ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೊಸದಾಗಿ ಅಭಿವೃದ್ಧಿ ಸಮಿತಿ ನೇಮಕ

ಮಂಗಳೂರು, ಅಕ್ಟೋಬರ್ 30: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೊಸದಾಗಿ ಅಭಿವೃದ್ಧಿ ಸಮಿತಿಯನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ಒಂಬತ್ತು ಜನ ಸದಸ್ಯರ ವ್ಯವಸ್ಥಾಪನಾ ಸಮಿತಿ ಇದ್ದು, ಅದರ ಕಾರ್ಯಾವಧಿ ಪೂರ್ಣಗೊಂಡು ಒಂದು ವರ್ಷದ ನಂತರ ಇದೀಗ ಹೊಸದಾಗಿ ದೇವಸ್ಥಾನ ಅಭಿವೃದ್ಧಿ ಸಮಿತಿಯನ್ನು ನೇಮಕ ಮಾಡಲಾಗಿದೆ. ಇದರಲ್ಲಿ ಐದು ಮಂದಿ ಸದಸ್ಯರು ಒಳಗೊಂಡಿದ್ದಾರೆ.

ಪಿ.ಜಿ.ಎಸ್ ಪ್ರಸಾದ್, ಕೃಷ್ಣ ಶೆಟ್ಟಿ, ಪ್ರಸನ್ನ, ಎಸ್. ಮೋಹನ್ ರಾಮ ಹಾಗೂ ವನಜಾ ಭಟ್ ಅವರು ದೇವಸ್ಥಾನ ಅಭಿವೃದ್ದಿ ಸಮಿತಿಯ ಸದಸ್ಯರಾಗಿದ್ದು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಮಿತಿಯ ಕಾರ್ಯದರ್ಶಿಯಾಗಿರಲಿದ್ದಾರೆ.

Mangaluru: New Development Committee Appointed For Kukke Subramanya Swamy Temple

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಹಿಂದೆ ಒಂಬತ್ತು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿ ಕಾರ್ಯ ನಿರ್ವಹಿಸುತ್ತಿತ್ತು. ಅದರ ಕಾರ್ಯಾವಧಿ ವರ್ಷಗಳ ಹಿಂದೆಯೇ ಅಂತ್ಯವಾಗಿತ್ತು. ಆದರೆ ನಂತರ ವ್ಯವಸ್ಥಾಪನಾ ಸಮಿತಿಯನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ವ್ಯವಸ್ಥಾಪನಾ ಸಮಿತಿಯ ಬದಲಿಗೆ ಅಭಿವೃದ್ಧಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ.

ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರಿಗೆ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಆದೇಶದಲ್ಲಿ ಶಾಸಕರ ಹೆಸರಿಲ್ಲದ ಕಾರಣ ಸಮಿತಿಯಲ್ಲಿರುವ ಎಸ್.ಮೋಹನ್ ರಾಮ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಹೆಚ್ಚಳವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+