ಪೆರುವಾಯಿ ಗ್ರಾಮ ಪಂಚಾಯತ್ ಆವರಣದಲ್ಲಿ ರಾಷ್ಟ್ರ ಧ್ವಜಕ್ಕೆ ಅಗೌರವ
ಮಂಗಳೂರು, ಜುಲೈ. 30: ಪಂಚಾಯತ್ ಕಚೇರಿ ಎದುರು ಹಗಲು ರಾತ್ರಿ ಎನ್ನದೆ ಕಳೆರಡು ದಿನ ರಾಷ್ಟ್ರ ಧ್ವಜ ಹಾರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ ಘಟನೆ ಬೆಳಕಿಗೆ ಬಂದಿದೆ.
ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಿತ್ಯವೂ ರಾಷ್ಟ್ರಧ್ವಜ ಹಾರಿಸಬೇಕೆಂಬ ಸರಕಾರಿ ಆದೇಶ ಅಧಿಕಾರಿ ವರ್ಗದ ಅಸಡ್ಡೆಯಿಂದ ಎಡವಟ್ಟಿಗೆ ಕಾರಣವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಳಿಯ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಭಾನುವಾರ ರಾತ್ರಿಯೂ ರಾಷ್ಟ್ರಧ್ವಜ ಹಾರಾಡುತ್ತಿದ್ದ ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಭಾನುವಾರ ರಜಾದಿನವಾಗಿದ್ದರಿಂದ ಧ್ವಜಾರೋಹಣ ಇರುವುದಿಲ್ಲ. ಆದರೆ, ಶನಿವಾರ ಹಾರಿಸಿದ ಧ್ವಜವನ್ನು ಭಾನುವಾರವೂ ತೆಗೆದಿಲ್ಲ. ಕಳೆದ ರಾತ್ರಿ ಕೂಡ ರಾಷ್ಟ್ರ ಧ್ವಜ ಹಾರಾಡಿದೆ. ಹೀಗಾಗಿ ಎರಡು ದಿನ ಕಳೆದರೂ, ಮಳೆ ಗಾಳಿಯಿಂದ ಧ್ವಜ ಬಣ್ಣ ಕಳೆದುಕೊಂಡಿದ್ದಲ್ಲದೆ ಅಧಿಕಾರಿ ವರ್ಗದ ಲೋಪದಿಂದಾಗಿ ಅಗೌರವ ತೋರಿದಂತಾಗಿದೆ.

ಬೆಳಗ್ಗೆ ಧ್ವಜಾರೋಹಣ ಮಾಡಿದರೆ ಸಂಜೆ ಆರು ಗಂಟೆ ಒಳಗೆ ಅವರೋಹಣ ನಡೆಸಬೇಕು ಎಂಬುದು ನಿಯಮ . ಆದರೆ, ಪಂಚಾಯತ್ ಕಚೇರಿಗಳಲ್ಲಿ ಧ್ವಜಾರೋಹಣ ಕಡ್ಡಾಯವಾದ ನಂತರ ಈ ನಿಯಮ ಪಾಲನೆಯಾಗುತ್ತಿಲ್ಲ. ಕೆಲವೆಡೆ ರಾತ್ರಿಯಾದರೂ, ಧ್ವಜ ಹಾರಾಡುವುದು ಕಂಡುಬರುತ್ತದೆ.
ಪೆರುವಾಯಿ ಪಂಚಾಯತ್ ಕಚೇರಿಯದ್ದು ಇಂಥ ಅಗೌರವ ತೋರಿದ ಘಟನೆಗೆ ನಿದರ್ಶನ ಮಾತ್ರ. ಈ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications