ನವ ಮಂಗಳೂರು ಬಂದರಿಗೆ ಬಂದಿದ್ದ ಐಷಾರಾಮಿ ಹಡಗು
ಮಂಗಳೂರು, ನ. 29: ಕೊರೊನಾ ಸಾಂಕ್ರಾಮಿಕದ ಸುಮಾರು ಎರಡು ವರ್ಷಗಳ ಬಳಿಕ ನವ ಮಂಗಳೂರು ಬಂದರಿಗೆ ಈ ಋತುವಿನ ಮೊದಲ ಐಷಾರಾಮಿ ಹಡಗು ಬಂದಿತ್ತು. 600 ಕ್ಕೂ ಹೆಚ್ಚು ಜನರಿದ್ದ ಹಡಗು ಮುಂಜಾನೆ ಬಂದರನ್ನು ತಲುಪಿತ್ತು.
ಯೂರೋಪ್ನ ಮಾಲ್ಟಾದಿಂದ ಬಂದಿದ್ದ ಈ ಐಷಾರಾಮಿ ಹಡಗಿನ ಹೆಸರು 'ಎಂಎಸ್ ಯುರೋಪ-2. ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಇದ್ದರು.
ಈ ಹಡಗಿನ ಸಾಗಿಸುವ ಸಾಮರ್ಥ್ಯವು 42,830 ಟನ್ ಮತ್ತು ಅದರ ಪ್ರಸ್ತುತ ಡ್ರಾಫ್ಟ್ 6.3 ಮೀಟರ್ ಎಂದು ವರದಿಯಾಗಿದೆ. 224.38 ಮೀಟರ್ ಉದ್ದ ಹಾಗೂ 29.99 ಮೀಟರ್ ಅಗಲವಿರುವ ಪ್ರಯಾಣಿಕ ಹಡಗು ಗೋವಾದಿಂದ ಮಂಗಳೂರಿನತ್ತ ಪ್ರಯಾಣಿಸಿತ್ತು.

ಎನ್ಎಂಪಿಎದಲ್ಲಿ 11 ವಲಸೆ ಹಾಗೂ ನಾಲ್ಕು ಕಸ್ಟಮ್ಸ್ ಕೌಂಟರ್ಗಳನ್ನು ತೆರೆದು ಅತಿಥಿಗಳನ್ನು ಸ್ವಾಗತಿಸಲಾಗಿದೆ. ಪ್ರಯಾಣಿಕರಿಗಾಗಿ ಆರು ಬಸ್, 15 ಟ್ಯಾಕ್ಸಿಗಳ ವ್ಯವಸ್ಥೆ ಮಾಡಲಾಗಿತ್ತು. ಆಯುಶ್ ಇಲಾಖೆಯ ವತಿಯಿಂದ ಧ್ಯಾನ ಕೇಂದ್ರ ಹಾಗೂ ಭಾರತೀಯ ಪುರಾಣಗಳ ಮಾಹಿತಿ ನೀಡುವಂಥ ಕಾರ್ಯಕ್ರಮಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಈ ಐಷಾರಾಮಿ ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ.
ಮಂಗಳೂರಿನಿಂದ ಈ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿದೆ. ಫೆಬ್ರವರಿ 18, 2020 ರಂದು ಕೊನೆಯ ಕ್ರೂಸ್ ಹಡಗು ಮಂಗಳೂರು ಬಂದರಿಗೆ ಬಂದಿತ್ತು. ಇದರಲ್ಲಿ 1,800 ಪ್ರಯಾಣಿಕರು ಮತ್ತು 800 ಸಿಬ್ಬಂದಿಯನ್ನು ಹೊಂದಿತ್ತು.

ಕೊರೊನಾ ಸಾಂಕ್ರಾಮಿಕದ ಬೆನ್ನಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿದ್ದ ನಿರ್ದೇಶನದ ಮೇರೆಗೆ ಮಾರ್ಚ್ 2020 ರಲ್ಲಿ ಕ್ರೂಸ್ ಹಡಗುಗಳನ್ನು ಬಂದರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications