ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಂಪತಿ ಕುದ್ರೋಳಿಗೆ ಭೇಟಿ
ಪ್ರಧಾನಿ ಮೋದಿಯವರು ಈ ದೇಶಕ್ಕಾಗಿ ಬಿಡುವಿಲ್ಲದೆ ಶ್ರಮಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿಯನ್ನು ದೇವರು ಕೊಡಲಿ ಎಂದು ಮೋದಿ ಸಹೋದರ ಪ್ರಹ್ಲಾದ್ ಮೋದಿ ಮಂಗಳೂರಿನಲ್ಲಿ ಹೇಳಿದ್ದಾರೆ.
ಮಂಗಳೂರು, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ತನ್ನ ಪತ್ನಿ ಭಗವತಿ ಮೋದಿ ಸಹಿತ ಸೋಮವಾರ ಸಂಜೆ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕದ್ರಿ ಕ್ಷೇತ್ರದ ವತಿಯಿಂದ ಪ್ರಹ್ಲಾದ್ ಮೋದಿ ಹಾಗೂ ಅವರ ಪತ್ನಿಯನ್ನು ಸನ್ಮಾನಿಸಿ, ಗೌರವಿಸಲಾಯಿತು. ದೇವಸ್ಥಾನದ ಆವರಣದಲ್ಲಿ ಪ್ರಹ್ಲಾದ್ ಮೋದಿಯವರನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಬರಮಾಡಿಕೊಂಡರು.[ಮಂಗಳೂರಿನ ವೀರಯೋಧ ಸಂತೋಷ್ ಮನೆಗೆ ಗಣ್ಯರ ಭೇಟಿ]

ತದನಂತರ ಕುದ್ರೋಳಿ ಶ್ರೀ ಗೋಕರ್ಣಾನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಪ್ರಹ್ಲಾದ್ ಮೋದಿ ದಂಪತಿ ದೇವಾಲಯವನ್ನು ವೀಕ್ಷಿಸಿ ಪ್ರಸಾದ ಸ್ವೀಕರಿಸಿದರು.
ದೇವಸ್ಥಾನ ಭೇಟಿ ಸಂದರ್ಭ ಮಾತನಾಡಿದ ಮೋದಿ ಸಹೋದರ ಪ್ರಹ್ಲಾದ್ ಮೋದಿ, "ಪ್ರಧಾನಿ ಮೋದಿಯವರು ಈ ದೇಶಕ್ಕಾಗಿ ಬಿಡುವಿಲ್ಲದೆ ಶ್ರಮಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿಯನ್ನು ದೇವರು ಕೊಡಲಿ. ಲೋಕ ಕಲ್ಯಾಣಾರ್ಥವಾಗಿ ದಕ್ಷಿಣ ಭಾರತದ ದೇವಳಗಳ ಭೇಟಿಯನ್ನು ಕುಟುಂಬ ಸಮೇತ ಮಾಡುತ್ತಿದ್ದೇವೆ. ಈಗಾಗಲೇ ಹಂಪಿ ಭೇಟಿ ಮಾಡಿ ಮಂಗಳೂರಿಗೆ ಭೇಟಿ ನೀಡಿದ್ದೇನೆ. ಸಮಯದ ಅಭಾವ ಇರುವುದರಿಂದ ಮಂಗಳೂರು ಎರಡು ಪುಣ್ಯ ಕ್ಷೇತ್ರಗಳನ್ನು ಮಾತ್ರ ಭೇಟಿ ಮಾಡಲು ಸಾಧ್ಯವಾಯಿತು," ಎಂದರು.[ಖುರೇಷಿ ಮೇಲೆ ಪೊಲೀಸ್ ದೌರ್ಜನ್ಯ: ಸಿಐಡಿ ತನಿಖೆಗೆ ಆದೇಶ]

ನಂತರ ಮೋದಿ ಸಹೋದರ ಮಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸಿದರು. ಸ್ವಂತ ವಾಹನದ ಮೂಲಕ ದಕ್ಷಿಣ ಭಾರತ ಪ್ರವಾಸವನ್ನು ಕೈಗೊಂಡ ಪ್ರಹ್ಲಾದ್ ಮೋದಿ ತಂಡದಲ್ಲಿ ಒಟ್ಟು 20ಮಂದಿ ಕುಟುಂಬ ಸದಸ್ಯರಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications