ತೀರ್ಥಯಾತ್ರೆ ಮಾಡಿದ್ರೆ ಪುಣ್ಯ ಸಿಗುತ್ತಿತ್ತು: ರಮಾನಾಥ ರೈಗೆ ನಳಿನ್ ಟಾಂಗ್
ಮಂಗಳೂರು, ಡಿಸೆಂಬರ್ 13: ಸಚಿವ ರಮಾನಾಥ ರೈ 'ಸಾಮರಸ್ಯ ನಡಿಗೆ' ಪಾದಯಾತ್ರೆ ಬದಲು ತೀರ್ಥಯಾತ್ರೆ ಮಾಡಿದ್ದರೆ ಪುಣ್ಯವಾದರೂ ಸಿಗುತ್ತಿತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದ್ದಾರೆ.
ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕೇರಳದಲ್ಲಿ ಹತ್ಯಾಕಾಂಡ ನಡೆಸುತ್ತಿರುವ ಸಿಪಿಐಎಂ ಜತೆ ಸೇರಿ ಸಾಮರಸ್ಯ ಸಾರುತ್ತಿರುವುದು ವಿಪರ್ಯಾಸ ಎಂದು ಅವರು ಕಿಡಿಕಾರಿದರು.
ಸಚಿವ ರೈ ಅಸಮರ್ಥ ಆಡಳಿತವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯಕ್ಕೆ ತೊಡಕಾಗಿದೆ ಎಂದು ಆರೋಪಿಸಿದ ಅವರು, "ಕೇವಲ ಬಂಟ್ವಾಳ ಕ್ಷೇತ್ರದಲ್ಲಿ ಮಾತ್ರ ಪಾದಯಾತ್ರೆ ನಡೆಸಲು ಸಚಿವರು ಬಂಟ್ವಾಳ ತಾಲೂಕಿನ ಉಸ್ತುವಾರಿ ಸಚಿವರಲ್ಲ; ಇಡೀ ಜಿಲ್ಲೆಯ ಉಸ್ತುವಾರಿ ಸಚಿವರು," ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಕ್ಷೇತ್ರದಲ್ಲಿ ಮಾತ್ರ ಪಾದಯಾತ್ರೆ ಮಾಡುವ ಮೂಲಕ ಸಚಿವ ರಮಾನಾಥ್ ರೈ ಓಟಿನ ಬೇಟೆಯ ನಾಟಕ ಆರಂಭಿಸಿದ್ದಾರೆ ಎಂದು ಅವರು ದೂರಿದರು.
ರಾಜ್ಯದಲ್ಲಿ ದುರಾಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಪಾಲಿಗೆ ಹಾರ್ಲಿಕ್ಸ್ ಇದ್ದಂತೆ ಎಂದ ಅವರು ಈ ಸಂದರ್ಭದಲ್ಲಿ ವ್ಯಂಗ್ಯವಾಡಿದರು.
ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತ ಪ್ರಕರಣ ಪ್ರಸ್ತಾಪಿಸಿದ ನಳಿನ್ ಕುಮಾರ್ ಕಟೀಲ್, ಪರೇಶ್ ಮೇಸ್ತ ಪ್ರಕರಣವನ್ನು 'ಎನ್.ಐ.ಎ' ತನಿಖೆಗೆ ವಹಿಸುವಂತೆ ಒತ್ತಾಯಿಸಿದರು. ಡಿಸೆಂಬರ್ 18 ರಂದು ಹೊನ್ನಾವರ ದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications