ಸಹಸ್ರಲಿಂಗೇಶ್ವರದಲ್ಲಿ ನೇತ್ರಾವತಿ ಹಾಗು ಕುಮಾರಧಾರ ಸಂಗಮ: ಭಕ್ತರಿಂದ ಗಂಗಾಪೂಜೆ
Recommended Video

ಮಂಗಳೂರು, ಆಗಸ್ಟ್ 15: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಒಂದೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನೊಂದೆಡೆ ಕೆಲ ಅಪರೂಪದ ವಿದ್ಯಮಾನಗಳಿಗೂ ಸಾಕ್ಷಿಯಾಗುತ್ತಿದೆ. ಸರಿಸುಮಾರು 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಸಂಗಮಗೊಂಡಿದೆ.
ಸತತವಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಿದ್ದರೂ, ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗಿರಲಿಲ್ಲ. ಆದರೆ ರಾತ್ರಿ ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ನಿನ್ನೆ ರಾತ್ರಿ ನದಿಗಳ ಸಂಗಮವಾಗಿದ್ದು, ಎರಡೂ ನದಿಗಳ ನೀರು ದೇವಸ್ಥಾನದ ಒಳಗೆ ನುಗ್ಗಿ ಗರ್ಭಗುಡಿ ಪ್ರವೇಶ ಮಾಡುವ ಅಪರೂಪದ ಸನ್ನಿವೇಶಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

ಇದೇ ಸಂದರ್ಭದಲ್ಲಿ ಸೇರಿದ್ದ ಅರ್ಚಕರು ಮತ್ತು ಭಕ್ತವೃಂದ ಗಂಗಾಪೂಜೆ ನಡೆಸಿದರು. ಈ ಹಿಂದೆ ಕೊನೆಯ ಬಾರಿಗೆ ಅಂದರೆ 2013ರ ಜುಲೈ 4ರಂದು ಹಾಗೂ ಅದಕ್ಕೂ ಹಿಂದೆ 2008ರ ಆಗಸ್ಟ್ 13ರಂದು ಉಭಯ ನದಿಗಳು ಸಂಗಮಗೊಂಡಿದ್ದವು.

ನಿನ್ನೆ ಮುಂಜಾನೆಯಿಂದಲೇ ತಟದಲ್ಲಿ ನದಿಗಳ ಸಂಗಮಕ್ಕಾಗಿ ಭಕ್ತರು ಕಾದು ಕುಳಿತಿದ್ದರು. ಇದರಿಂದಾಗಿ ಉಪ್ಪಿನಂಗಡಿಯ ಹೆದ್ದಾರಿಯಲ್ಲಿ ಭಾರೀ ವಾಹನ ದಟ್ಟಣೆ ಆಗಿತ್ತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications