'ಮುಂದಿನ ಚುನಾವಣೆಯಲ್ಲಿ ಮಹದೇವ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಕೊಡಿ'
ಮಂಗಳೂರು, ಜನವರಿ. 05 : ದಿವಂಗತ ಮಹದೇವ ಪ್ರಸಾದ್ ಅವರ ಪತ್ನಿ ಅಥವಾ ಮಗನಿಗೆ ಅನುಕಂಪದ ಆಧಾರದ ಮೇಲೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಸಿಎಂ ಸಿದ್ದರಾಮಯ್ಯಗೆ ತಾಕೀತು ಮಾಡಿದ್ದಾರೆ.
ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಪೂಜಾರಿ, 'ಮುಂದಿನ ಚುನಾವಣೆಯಲ್ಲಿ ದಿವಂಗತ ಮಹದೇವ ಪ್ರಸಾದ್ ಅವರ ಕುಟುಂಬಕ್ಕೆ ಟಿಕೆಟ್ ನೀಡಿ. ಇಲ್ಲದಿದ್ದರೆ ಮುಂದೆ ದೊಡ್ಡ ಅನಾಹುತವನ್ನ ಎದುರಿಸಬೇಕಾದಿತು ಎಂದು ಎಚ್ಚರಿಕೆ ನೀಡಿದರು.
ಮುಂದಿನ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಿದರೇ ಕಾಂಗ್ರೆಸ್ ಗೆ ಪ್ಲಸ್ ಪಾಯಿಂಟ್. ಇಲ್ಲದಿದ್ದರೆ ಕಾಂಗ್ರೆಸ್ ಗೆ ಮೈನಸ್ ಪಾಯಿಂಟ್ ಆಗಲಿದೆ ಎಂದರು.

ದಕ್ಷಿಣ ಕನ್ನಡಕ್ಕೆ ಬೆಂಕಿ ಇಡುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಿಡಿಕಾರಿದ ಅವರು, ' ಕರಾವಳಿಗರ ಮನೆಗೆ ಬೆಂಕಿ ಇಟ್ಟು ಪಾಪದ ಕುಂಡದಲ್ಲಿ ಸಾಯುತ್ತೀರಾ? ಎಂದು ಪ್ರಶ್ನಿಸಿದರು.
ಕೂಡಲೇ ಕಟೀಲ್ ಕರಾವಳಿಯ ಪ್ರತಿ ಮನೆ-ಮನೆಗೆ ಹೋಗಿ ಅವರ ಕಾಲಿಗೆ ಬಿದ್ದು ಕ್ಷಮೆಯಾಚಿಸಬೇಕೆಂದು ಹೇಳಿದರು.
ಮಹದಾಯಿ ವಿವಾದದ ಕುರಿತು ಮಾತನಾಡಿದ ಪೂಜಾರಿ, ಎತ್ತಿನಹೊಳೆ ಯೋಜನೆ ಜಾರಿ ಮಾಡಲು ಹೊರಟಿರುವ ಸಿಎಂ ಹಾಗೂ ನೀರಾವರಿ ಸಚಿವರು ಕರಾವಳಿಗರ ಜೊತೆ ಆಟವಾಡುತ್ತಿದ್ದಾರೆ. ಕೂಡಲೇ ಇವರಿಬ್ಬರು ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದರು.
ಕಾಂಗ್ರೆಸ್ ಮುಕ್ತ ದೇಶದ ನಿರ್ಮಾಣಕ್ಕೆ ಹೊರಟಿರುವ ಪ್ರಧಾನಿ ಮೋದಿಯ ಕುತಂತ್ರವನ್ನ ಎದುರಿಸಲು ಸಿಎಂ ಸಿದ್ದರಾಮಯ್ಯಗೆ ಸಾಧ್ಯ ಇದೆಯಾ..? ಎಂದು ಪೂಜಾರಿ ಸಿಎಂಗೆ ಸವಾಲ್ ಹಾಕಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications