ಕೇರಳದಲ್ಲಿ ನಿಫಾ ವೈರಸ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್
ಮಂಗಳೂರು ಮೇ 21: ಕಳೆದ ಕೆಲವು ದಿನಗಳಿಂದ ಕೇರಳದಾದ್ಯಂತ ಭಾರೀ ಆತಂಕ ಮೂಡಿಸಿರುವ ನಿಫಾ ವೈರಸ್ ಸೋಂಕಿನ ಕುರಿತು ಕರ್ನಾಟಕದಲ್ಲಿಯೂ ಭಯ ಕಾಡಲಾರಂಭಿಸಿದೆ. ಕೇರಳದಲ್ಲಿ ಭಾರೀ ವೇಗವಾಗಿ ಈ ಸೋಂಕು ಹರಡುತ್ತಿದ್ದು, ಈಗಾಗಲೇ 11 ಕ್ಕೂ ಹೆಚ್ಚು ಜನರು ನಿಫಾ ವೈರಸ್ ಗೆ ಬಲಿಯಾಗಿದ್ದಾರೆ.
ಕೋಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಕಾಣಿಸಿಕೊಂಡ ವಿರಳ ಹಾಗೂ ಮಾರಣಾಂತಿಕ ಈ ನಿಫಾ ವೈರಸ್ ಕುರಿತು ದೇಶದಾದ್ಯಂತ ಚರ್ಚೆ ಆರಂಭವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನಗಳು ಅರಂಭವಾಗಿದೆ.
ಈ ಮಾರಣಾಂತಿಕ ನಿಫಾ ವೈರಸ್ ಕುರಿತು ರಾಜ್ಯದಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ರಾಜ್ಯಕ್ಕೆ ಭೇಟಿ ನೀಡುವವರ ಕುರಿತು ನಿಗಾ ವಹಿಸಲಾಗಿದ್ದು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸೂಚನೆ ಜಾರಿ ಮಾಡಿದೆ.

ಕೇರಳ ಗಡಿ ಭಾಗವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಖಾಸಗಿ ಅಸ್ಪತ್ರೆಗಳಿಂದ ಆರೋಗ್ಯ ಇಲಾಖೆ ವರದಿ ತರಿಸಿಕೊಂಡಿದ್ದು ನಿಫಾ ವೇರಸ್ ವೈರಸ್ ತಗುಲಿದ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೆ ಜಿಲ್ಲೆಯ ಎಲ್ಲಾ ಖಾಸಗಿ ಹಾಗು ಸರಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಬಗ್ಗೆ ಗಮನ ಇರಿಸುವಂತೆ ಸೂಚನೆ ನೀಡಲಾಗಿದೆ.
ಅದರಲ್ಲೂ ಕೇರಳದ ರೋಗಿಗಳ ಮೇಲೆ ಹೆಚ್ಚಿನ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ. ನಿಫಾ ಸೊಂಕು ತಗುಲಿದ ರೋಗಿಗಳ ಬಗ್ಗೆ ಅನುಮಾನ ಬಂದಲ್ಲಿ ತಕ್ಷಣ ಇಲಾಖೆಗೆ ಸೂಚಿಸುವಂತೆ ಹಾಗೂ ರೋಗಿಗಳ ರಕ್ತವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸುವಂತೆ ನಿರ್ದೇಶನ ನೀಡಲಾಗಿದೆ.
ಕೇರಳದಲ್ಲಿ ನಿಫಾ ವೈರಸ್ ಗೆ ನರ್ಸ್ ಒಬ್ಬರು ತುತ್ತಾದ ಕಾರಣ ವೈದ್ಯಕೀಯ ಸಿಬ್ಬಂದಿಗಳು ಕೂಡ ಜಾಗ್ರತೆ ವಹಿಸುವಂತೆ ತಿಳಿಸಲಾಗಿದೆ. ಜ್ವರ, ವಾಂತಿ, ತಲೆನೋವು ಹಾಗೂ ಉಸಿರಾಟದ ತೊಂದರೆ ಈ ವೈರಸ್ ನ ಲಕ್ಷಣವಾಗಿದ್ದು ಈ ಲಕ್ಷಣಗಳಿಂದ ಬಳಲುತ್ತಿರುವ ರೋಗಿಗಳ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ.
ಕೇರಳ ರಾಜ್ಯದಲ್ಲಿ ಕಾಣಿಸಿಕೊಂಡ ಈ ಮಾರಣಾಂತಿಕ ನಿಫಾ ವೈರಸ್ ಅತ್ಯಧಿಕ ವೇಗವಾಗಿ ಹರಡುವ ರೋಗಾಣುವಾಗಿದ್ದು. ಈ ನಿಫಾ ವೈರಸ್ ಬಾವಲಿ, ಹಂದಿ ಹಾಗೂ ಇನ್ನಿತರ ಪ್ರಾಣಿಗಳಿಂದ ಹರಡುತ್ತದೆ ಎಂದು ಹೇಳಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications