ಬಂಟ್ವಾಳ ತಾಲೂಕಿನ 9 ಕಡೆಗಳಲ್ಲಿ ಎನ್ಐಎ ದಾಳಿ, ಎಲ್ಲೆಲ್ಲಿ ಎಂದು ತಿಳಿಯಿರಿ
ಮಂಗಳೂರು, ಮೇ, 31: ಈಗಾಗಗಲೇ ಬುಧವಾರ (ಮೇ 31) ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ ನಡೆಸಿದೆ. ಈ ಪೈಕಿ ಇದೀಗ ಬಂಟ್ವಾಳ ತಾಲೂಕಿನ 9 ಕಡೆಗಳಲ್ಲಿ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದಲ್ಲಿ ಎರಡು ಕಡೆ, ನರಿಕೊಂಬು ಗ್ರಾಮದ ಎರಡು ಕಡೆ, ಮಾಣಿ ಎರಡು ಕಡೆ, ಬೊಳ್ಳಾಯಿ, ನಜೀಪ ನಡು, ಕೊಳ್ನಾಡುವಿನಲ್ಲಿ ಎನ್ಐಎ ದಾಳಿ ನಡೆಸಿದೆ.
ಝಕಾರಿಯಾ ಗೋಳ್ತಮಜಲು, ಇಜಾಜ್ ಆಹಮ್ಮದ್ ನರಿಕೊಂಬು, ಅಬುಬಕ್ಕರ್ ಸಿದ್ದೀಕ್ ಕೊಳ್ನಾಡು ಎನ್ನುವವರ ಮನೆ ಮೇಲೆ ದಾಳಿ ಮಾಡಲಾಗಿದೆ.

ಇನ್ನು ಝಾಕೀರ್ ಸಜೀಪ ನಡು, ಅಬ್ದುಲ್ ಮುಭಾರಕ್ ಬೊಳ್ಳಾಯಿ, ಎಂ.ಡಿ. ಉಜಾಲೈಪ್ ಮಾಣಿ, ಮಹಮ್ಮದ್ ರಮೀಜ್ ನೆಹರುನಗರ, ಆಸ್ಪಕ್ ಗೋಳ್ತಮಜಲು, ಜುಬೈರ್ ನೇರಳಕಟ್ಟೆ ಮನೆ ಮೇಲೂ ಎನ್ಐಎ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇನ್ನು ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಈ ವೇಳೆ ಪುತ್ತೂರಿನ ನಾಲ್ವರನ್ನು ಬಂಧಿಸಿ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್, ಕೋಡಿಂಬಾಡಿ (37), ಫೈಜಲ್ ಅಹಮ್ಮದ್, ತಾರಿಗುಡ್ಡೆ, ಸಂಶುದ್ಧೀನ್ ಕೂರ್ನಡ್ಕ ಬಂಧಿತ ಆರೋಪಿಗಳಾಗಿದ್ದಾರೆ. ಈ ನಾಲ್ವರು ಆರೋಪಿಗಳಿಗೆ ಪಿಎಫ್ಐ ಸಂಪರ್ಕ ಇರುವ ಸಾಧ್ಯತೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಲಾ ಹಣ ವರ್ಗಾವಣೆ ವಿಚಾರವಾಗಿ ಹಲವರ ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ದಾಳಿ ನಡೆಸಿದೆ. ಹಾಗೆಯೆ ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದ ಕುರಿತು ಎನ್ಐಎ ತನಿಖೆ ಮುಂದುವರೆಸಿದೆ ಎಂದು ತಿಳಿದುಬಂದಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications