ಪಿಲಿಕುಳ ಜೈವಿಕ ಉದ್ಯಾನವನಕ್ಕೆ ವಿಶೇಷ ವಿದೇಶಿ ಪ್ರಾಣಿಗಳ ಆಗಮನ
ಮಂಗಳೂರು ಡಿಸೆಂಬರ್ 21: ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮತಿಯಂತೆ ಗುಜರಾತ್ ಗ್ರೀನ್ ಮೃಗಾಲಯದಿಂದ ಈ ಹೊಸ ಅತಿಥಿಗಳ ಆಗಮನವಾಗಿದೆ.
ಮಧ್ಯ ಮತ್ತು ದಕ್ಷಿಣ ಅಮೆರಿಕಾ, ಬ್ರೆಜಿಲ್, ಅರ್ಜೆಂಟೈನಾ, ಆಫ್ರಿಕಾ ಹೈ ಆಸ್ಟ್ರೇಲಿಯಗಳಲ್ಲಿ ಕಾಣಸಿಗುವ ಸಣ್ಣ ಜಾತಿಯ ಅಳಿಲು ಕಪಿ, ಮರ್ಮೊಸೆಟ್, ಕೆಂಪು ಕೈಯ ಟೆಮಾರಿನ, ಮಾರ ಮಾರ, ಬೃಹತ್ ಗಾತ್ರದ ನೀಲಿ ಬಂಗಾರದ ಮಕಾವು, ಮಿಲಿಟರಿ ಮಕಾವು, ಗಾಲಾ ಕೋಕಟು, ಹಸಿರು ಟೊರೆಕೊ ಮತ್ತು ವಿವಿಧ ಜಾತಿಯ ವಿದೇಶದ ಪಕ್ಷಿಗಳನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ತರಲಾಗಿದೆ. ಪಿಲಿಕುಳದಲ್ಲಿ ಹೆಚ್ಚುವರಿಯಾಗಿದ್ದ ಹುಲಿಗಳು, ಚಿರತೆಗಳು, ಕಾಡುನಾಯಿಗಳು ಮತ್ತು ವಿವಿಧ ಜಾತಿಯ ಉರಗಗಳನ್ನು ಅಲ್ಲಿಗೆ ನೀಡಲಾಗಿದೆ.
ಇನ್ನು ಹಲವು ವಿದೇಶಿ ಪ್ರಾಣಿಗಳನ್ನು ಉಚಿತವಾಗಿ ಕೊಡಲಾಗುವುದೆಂದು ಗ್ರೀನ್ ಮೃಗಾಲಯದ ಅಧಿಕಾರಿಗಳು ಆಶ್ವಾಸನೆ ನೀಡಿದ್ದಾರೆ. ಹೊಸದಾಗಿ ಆಗಮಿಸಿರುವ ಪಾಣಿಗಳನ್ನು ಆರೋಗ್ಯ ಪರಿಶೀಲನೆಗೆ ಮತ್ತು ಇಲ್ಲಿಯ ವಾತಾವರಣಕ್ಕೆ ಒಗ್ಗುವ ತನಕ ಕ್ವಾರೆಂಟೈನ್ ನಲ್ಲಿ ಇಡಲಾಗಿದೆ. ಪಕ್ಷಿಗಳು ವೀಕ್ಷಣೆಗೆ ಮುಕ್ತವಾಗಿದೆ.

ಪ್ರಾಣಿಗಳು ಕ್ವಾರೆಂಟೈನ್ ಅವಧಿ ಮುಗಿದ ತಕ್ಷಣ ಸಾರ್ವಜನಿಕರ ವೀಕ್ಷಣೆಗೆ ಇಡಲಾಗುತ್ತದೆ. ಮೃಗಾಲಯದ ವೈದ್ಯಾಧಿಕಾರಗಳು, ಬಯೋಲೋಜಿಸ್ಟ್ ಗಳು ಮತ್ತು ಪ್ರಾಣಿಪರಿಪಾಲಕರು ಪ್ರಾಣಿಗಳ ಆರೋಗ್ಯದ ಮೇಲೆ ನಿಗಾವಹಿಸುತ್ತಿದ್ದಾರೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್ ಜೆ ಭಂಡಾರಿ ಹೇಳಿದ್ದಾರೆ.

ಗ್ರೀನ್ ಮೃಗಾಲಯ ಮತ್ತು ರೆಸ್ಕ್ಯೂ ಸೆಂಟರ್ ನ ಮಾತೃ ಸಂಸ್ಥೆ ರಿಲಯನ್ಸ್ ಫೌಂಡೇಶನ್, ಪಿಲಿಕುಳ ಮೃಗಾಲಯಕ್ಕೆ ಆಗಮಿಸಿರುವ ಹೊಸ ಪ್ರಾಣಿಗಳ ಆವರಣ ರಚನೆಗೆ ಹಾಗೂ ಅಭಿವೃದ್ಧಿಗೆ 1 ಕೋಟಿ ರೂಪಾಯಿ ದೇಣಿಗೆ ನೀಡಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್. ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications