ದೀಪಕ್ ಹತ್ಯೆ ತನಿಖೆಗೆ ಎನ್ಐಎ ವಹಿಸುವಂತೆ ನಳಿನ್ ಒತ್ತಾಯ
ನವದೆಹಲಿ, ಜನವರಿ 3: ಇಂದು ಮಂಗಳೂರಿನ ಕಾಟಿಪಳ್ಳದಲ್ಲಿ ಕೊಲೆಯಾದ ದೀಪಕ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ
ನವದೆಹಲಿಯಲ್ಲಿ ಮಾತನಾಡಿರುವ ಅವರು, "ದೀಪಕ್ ಕೊಲೆಯ ಹಿಂದೆ ಉಗ್ರರನ್ನು ಬೆಂಬಲಿಸುವವರ ಕೈವಾಡವಿದೆ. ನಮಗೆ ರಾಜ್ಯ ಸರಕಾರದ ತನಿಖೆ ಮೇಲೆ ನಂಬಿಕೆಯಿಲ್ಲ. ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು," ಎಂದು ಬೇಡಿಕೆಯಿಟ್ಟಿದ್ದಾರೆ.
ಹಿಂದೂ ಕಾರ್ಯಕರ್ತರ ಕೊಲೆಗೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ ಎಂದು ದೂರಿರುವ ಅವರು, "ದೀಪಕ್ ರಾವ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು," ಎಂದು ಒತ್ತಾಯಿಸಿದ್ದಾರೆ.

ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಇಂದು ಮಧ್ಯಾಹ್ನ ಸುಮಾರು 1.30ಕ್ಕೆ ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ ರಾವ್ (32) ಕೊಲೆ ಮಾಡಲಾಗಿದೆ.
ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್ ಸ್ಥಳೀಯ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ.

ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.
ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸಕ್ಕಿದ್ದರು ಎಂದು ಹೇಳಲಾಗಿದೆ.
ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ ಮಾಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications