ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಫೋನ್ ಕರೆ; ತನಿಖೆ ಚುರುಕುಗೊಳಿಸಿದ ಎನ್ ಐಎ
ಮಂಗಳೂರು ಆಗಸ್ಟ್ 19: ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಫೋನ್ ಕರೆ ಸುದ್ದಿ ಜನರನ್ನು ಬೆಚ್ಚಿ ಬೀಳಿಸಿದೆ. ಸ್ಯಾಟಲೈಟ್ ಫೋನ್ ಕರೆ ಕುರಿತು ಗುಪ್ತಚರ ಇಲಾಖೆಗೆ ಬಂದ ಮಾಹಿತಿ ಆಧರಿಸಿ ಎನ್ ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಬೆಳ್ತಂಗಡಿಯ ನಿಡ್ಲೆ, ಗೋವಿಂದೂರಿನಲ್ಲಿ ಮೂವರು ಎನ್ ಐಎ ಅಧಿಕಾರಿಗಳ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. ಈ ನಡುವೆ ತುರಾಯ ಸ್ಯಾಟಲೈಟ್ ಫೋನ್ ನಿಂದ ಬಂದ ಕರೆಯೊಂದು ಟ್ರೇಸ್ ಆದ ಕಾರಣ ರಾಷ್ಟ್ರೀಯ ತನಿಖಾ ದಳ ಬೆಳ್ತಂಗಡಿಯ ನಿಡ್ಲೆ ಹಾಗೂ ಚಿಕ್ಕಮಗಳೂರಿನ ಕಳಸಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಎನ್ ಐಎ ಸಂಪರ್ಕದಲ್ಲಿದ್ದು ತನಿಖೆಗೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ನೀಡುತ್ತಿದ್ದಾರೆ.

ತುರಾಯ ಸ್ಯಾಟಲೈಟ್ ಫೋನ್ ಅನ್ನು ಕೊಲ್ಲಿ ರಾಷ್ಟ್ರಗಳಲ್ಲಿರುವರು ಹೆಚ್ಚಾಗಿ ಬಳಸುತ್ತಾರೆ. ಅದರಲ್ಲೂ ಸಮುದ್ರ ಯಾನ ಸಂದರ್ಭದಲ್ಲಿ ಈ ಸ್ಯಾಟಲೈಟ್ ಫೋನ್ ಬಳಸುತ್ತಾರೆ. ಮುಂಬೈ ದಾಳಿ ಸಂದರ್ಭದಲ್ಲಿ ಈ ತುರಾಯ ಸ್ಯಾಟಲೈಟ್ ಫೋನ್ ಬಳಕೆಯಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ತುರಾಯ ಉಪಗ್ರಹ ಆಧಾರಿತ ಫೋನ್ ಸೇವೆಯನ್ನು ನಿರ್ಬಂಧಿಸಲಾಗಿತ್ತು.
ಬೆಳ್ತಂಗಡಿಯ ಗೇರುಕಟ್ಟೆಯ ಸಮೀಪದ ಗೊವಿಂದೂರಿಗೆ ಇದೇ ತುರಾಯ ಸ್ಯಾಟಲೈಟ್ ಫೋನ್ ಮೂಲಕ ಕರೆ ಬಂದಿದೆ ಎಂದು ಹೇಳಲಾಗಿದೆ. ಆದರೆ ಎಲ್ಲಿಂದ ಈ ಕರೆ ಮಾಡಲಾಗಿದೆ ಎಂದು ಸ್ಪಷ್ಟ ಮಾಹಿತಿ ಇಲ್ಲದಿದ್ದರೂ ಸಮುದ್ರ ಮಾರ್ಗದಿಂದ ಈ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಶಂಕಿತ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿಯಲ್ಲಿ ಎನ್ ಐಎ ತಂಡ ವಶಕ್ಕೆ ಪಡೆದಿದೆ ಎನ್ನುವ ಸುದ್ದಿಹರಿದಾಡುತ್ತಿತ್ತು. ಆದರೆ ಯಾರನ್ನೂ ವಶಕ್ಕೆ ಪಡೆದಿಲ್ಲ ಎನ್ನುವ ಮಾಹಿತಿ ಉನ್ನತ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications