ವಿಜಯ ಸಂಕೇಶ್ವರ್ ಹೇಳಿಕೆ ಬರೀ ಬೊಗಳೆ; ನರೇಂದ್ರ ನಾಯಕ್
ಮಂಗಳೂರು, ಏಪ್ರಿಲ್ 28; ಮೂಗಿಗೆ ಎರಡು ಹನಿ ಲಿಂಬೆ ರಸ ಹಾಕಿದರೆ ದೇಹದಲ್ಲಿರುವ ಆಕ್ಸಿಜನ್ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಉದ್ಯಮಿ, ವಿಆರ್ಎಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿಜಯ ಸಂಕೇಶ್ವರ ಹೇಳಿಕೆ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ.
ಕೆಲವು ಮಂದಿ ವಿಜಯ ಸಂಕೇಶ್ವರರ ಹೇಳಿಕೆಗೆ ಸರಿ ಅಂತಾ ಹೇಳಿದರೆ ಇನ್ನೂ ಕೆಲವರು ಇದು ಮೂರ್ಖತನದ ಪರಮಾವಧಿ ಅಂತಾ ಜರಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿರುವ ಹೇಳಿಕೆಗೆ ಮಂಗಳೂರಿನ ವಿಚಾರವಾದಿ ಚಿಂತಕ ಪ್ರೊ. ನರೇಂದ್ರ ನಾಯಕ್ ವಿರೋಧ ವ್ಯಕ್ತಪಡಿಸಿದ್ದಾರೆ.
"ಲಿಂಬೆ ರಸವನ್ನು ಮೂಗಿಗೆ ಹಾಕಿದರೆ ಆಕ್ಸಿಜನ್ ಸಮಸ್ಯೆ ನಿವಾರಣೆ ಆಗುತ್ತದೆ ಅನ್ನೋದು ತಪ್ಪು ಮಾಹಿತಿ. ಮೂಗಿನಲ್ಲಿ ಲಿಂಬೆ ರಸ ಹಾಕಿದರೆ ಕಫ ಹೋಗಿ ಉಸಿರಾಟ ಸರಾಗವಾಗುತ್ತದೆ ಅನ್ನೋದು ಮೂರ್ಖತನದ ಪರಮಾವಧಿಯಾಗಿದೆ. ಲಿಂಬೆ ರಸ ಹಾಕೋದು ಮೂಗಿಗೆ. ಮೂಗಿನಿಂದ ಬರೋದು ಸಿಂಬಳ. ಕಫ ಬರೋದು ಶ್ವಾಸಕೋಶದಿಂದ. ಹಾಗಿರುವ ಇದು ಯಾವ ರೀತಿ ಪರಿಣಾಮಕಾರಿಯಾಗುತ್ತದೆ?" ಎಂದು ಪ್ರಶ್ನಿಸಿದ್ದಾರೆ.

"ತುಂಬಾ ಅಸಿಡಿಕ್ ಆಗಿರುವ ಲಿಂಬೆಯನ್ನು ಮೂಗಿನ ಒಳಗೆ ಹಾಕಿದರೆ ಆಗುವ ಪರಿಣಾಮದ ಬಗ್ಗೆ ತಜ್ಞರೇ ಉತ್ತರಿಸಬೇಕಾಗುತ್ತದೆ. ಹೊರಗಿನ ಅಸ್ವಾಭಾವಿಕ ರಸವನ್ನು ಮೂಗಿಗೆ ಹಾಕಿದರೆ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಲಿದೆ" ಅಂತಾ ನರೇಂದ್ರ ನಾಯಕ್ ಅಭಿಪ್ರಾಯ ಪಟ್ಟಿದ್ದಾರೆ.
ವಿಜಯ ಸಂಕೇಶ್ವರ ಅವರು ಲಿಂಬೆ ಕೇವಲ ಆಕ್ಸಿಜನ್ ವೃದ್ಧಿಮಾಡುತ್ತದೆ ಅಂತಾ ಹೇಳಿಕೆ ನೀಡಿದ್ದಾರೆ ಹೊರತು ಕೊರೊನಾವನ್ನು ನಿವಾರಣೆ ಮಾಡುತ್ತದೆ ಅಂತಾ ಹೇಳಿಕೆ ನೀಡೋದಿಲ್ಲ ಅಂತಾ ಸ್ಪಷ್ಟೀಕರಣಗೂ ಉತ್ತರಿಸಿದ ನರೇಂದ್ರ ನಾಯಕ್, "ದೇಶದ ಮೆಡಿಕಲ್ ಕಾಯಿದೆ ಪ್ರಕಾರ ಇರುವ ರೋಗದ ಪಟ್ಟಿಗೆ ಯಾವುದೇ ಜೌಷಧ ಉಪಯೋಗಕಾರಿ ಅಂತಾ ಹೇಳುವ ಹಾಗಿಲ್ಲ. ಹಾಗೆ ಹೇಳಿದರೆ ಅದು ಕ್ರಿಮಿನಲ್ ಅಪರಾಧವಾಗುತ್ತದೆ".
"ಕಳೆದ ಫ್ರೆಬ್ರವರಿಯಲ್ಲಿ ಕೊರೊನಾವನ್ನೂ ಆ ಪಟ್ಟಿಗೆ ಸೇರಿಸಲಾಗಿದೆ. ಹಾಗಾಗಿ ವಿಜಯ ಸಂಕೇಶ್ವರ ಕೊರೊನಾಗೆ ಔಷಧಿ ಅಂತಾ ಹೇಳಿಲ್ಲ. ಆದರೆ ಮಾತಿನಲ್ಲಿ ಅದನ್ನು ವ್ಯಕ್ತಪಡಿಸಿದ್ದಾರೆ. ಜನರಿಗೆ ರೋಗದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕೇ ಹೊರತು ಇಂತಹ ನಾನ್ ಸೆನ್ಸ್ ಮಾಡಬಾರದು..ಜೀವರಸಾಯನ ಶಾಸ್ತ್ರಜ್ಞ ನಾಗಿ ಹೇಳೋದಾದ್ರೆ ವಿಜಯ ಸಂಕೇಶ್ವರರ ಹೇಳಿಕೆ ಅದು ಬರಿ ಬೊಗಳೆ" ಅಂತಾ ನರೇಂದ್ರ ನಾಯಕ್ ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications