ಮಂಗಳೂರಲ್ಲಿ ಮಕ್ಕಳ ರಾಷ್ಟ್ರಮಟ್ಟದ ಕೃಷ್ಣ ವೇಷ ಸ್ಪರ್ಧೆ
ಮಂಗಳೂರು, ಆಗಸ್ಟ್, 19 : ಪೋಷಕರೇ ನೀವು ನಿಮ್ಮ ಮಕ್ಕಳಿಗೆ ಮನೆಯಲ್ಲಿ ಕೃಷ್ಣ ವೇಷ ಹಾಕಿ ಫೋಟೋ ತೆಗೆಸಿ ಖುಷಿ ಪಡ್ತಾ ಇರ್ತಿದ್ರಿ ಅಲ್ವ. ಇದೀಗ ಈ ಖುಷಿಯನ್ನು ನೀವು ರಾಷ್ಟ್ರಮಟ್ಟದ ವೇದಿಕೆಯಲ್ಲಿಯೂ ಹಂಚಿಕೊಳ್ಳಲು ಅವಕಾಶ ಒದಗಿದೆ.
ಕಲ್ಕೂರ ಪ್ರತಿಷ್ಠಾನದ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಸೆ. 5ರ ಮಧ್ಯಾಹ್ನ 1ರಿಂದ ಪುಟಾಣಿಗಳಿಗಾಗಿ ರಾಷ್ಟ್ರಮಟ್ಟದ ಶ್ರೀಕೃಷ್ಣ ವೇಷ ಸ್ಪರ್ಧೆ ಜರಗಲಿದೆ. [ನನ್ನ ಅಮ್ಮ ಕಳೆದುಹೋಗಿದ್ದಾರೆ, ಯಾರಾದರೂ ಹುಡುಕಿಕೊಡಿ]

ನವಜಾತ ಶಿಶುವಿನಿಂದ ಹಿಡಿದು 7ನೇ ತರಗತಿ ವರೆಗಿನ ಮಕ್ಕಳಿಗೆ ಒಟ್ಟು 25 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಏಕಕಾಲದಲ್ಲಿ 8 ವೇದಿಕೆಗಳಲ್ಲಿ ಮಕ್ಕಳ ಉತ್ಸವ ಆಯೋಜಿಸಲಾಗಿದ್ದು, ಈ ಬಾರಿ ಶ್ರೀಕೃಷ್ಣ ವರ್ಣ ವೈಭವ ಮುಕ್ತ ಚಿತ್ರಕಲಾ ಸ್ಪರ್ಧೆಯನ್ನು (ಒಟ್ಟು 6 ವಿಭಾಗದಲ್ಲಿ) ಸೇರಿಸಿಕೊಳ್ಳಲಾಗಿದೆ.
ಕಂದ ಕೃಷ್ಣ, ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ಕಿಶೋರ ಕೃಷ್ಣ, ಶ್ರೀ ಕೃಷ್ಣ, ಗೀತಾ ಕೃಷ್ಣ, ಸಾಂಪ್ರದಾಯಿಕ ಉಡುಗೆಯೊಂದಿಗೆ ಶಂಖನಾದ, ಸಾಂಪ್ರದಾಯಿಕ ಉಡುಗೆಯೊಂದಿಗೆ ಶಂಖ ಉದ್ಘೋಷ, ದೇವಕಿ ಕೃಷ್ಣ, ಯಶೋದೆ ಕೃಷ್ಣ (ಮುಕ್ತ ವಿಭಾಗ), ವಸುದೇವ ಕೃಷ್ಣ, ರಾಧಾಕೃಷ್ಣ (ಜೋಡಿ), ಯಕ್ಷ ಕೃಷ್ಣ, ನಂದಗೋಕುಲ (ಸಮೂಹ ವಿಭಾಗ), ಬಾಲಕೃಷ್ಣ ರಸಪ್ರಶ್ನೆ, ಶ್ರೀಕೃಷ್ಣ ಜೀನವನಾಧರಿತ ರಸಪ್ರಶ್ನೆ, ಛಾಯಾ ಕೃಷ್ಣ , ಶ್ರೀ ಕೃಷ್ಣವರ್ಣ ವೈಭವ ನಡೆಯಲಿದೆ.
ಪ್ರವೇಶ ಉಚಿತವಾಗಿದ್ದು, ಪ್ರವೇಶ ಪತ್ರಗಳನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕಲ್ಕೂರ ಪ್ರತಿಷ್ಠಾನ ಕೊಡಿಯಾಲ್ ಬೈಲ್, ಶಾರದಾ ವಿದ್ಯಾಲಯದ ದಯಾನಂದ ಕಟೀಲು, ಕದ್ರಿ ನವನೀತ ಶೆಟ್ಟಿ, ಸುಧಾಕರ ರಾವ್ ಪೇಜಾವರ, ಗೋಕುಲ್ ಕದ್ರಿ, ಶ್ರೀಕೃಷ್ಣ ಜನ್ಮ ಮಹೋತ್ಸವ ಸಮಿತಿ ಮಲ್ಲಿಕಟ್ಟೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿಗಳು ಫಳ್ನೀರು ಇಲ್ಲಿ ಪಡೆಯಬಹುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications