಾರ ನಡೆಸಲಾಗಿದೆ. ಸಭೆಯಲ್ಲಿ ಈ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡದೆ ಕೋಟಿ ಕೋಟಿ ರೂ.ಅನುದಾನ ಒದಗಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿರುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications