Mangaluru cooker blast: ಸುಟ್ಟಗಾಯಗಳಿಂದ ಚೇತರಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆಯಲಿರುವ ಎನ್ಐಎ
ಸುಟ್ಟಗಾಯಗಳಿಂದ ಚೇತರಿಸಿಕೊಂಡಿರುವ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ.
ಮಂಗಳೂರು, ಜನವರಿ, 30: ಸುಟ್ಟಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಂಡಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸುಟ್ಟ ಗಾಯಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಮೊಹಮ್ಮದ್ ಶಾರಿಕ್ ಗಾಯಗಳಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರು ಚೇತರಿಸಿಕೊಂಡ ನಂತರ, ಎನ್ಐಎ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಯಲ್ಲಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡು ಶಾರಿಕ್ ಗಾಯಗೊಂಡಿದ್ದರು. ಆತನೊಂದಿಗೆ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಗಾಯಗೊಂಡಿದ್ದಾರೆ.

ಆರೋಪಿ ಮೊಹಮ್ಮದ್ ಶಾರಿಕ್ಗೆ ಶೇಕಡಾ 40ರಷ್ಟು ಸುಟ್ಟ ಗಾಯಗಳಾಗಿವೆ. ಪ್ರಕರಣ ಕುರಿತು ತನಿಖೆ ನಡೆಸಲು ಆರೋಪಿ ಬದುಕುಳಿಯುವುದು ಅನಿವಾರ್ಯವಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮೊಹಮ್ಮದ್ ಶಾರಿಕ್, ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ನಿಂದ ಪ್ರೇರಿತನಾಗಿದ್ದನು, ಶಿವಮೊಗ್ಗ ಪಟ್ಟಣದಲ್ಲಿ ಇದೇ ರೀತಿಯ ಐಎಸ್ ನೆಲೆಯನ್ನು ಸ್ಥಾಪಿಸಲು ಯೋಜಿಸುತ್ತಿದ್ದನು ಎಂದು ಆರೋಪಿಸಲಾಗಿದೆ.
ಆಪಾದಿತ ಐಎಸ್-ಪ್ರೇರಿತ ಭಯೋತ್ಪಾದನಾ ಗುಂಪು ಕೆಲವು ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸಿ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದಿದ್ದ ನಂತರ ಈ ಘಟಕವನ್ನು ಪೊಲೀಸರು ಭೇದಿಸಿದ್ದರು. ಬಳಿಕ ಬಂಧಿತರು ತಮ್ಮ ಯೋಜನೆಗಳನ್ನು ಬಹಿರಂಗಪಡಿಸಿದ್ದಾರೆ. ಆಘಾತಕಾರಿ ಮಾಹಿತಿಗಳನ್ನು ಹೊರಹಾಕಿದ್ದ ಈ ಬಂಧಿತರು, ತುಂಗಾ ನದಿಯ ದಡದಲ್ಲಿ ಪ್ರಾಯೋಗಿಕ ಸ್ಫೋಟವನ್ನು ನಡೆಸಿದ್ದೇವೆ ಎಂದು ಒಪ್ಪಿಕೊಂಡಿದ್ದರು.

ಇನ್ನು, ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಅವರ ಚಿಕಿತ್ಸಾ ವೆಚ್ಚ ಗಗನ ಮುಟ್ಟಿದ್ದು, ಆರ್ಥಿಕ ಸಹಾಯದ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಮಾತ್ರ ಹಿಂತಿರುಗಿ ನೋಡಿಲ್ಲ ಎಂದು ಆರೋಪಿಸಲಾಗಿದೆ.
ಚಿಕಿತ್ಸೆಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ 50 ಸಾವಿರ, ವಿದ್ಯುತ್ ಸಚಿವ ವಿ.ಸುನೀಲ್ ಕುಮಾರ್ ಅವರು ವೈಯಕ್ತಿಕವಾಗಿ 25 ಸಾವಿರ ರೂಪಾಯಿ ನೀಡಿದ್ದಾರೆ. ಇದರ ಹೊರತು ಸರ್ಕಾರದಿಂದ ಆರ್ಥಿಕ ಸಹಾಯವಾಗಿಲ್ಲ, ಮುಖ್ಯಮಂತ್ರಿಗಳ ಸಹಾಯಹಸ್ತಕ್ಕಾಗಿ ಕಾಯುತ್ತಿದ್ದೇವೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications