ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಮೇಯರ್, ಉಪಮೇಯರ್ ಆಯ್ಕೆ
ಮಂಗಳೂರು, ಸೆಪ್ಟೆಂಬರ್, 08: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ.
ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.

ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಇಬ್ಬರು ಎಸ್ಡಿಪಿಐ ಸದಸ್ಯರು ಇದ್ದಾರೆ. ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸದಸ್ಯರು ಮೇಯರ್ ಹುದ್ದೆಗೆ ಆಯ್ಕೆಯಾಗಿದ್ದರು. ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಮೇಯರ್ ಹುದ್ದೆ, ಮಂಗಳೂರು ಉತ್ತರಕ್ಕೆ ಉಪಮೇಯರ್ ಹುದ್ದೆ ಸಿಕ್ಕಿದೆ.
ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಕಾಂಗ್ರೆಸ್ನಿಂದ ನವೀನ್ ಆರ್.ಡಿ.ಸೋಜ ನಾಮಪತ್ರ ಸಲ್ಲಿಸಿದ್ಧರು. ಕಾಂಗ್ರೆಸ್ನ ನವೀನ್ ಆರ್ ಡಿಸೋಜ ಅವರ ಪರವಾಗಿ 14 ಮತಗಳು, ವಿರುದ್ದವಾಗಿ 47 ಮತಗಳು ಬಿದ್ದರೆ, ಎಸ್ಡಿಪಿಐನ ಇಬ್ಬರು ತಟಸ್ಥರಾಗಿದ್ದರು. ಬಿಜೆಪಿಯ ಸುಧೀರ್ ಶೆಟ್ಟಿ ಕಣ್ಣೂರು ಇವರ ಪರವಾಗಿ 47 ಮತಗಳು, ವಿರುದ್ದವಾಗಿ 14 ಮತಗಳು ಬಿದ್ದಿದ್ದು, ಇಬ್ಬರು ತಟಸ್ಥರಾಗಿದ್ಧರು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ ನಿಚ್ಚಳ ಬಹುಮತ ಇದ್ದು, ಕೊಡಿಯಾಲ್ಬೈಲ್ ವಾರ್ಡ್ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಅವರು ಮೇಯರ್ ಹುದ್ದೆಗೆ ಬಹುಮತದಿಂದ ಆಯ್ಕೆಯಾಗಿದ್ದಾರೆ.
ಪಾಲಿಕೆಯಲ್ಲಿರುವ ಪರಿಶಿಷ್ಟ ಜಾತಿಯ ಏಕೈಕ ಸದಸ್ಯೆ ಪಣಂಬೂರು ವಾರ್ಡ್ ಸುನೀತಾ ಅವರು ಉಪಮೇಯರ್ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಉಪಸ್ಥಿತರಿದ್ದು, ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದರು. ಇದೇ ವೇಳೆ ವಿವಿಧ ಸ್ಥಾಯಿ ಸಮಿತಿಗಳಿಗೆ ನೇಮಕ ಮಾಡಲಾಯಿತು.
ಸುಧೀರ್ ಶೆಟ್ಟಿ ಅವರು 3ನೇ ಬಾರಿಗೆ ಪಾಲಿಕೆಗೆ ಆಯ್ಕೆಯಾದವರು. ಮುಖ್ಯ ಸಮಿತಿ ಸಚೇತಕರಾಗಿ, ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಕಳೆದ ವರ್ಷ ಮೇಯರ್ ಚುನಾವಣೆ ವೇಳೆ ಸುಧೀರ್ ಅವರ ಹೆಸರೂ ಕೇಳಿಬಂದಿತ್ತು. ಬಿಲ್ಲವ ಸಮುದಾಯಕ್ಕೆ ಆಧ್ಯತೆ ನೀಡಿದ್ದ ಬಿಜೆಪಿ, ಜಯಾನಂದ ಅಂಚನ್ ಅವರಿಗೆ ಅವಕಾಶ ಕಲ್ಪಿಸಿತ್ತು.
ಮಂಗಳೂರು ಪಾಲಿಕೆ ಚುನಾವಣೆ 2019ರ ನವೆಂಬರ್ 12ಕ್ಕೆ ನಡೆದಿದ್ದು, ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್ಡಿಪಿಐ 2 ಸ್ಥಾನಗಳನ್ನು ಪಡೆದಿತ್ತು. ಮೊದಲ ಅವಧಿಗೆ ಮೇಯರ್ ಆಗಿ ದಿವಾಕರ್ ಪಾಂಡೇಶ್ವರ, ಎರಡನೇ ಅವಧಿಗೆ ಪ್ರೇಮಾನಂದ ಶೆಟ್ಟಿ ಮೂರನೇ ಅವಧಿಗೆ ಜಯಾನಂದ ಅಂಚನ್ ಆಯ್ಕೆಯಾಗಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications