ಏಪ್ರಿಲ್ ನಿಂದ ದ.ಕ ಜಿಲ್ಲಾದ್ಯಾಂತ ಹಳ್ಳಿಗೊಬ್ಬ ಪೊಲೀಸ್!
ಮಂಗಳೂರು, ಮಾರ್ಚ್. 29 : ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ 'ಬೀಟ್ ಸಿಸ್ಟಮ್' ನ್ನು ಪರಿಣಾಮಕಾರಿಯಾಗಿ ಅಳವಡಿಸುವ ದೃಷ್ಟಿಯಿಂದ ಹಳ್ಳಿಗೊಂದು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಬೊರಸೆಯವರು, ಈ ಹಳ್ಳಿಗೊಬ್ಬ ಪೊಲೀಸ್ ಮಾದರಿಯ ವಿನೂತನ ಗಸ್ತು ವ್ಯವಸ್ಥೆ ಏಪ್ರಿಲ್ 01ರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದೆ. ಈಗಾಗಲೇ ಎಲ್ಲ ಹಳ್ಳಿಗಳಲ್ಲಿಯೂ ಸಮಿತಿಯ ಸದಸ್ಯರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.[ಏ,1ರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಸರ್ವೀಸ್]

ಆಯಾ ಹಳ್ಳಿಯ ಉಸ್ತುವಾರಿ ವಹಿಸಿಕೊಂಡ ಪೊಲೀಸ್ ಹಳ್ಳಿಯ ಎಲ್ಲ ವಿಚಾರಗಳ ಕಡೆ ಗಮನಹರಿಸಬೇಕು. ಅವರ ವಸತಿ ಕೂಡ ಹಳ್ಳಿಯಲ್ಲೇ. ಈಗ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ತಾಲೂಕಿನ ಠಾಣೆಗಳಲ್ಲಿ ಪ್ರಾಯೋಗಿಕವಾಗಿ ಆರಂಭವಾಗಲಿದ್ದು ಅನಂತರ ಎಲ್ಲ ಠಾಣೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.
ಏನಿದು ಹಳ್ಳಿಗೊಬ್ಬ ಪೊಲೀಸ್?
ಹಳ್ಳಿಗೊಬ್ಬ ಪೊಲೀಸ್ ವ್ಯವಸ್ಥೆಯಲ್ಲಿ ಪ್ರತಿ ಹಳ್ಳಿಗಳಲ್ಲಿ ನಾನಾ ವರ್ಗ, ಜಾತಿಯ ಸ್ಥಳೀಯ 50 ಮಂದಿಯ ತಂಡ ನೇಮಿಸಲಾಗುತ್ತದೆ. ಈ ತಂಡಕ್ಕೆ ಮುಖ್ಯಸ್ಥನಾಗಿ ಒಬ್ಬ ಒಬ್ಬ ಪೇದೆಯನ್ನು ನಿಯೋಜಿಸಲಾಗುತ್ತದೆ.
ನಿಯೋಜನೆಗೊಂಡಿರು ಪೇದೆ ತಂಡದ ಜತೆ ನಿಕಟ ಸಂಪರ್ಕ ಹೊಂದಿರಬೇಕು. ಈತನಿಗೆ ಆ ಗಸ್ತಿನ ಎಲ್ಲ ಪೊಲೀಸ್ ಕರ್ತವ್ಯಗಳ ಸಂಪೂರ್ಣ ಜವಾಬ್ದಾರಿ ನೀಡುವುದು.
ಮಾತ್ರವಲ್ಲದೆ ಒಬ್ಬ ಸಬ್ ಇನ್ಸ್ ಪೆಕ್ಟರ್ ನಂತೆ ಈತನಿಗೆ ಹಳ್ಳಿಗಳಲ್ಲಿ ಆಗುವ ಎಲ್ಲಾ ಆಗು ಹೋಗುಗಳ ಮಾಹಿತಿ ಇರಬೇಕು. ಈ ರೀತಿಯಾಗಿ ಸ್ಥಳೀಯ ವಿದ್ಯಮಾನಗಳ ಮಾಹಿತಿ ಸಂಗ್ರಹಿಸಿ, ಅಪರಾಧ ಹಾಗೂ ಅಪರಾಧಿಗಳ ಕುರಿತು ಮಾಹಿತಿ ಕಲೆ ಹಾಕುವುದು.
ರೌಡಿ ಚಟುವಟಿಕೆಗಳ ಮೇಲೆ ನಿಗಾ, ರೌಡಿ ಶೀಟರ್ ತೆರೆಯುವುದು, ಪಾಸ್ ಪೋರ್ಟ್ ಅರ್ಜಿ, ಉದ್ಯೋಗ ನೇಮಕಾತಿ, ಪರಿಶೀಲನೆ ಸೇರಿದಂತೆ ಪೊಲೀಸ್ ಇಲಾಖೆಯ ಕೆಲಸಗಳನ್ನು ಕಾನ್ಸ್ ಟೇಬಲ್ ಗಳು ಸಮಿತಿಯ ಸದಸ್ಯರ ನೆರವಿನಲ್ಲಿ ಮಾಡಲಿದ್ದಾರೆ ಎಂದು ಎಸ್ಪಿ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications