'ಮಹಾತ್ಮಾ ಗಾಂಧೀಜಿಯಂತೆ ಗೋಡ್ಸೆ ಕೂಡಾ ದೇಶಭಕ್ತ'
ಮಂಗಳೂರು, ಡಿ.21: ನಗರದ ಬಲ್ಮಠ ರಸ್ತೆಯಲ್ಲಿರುವ ಅಮ್ನೇಶಿಯ ಪಬ್ಗೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಶನಿವಾರ ನಗರದ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ದೇಶಭಕ್ತಿ ವಿಷಯದಲ್ಲಿ ಗಾಂಧೀಜಿ ಹಾಗೂ ಗೋಡ್ಸೆ ಸಮಾನರು ಎಂದು ವಿವಾದಿತ ಹೇಳಿಕೆ ನೀಡಿದರು.
2009ರ ಜ.24 ರಂದು ಸಂಜೆ ನಗರದ ಅಮ್ನೇಶಿಯ ಪಬ್ಗೆ ದಾಳಿ ನಡೆಸಿ ಪಾರ್ಟಿ ನಡೆಸುತ್ತಿದ್ದ ಯುವಕ, ಯುವತಿಯರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. [ರಾಜ್ಯದಲ್ಲಿ ಶ್ರೀರಾಮ ಸೇನೆ ನಿಷೇಧಕ್ಕೆ ಚಿಂತನೆ]
ಈ ಬಗ್ಗೆ 40ಕ್ಕೂ ಹೆಚ್ಚು ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರಲ್ಲಿ ಮುತಾಲಿಕ್ ಸೇರಿ 31 ಮಂದಿ ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮುಂದಿನ ವಿಚಾರಣೆಯನ್ನು ಕೋರ್ಟ್ ಜ.27ಕ್ಕೆ ಮುಂದೂಡಿದೆ.
ಗೋಡ್ಸೆ ದೇಶ ಭಕ್ತ: ನ್ಯಾಯಾಲಯದಿಂದ ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಉತ್ತರ ಪ್ರದೇಶದ ಬಿಜೆಪಿ ಸಂಸದ ಸಾಕ್ಷಿ ಮಹಾರಜ್ ಇತ್ತೀಚೆಗೆ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, 'ಮಹಾತ್ಮ ಗಾಂಧೀಜಿಯನ್ನು ಕೊಂದ ನಾಥೂರಾಮ ಗೋಡ್ಸೆ ಕೂಡಾ ಗಾಂಧೀಜಿಯಷ್ಟೇ ದೇಶಭಕ್ತ. ಗಾಂಧೀಜಿಯನ್ನು ಕೊಂದ ವಿಷಯ ತಪ್ಪು ಅಥವಾ ಸರಿ ಎಂದು ನಾನು ಹೇಳುವುದಿಲ್ಲ. ಆದರೆ ಗೋಡ್ಸೆ ಅಪ್ಪಟ ದೇಶಭಕ್ತ, ಅಖಂಡ ಭಾರತದ ಕಲ್ಪನೆಯನ್ನು ಕಂಡವರು' ಎಂದು ಹೇಳಿದರು. [ಗಾಂಧೀಜಿ ಹಂತಕ ಕುರಿತ ಚಿತ್ರ ಬಿಡುಗಡೆಗೆ ಸಿದ್ಧ]

ಮರು ಮತಾಂತರಕ್ಕೆ ಸಮರ್ಥನೆ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮರು ಮತಾಂತರವನ್ನು ಸಮರ್ಥಿಸಿದ ಮುತಾಲಿಕ್, ಮತಾಂತರಗೊಂಡವರು ಮೂಲತಃ ಹಿಂದೂಗಳೇ. ಅವರು ಮತ್ತೆ ಯಾವುದೇ ಆಮಿಷ ಇಲ್ಲದೆ ಹಿಂದೂ ಧರ್ಮಕ್ಕೆ ಬರುವುದಾದರೆ ಅವರನ್ನು ಸ್ವಾಗತಿಸುತ್ತೇವೆ ಎಂದರು.
ಪಬ್ ದಾಳಿ ಪ್ರಕರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಮರು ಜೀವ ದೊರೆತಿದ್ದು, ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು. ಶ್ರೀ ರಾಮ ಸೇನೆ ಸಂಘಟನೆಗೆ ಪ್ರವೀಣ್ ವಾಲ್ಕೆ ಬಂದ ಬಳಿಕ ಸಂಘಟನೆ ವೇಗ ಪಡೆದಿದ್ದು, ಮತ್ತಷ್ಟು ವಿಸ್ತಾರಗೊಳ್ಳಲಿದೆ ಎಂದು ಹೇಳಿದರು.
ಕಳೆದ 10 ವರ್ಷಗಳಲ್ಲಿ ಸುಮಾರು 1700 ಮಂದಿಯನ್ನು ಮರು ಮತಾಂತರ ಮೂಲಕ ಹಿಂದೂ ಧರ್ಮಕ್ಕೆ ವಾಪಸ್ ಕರೆಸಿಕೊಳ್ಳುವಲ್ಲಿ ಶ್ರೀರಾಮಸೇನೆ ಯಶಸ್ವಿಯಾಗಿದೆ. ಸೋನಿಯಾ ಗಾಂಧಿ ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿ ಅನ್ಯ ಮತಗಳನ್ನು ತುಳಿದರು ಎಂದು ಮುತಾಲಿಕ್ ಅಭಿಪ್ರಾಯಪಟ್ಟರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications