ನಮೋ ಬ್ರಿಗೇಡ್ ಮಂಗಳೂರು ಕಚೇರಿ ಉದ್ಘಾಟನೆ
ಮಂಗಳೂರು, ಸೆ. 16 : ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಸಮಿತಿಯ ನೇತೃತ್ವವಹಿಸಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಶುಕ್ರವಾರ, ಸೆ.13ರಂದು ಆಯ್ಕೆ ಮಾಡಿದ ಬೆನ್ನ ಹಿಂದೆಯೇ ಕರ್ನಾಟಕದಲ್ಲಿ ನರೇಂದ್ರ ಮೋದಿ ಪರ ಪ್ರಚಾರಕ್ಕೆಂದು ಹುಟ್ಟಿಕೊಂಡಿರುವ ನಮೋ ಬ್ರಿಗೇಡ್ ಚಟುವಟಿಕೆಗಳು ಗರಿಗೆದರಿವೆ.
ಭ್ರಷ್ಟಾಚಾರವನ್ನು ಬುಡಮೂಲದಿಂದ ತೊಲಗಿಸಬೇಕು ಮತ್ತು ನರೇಂದ್ರ ಮೋದಿ ಅವರನ್ನು ಭಾರತದ ಪ್ರಧಾನಿ ಮಾಡಬೇಕು ಎಂಬ ಒಂದೇ ಉದ್ದೇಶದಿಂದ ಪಕ್ಷಭೇದ ಮರೆತು ಸಾವಿರಾರು ಯುವಕ ಮತ್ತು ಯುವತಿಯರು ನಮೋ ಬ್ರಿಗೇಡ್ ಸೇರುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಈಗಾಗಲೆ ನಗರಕ್ಕೊಂದರಂತೆ ನಮೋ ಬ್ರಿಗೇಡ್ ತಲೆಯೆತ್ತಿವೆ.
ನಮೋ ಬ್ರಿಗೇಡ್ ಮಂಗಳೂರು ಘಟಕ ತನ್ನ ಕಚೇರಿಯನ್ನು ಮಂಗಳೂರಿನಲ್ಲಿ ಸೋಮವಾರ, ಸೆ. 16ರಂದು ಬೆಳಿಗ್ಗೆ 10 ಗಂಟೆಗೆ ತೆರೆಯಿತು. ಭಾರತೀಯ ಸೇನೆಯ ನಿವೃತ್ತ ಬ್ರಿಗೇಡಿಯರ್ ಐ.ಎನ್. ರೈ, ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ಕಿಣಿ, ಖ್ಯಾತ ಅಂಕಣಕಾರ ಮತ್ತು ಪ್ರಖರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರು ದೀಪ ಬೆಳಗಿಸಿ ವಿಧ್ಯುಕ್ತವಾಗಿ ಕಚೇರಿಯನ್ನು ಉದ್ಘಾಟಿಸಿದರು. (ಚಿತ್ರ : ಮಂಜು ನೀರೇಶವಲ್ಯ)

ಮೋದಿ ಅವರು ಪ್ರಧಾನಿಯಾಗಬೇಕು
ಉದ್ಘಾಟನಾ ಭಾಷಣ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರು, ಕರ್ನಾಟಕ ರಾಜ್ಯಾದ್ಯಂತ 45 ನಮೋ ಬ್ರಿಗೇಡ್ ಶಾಖೆಗಳು ಪ್ರಾರಂಭವಾಗಿದ್ದು, ಪಕ್ಷಭೇದ ಮರೆತು ಯುವಕ, ಯುವತಿಯರು ಸಾವಿರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಭಾವಿ ಪ್ರಧಾನಿ ಎಂದೇ ಬಿಂಬಿತರಾಗಿರುವ ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಒಂದೇ ಉದ್ದೇಶದಿಂದ ನಮೋ ಬ್ರಿಗೇಡ್ ಪ್ರಾರಂಭವಾಗಿದೆ ಎಂದರು.

ಭ್ರಷ್ಟಾಚಾರ ಸಂಪೂರ್ಣ ನಾಶವಾಗಬೇಕು
ದೇಶದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದ್ದು ಇದನ್ನು ಸಂಪೂರ್ಣ ನಾಶಗೊಳಿಸುವವರೆಗೆ ದೇಶದ ಯುವಕರು ಇಂತಹ ಸಂಸ್ಥೆಗಳೊಂದಿಗೆ ಕೈಜೋಡಿಸಬೇಕು. ಮೋದಿಯವರು ಪ್ರಧಾನಿಯಾಗುವರು ಎಂಬ ಭರವಸೆ ನನಗಿದೆ ಎಂದು ಭಾರತೀಯ ಸೇನೆಯ ನಿವೃತ್ತ ಬ್ರಿಗೇಡಿಯರ್ ಐ.ಎನ್. ರೈ ವಿಶ್ವಾಸ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಹೋರಾಟದ ಮಾದರಿ ಹೋರಾಟ
ಸ್ವಾತಂತ್ರ್ಯ ಹೋರಾಟವನ್ನು ಕಂಡಿದ್ದ ಮಟ್ಟಾರು ಕಿಣಿಯವರು, ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ನಡೆಸಿದ ಹೋರಾಟದ ರೀತಿಯಲ್ಲೇ ಈಗ ಕೂಡ ಹೋರಾಡುವ ಪ್ರಸಂಗ ಬಂದಿದೆ. ದೇಶವನ್ನು ನರೇಂದ್ರ ಮೋದಿಯವರಂಥ ನಾಯಕರು ಮುನ್ನಡೆಸಿಕೊಂಡು ಹೋಗಬೇಕು ಎಂಬುದು ನನ್ನ ಆಶಯ ಎಂದು ನುಡಿದರು.

ಮಂಗಳೂರಿನಲ್ಲಿ ನಮೋ ಬ್ರಿಗೇಡ್ ಕಚೇರಿ
ನಮೋ ಬ್ರಿಗೇಡ್ ಕರ್ನಾಟಕ ಸಂಚಾಲಕರಾದ ನರೇಶ್ ಶೆಣೈ, ಮಂಗಳೂರಿನ ಪ್ರಮೋದ್ ರೈ, ಗೋಪಾಲಕೃಷ್ಣ ಭಟ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪತ್ರಕರ್ತರ ಹಿಂಡು
ನಮೋ ಬ್ರಿಗೇಡ್ ಕಚೇರಿ ಉದ್ಘಾಟನಾ ಸಮಾರಂಭದ ವರದಿಗೆಂದು ಬಂದ ಮಂಗಳೂರಿನ ಪತ್ರಕರ್ತರ ಸಮೂಹ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications