ವೀರೇಂದ್ರ ಹೆಗ್ಗಡೆ ಕಾರ್ಯಗಳನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು, ಅಕ್ಟೋಬರ್ 29 : ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಧರ್ಮಸ್ಥಳದ ಉಜಿರೆಯಲ್ಲಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿನ ಬೃಹತ್ ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ 'ರೂಪೆ ಕಾರ್ಡ್' ವಿತರಿಸಿದರು. ಇದು ಸ್ವ ಸಹಾಯ ಗುಂಪುಗಳಿಗೆ ನಗದು ರಹಿತ ಡಿಜಿಟಲ್ ವಹಿವಾಟು ನಡೆಸಲು ಅವಕಾಶ ನೀಡುತ್ತದೆ.
In Pics : ಧರ್ಮಸ್ಥಳದಲ್ಲಿ ನರೇಂದ್ರ ಮೋದಿ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶಾಲು ಹೊದಿಸಿ, ಸರಸ್ವತಿ ವಿಗ್ರಹ ನೀಡಿ ಮೋದಿ ಅವರನ್ನು ಸನ್ಮಾನಿಸಿದರು. ಧರ್ಮಾಧಿಕಾರಿಯಾಗಿ 50 ವರ್ಷ ಪೂರ್ಣಗೊಳಿಸಿದ ವೀರೇಂದ್ರ ಹೆಗ್ಗಡೆ ಅವರನ್ನು ಮೋದಿ ಸನ್ಮಾನಿಸಿದರು.
ಮೋದಿ ಭಾಷಣದ ಮುಖ್ಯಾಂಶಗಳು
* ನಮೋ ಮಂಜುನಾಥ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿ
* ಕಳೆದ ವಾರ ಆದಿ ಶಂಕರಾಚಾರ್ಯರು ಸ್ಥಾಪಿಸಿದ ಕೇದಾರನಾಥಕ್ಕೆ ಭೇಟಿ ನೀಡಿದ್ದೆ. ಈ ಬಾರಿ ದಕ್ಷಿಣದ ಮಂಜುನಾಥನ ದರ್ಶನ ಮಾಡುವ ಅವಕಾಶ ಸಿಕ್ಕಿದೆ. ಇದು ನನ್ನ ಸೌಭಾಗ್ಯ
* ಹೆಗ್ಗಡೆ ಅವರಂಥಹ ವ್ಯಕ್ತಿಯ ಮುಂದೆ ನಾನು ತುಂಬಾ ಚಿಕ್ಕವನು. ಅವರನ್ನು ಸನ್ಮಾನಿಸುವ ಅರ್ಹತೆ ನನಗಿದೆಯೇ?
* ವೀರೇಂದ್ರ ಹೆಗ್ಗಡೆ ಅವರನ್ನು ನಾನು ಹಲವು ಬಾರಿ ಭೇಟಿ ಮಾಡಿದ್ದೇನೆ ಅವರ ಮುಖದಲ್ಲಿನ ನಗು ಹಾಗೆಯೇ ಇದೆ. ಒಂದು ಧಾರ್ಮಿಕ ಕ್ಷೇತ್ರ ಹೇಗಿರಬೇಕು? ಎಂಬುದಕ್ಕೆ ಧರ್ಮಸ್ಥಳ ಮಾದರಿಯಾಗಿದೆ
* ಡಾ.ವೀರೇಂದ್ರ ಹೆಗ್ಗಡೆ ಅವರು ಬಡವರ, ಮಹಿಳೆಯರ ಅಭಿವೃದ್ಧಿ ಮಾಡಿದ್ದಾರೆ. ಅವರ ಕಾರ್ಯ ಎಲ್ಲರಿಗೂ ಆದರ್ಶ ಪ್ರಾಯ
* ದೇಶದ ತುಂಬಾ ನಡೆಯುತ್ತಿರುವ ಕೌಶಾಲ್ಯಾಭಿವೃದ್ಧಿ ಕಾರ್ಯಗಳಿಗೆ ಧರ್ಮಸ್ಥಳ ಸ್ಫೂರ್ತಿಯಾಗಿದೆ.
* ಜನಪರ ಕಾರ್ಯಗಳನ್ನು ಅನುಷ್ಠಾನ ಮಾಡುವುದನ್ನು ಹೆಗ್ಗಡೆ ಅವರಿಂದ ಕಲಿಯಬೇಕು ಎಂದು ಹೇಳಿದ ಮೋದಿ ಹೆಗ್ಗಡೆ ಅವರ ಕಾರ್ಯಗಳನ್ನು ಶ್ಲಾಘಿಸಿದರು.
* ಗ್ರಾಮೀಣ ವಿಕಾಸ ಯೋಜನೆಗಳು, ಬಡವರು ಮತ್ತು ಮಹಿಳೆಯರ ಅಭಿವೃದ್ಧಿಗೆ ವೀರೇಂದ್ರ ಹೆಗ್ಗಡೆ ಅವರು ಮಾಡಿರುವ ಕಾರ್ಯಗಳು ಆದರ್ಶವಾಗಿವೆ.
* ವೀರೇಂದ್ರ ಹೆಗ್ಗಡೆ ಅವರು ಧರ್ಮಾಧಿಕಾರಿಗಳಾಗಿ 50 ವರ್ಷ ಪೂರೈಸಿದ್ದಾರೆ. ಅವರ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಿಗೆ ನಾನು ನಮನ ಸಲ್ಲಿಸುತ್ತೇನೆ.
* ನಗದು ರಹಿತ ವ್ಯವಹಾರಕ್ಕೆ ಜನರು ಮುಂದಾಗಬೇಕು. ಧರ್ಮಸ್ಥಳದಲ್ಲಿ ಆರಂಭವಾದ ಯೋಜನೆಗಳು ಹಳ್ಳಿ-ಹಳ್ಳಿಗೆ ತಲುಪಿವೆ
* ಈ ಕ್ಷೇತ್ರದಲ್ಲಿ ನಾವು ಪರಿಸರ ಸಂರಕ್ಷಣೆ ಮಾಡೋಣ, ನೀರನ್ನು ಉಳಿಸೋಣ ಎಂದು ಸಂಕಲ್ಪ ಮಾಡೋಣ.
* ಕ್ಯಾಶ್ ಲೆಸ್ ಯೋಜನೆಯನ್ನು ಹಲವರು ಪ್ರಶ್ನಿಸಿದರು. ನೋಟು ನಿಷೇಧದ ಬಗ್ಗೆ ಟೀಕೆ ಮಾಡಿದರು. ನಾವು ಮುಂದಿನ ಪೀಳಿಗೆಯ ಬಗ್ಗೆ ಆಲೋಚನೆ ಮಾಡಿ ಯೋಜನೆಯನ್ನು ಜಾರಿಗೆ ತಂದೆವು
ಮೋದಿ ಭಾಷಣದ ವಿಡಿಯೋ ನೋಡಿ
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ











Click it and Unblock the Notifications