ಕೇರಳದಲ್ಲಿ ನಿಫಾ ಅಬ್ಬರ: ದಕ್ಷಿಣ ಕನ್ನಡದಲ್ಲಿ ಅಲರ್ಟ್, ವಿಶೇಷ ಜ್ವರ ಸಮೀಕ್ಷೆ
ಮಂಗಳೂರು, ಸೆಪ್ಟೆಂಬರ್ 13: ಕೇರಳದಲ್ಲಿ ಇಬ್ಬರನ್ನು ಬಲಿ ಪಡೆದಿರುವ ನಿಫಾ ವೈರಸ್ ಬಗ್ಗೆ ದ.ಕ.ಜಿಲ್ಲೆಯ ಜನತೆಗೆ ಆತಂಕ ಬೇಡ. ಆದರೆ ಜಾಗ್ರತೆಯಿರಲಿ. ಜ್ವರ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ತಕ್ಷಣ ವೈದ್ಯರನ್ನು ಕಾಣುವಂತೆ ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುದರ್ಶನ್ ಸಲಹೆ ನೀಡಿದ್ದಾರೆ.
ದ.ಕ.ಜಿಲ್ಲಾ ಆರೋಗ್ಯಾಧಿಕಾರಿಯವರ ಕಚೇರಿಯಲ್ಲಿ ಮಾತನಾಡಿದ ಅವರು, ನಿಫಾ ವೈರಸ್ ಸೋಂಕು ದ.ಕ.ಜಿಲ್ಲೆಗೆ ಹರಡಿಲ್ಲ. ಆದರೆ ಮುನ್ನೆಚ್ಚರಿಕಾ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಜ್ವರ ಸಮೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿ ದಾಸ್ತಾನು ಇರಿಸಲು ಸೂಚನೆ ನೀಡಲಾಗಿದೆ. ತಾಲೂಕು, ಆಸ್ಪತ್ರೆಗಳಲ್ಲಿ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ.

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆಯನ್ನು ಮಾಡಲಾಗಿದೆ. ಸಾಮಾನ್ಯ ವೈರಲ್ ಜ್ವರದಂತೆ ನಿಫಾ ಲಕ್ಷಣವಿದ್ದರೂ, ಜ್ಞಾನ ತಪ್ಪುವುದು, ಮಾನಸಿಕ ಗೊಂದಲ ಮತ್ತು ಫಿಟ್ಸ್ ಲಕ್ಷಣವಿದ್ದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು ಎಂದು ಸೂಚನೆ ನೀಡಿದರು.
ಶಂಕಿತ ನಿಫಾ ಸೋಂಕಿತರಿದ್ದಲ್ಲಿ ಅವರನ್ನು ಪ್ರತ್ಯೇಕವಾಗಿಡುವುದು, ಹಸ್ತಲಾಘವ ಮಾಡಬಾರದು, ರೋಗಿಗಳ ಉಪಚಾರದ ವೇಳೆ ಮಾಸ್ಕ್ , ಗ್ಲೌಸ್ ಧರಿಸುವುದು ಕಡ್ಡಾಯ. ನಿಫಾ ಹಂದಿ, ಕುದುರೆ, ನಾಯಿ, ಬೆಕ್ಕು ಮುಂತಾದ ಪ್ರಾಣಿಗಳಲ್ಲೂ ಕಂಡು ಬರುತ್ತದೆ. ಆದ್ದರಿಂದ ಪ್ರಾಣಿಗಳ ಜೊಲ್ಲು, ಮಲವನ್ನು ಸ್ಪರ್ಶಿಸಬಾರದು.
ಎಲ್ಲಾ ಹಣ್ಣು ಹಂಪಲುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಬೇಯಿಸಿ ತಿನ್ನಬೇಕು. ಬಾವಲಿಯಂತಹ ಪ್ರಾಣಿಗಳು ಕಚ್ಚಿರುವ ಆಹಾರ ಬಳಸಬಾರದು. ಸೋಂಕು ಹರಡಿದ ಪ್ರದೇಶದಲ್ಲಿ ಸೇಂದಿ ಅಥವಾ ನೀರಾವನ್ನೂ ಜನ ಸೇವಿಸಬಾರದೆಂದು ಆರೋಗ್ಯಾಧಿಕಾರಿ ಡಾ.ಸುದರ್ಶನ್ ಹೇಳಿದರು.
2018ರಲ್ಲಿ ಕೇರಳದಲ್ಲಿ ಕಾಣಿಸಿಕೊಂಡಿದ್ದ ನಿಫಾ ವೈರಸ್ನಿಂದ ಆಗ ಕೇರಳದಲ್ಲಿ17 ಮಂದಿ ಬಲಿಯಾಗಿದ್ದರು. ಕೇರಳದ ಪಕ್ಕದ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಆಸ್ಪತ್ರೆಗೆ ಕೇರಳದಿಂದ ಅತೀ ಹೆಚ್ಚಿನ ರೋಗಿಗಳು ಬರುತ್ತಾರೆ. ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲೂ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ನಿಫಾ ಆತಂಕದ ನಡುವೆಯೇ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಜಾಸ್ತಿಯಾಗುತ್ತಿದೆ.ಕಳೆದ ಎಪ್ರಿಲ್ ನಿಂದ ಜಿಲ್ಲೆಯಲ್ಲಿ198 ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಕೇವಲ ಎರಡು ತಿಂಗಳಿನಲ್ಲೇ 60 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬಂದವರಲ್ಲೇ ಜಾಸ್ತಿ ಡೆಂಗ್ಯೂ ಪ್ರಕರಣ ಕಾಣಿಸಿದ್ದು, ಮಂಗಳವಾರ ಶಂಕಿತ ಡೆಂಗ್ಯೂ ದಿಂದ 25 ವರ್ಷದ ಯುವತಿಯೂ ಸಾವುಗೀಡಾಗಿದ್ದಾರೆ.
ದ.ಕ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಸೊಳ್ಳೆಗಳ ಉತ್ಪತ್ತಿಯೂ ಜಾಸ್ತಿಯಾಗುತ್ತಿದೆ. ಡೆಂಗ್ಯೂ ಜ್ವರದ ಬಗ್ಗೆಯೂ ಎಚ್ಚರದಿಂದ ಇರುವಂತೆ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ನವೀನ್ ಕುಮಾರ್ ಮನವಿ ಮಾಡಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications