ಧರ್ಮಸ್ಥಳದಲ್ಲಿ ಕೆಲವೇ ಕ್ಷಣಗಳಲ್ಲಿ ಪ್ರಗತಿ ರಕ್ಷಾ ಕವಚ ಯೋಜನೆಗೆ ಚಾಲನೆ
ಮಂಗಳೂರು, ಅಕ್ಟೋಬರ್. 29: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡಗಳ ಸದಸ್ಯರ ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಗೆ ಇಂದು ಸೋಮವಾರ ಚಾಲನೆ ದೊರಕಲಿದೆ. ಈ ಯೋಜನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಇತರ ಬಿಜೆಪಿ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.

ಮೊದಲು ಮಂಗಳೂರಿನಲ್ಲಿ ವಿಶ್ರಾಂತಿ ಪಡೆದ ನಿರ್ಮಲಾ ಸೀತಾರಾಮನ್ ನಂತರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದರು.
ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡಗಳ ಸದಸ್ಯರ ಪ್ರಗತಿ ರಕ್ಷಾ ಕವಚ ವಿಮಾ ಯೋಜನೆ ಅನಾವರಣಗೊಳಿಸಲಿರುವ ನಿರ್ಮಲಾ ಸೀತಾರಾಮನ್ ಝಡ್ ಪ್ಲಸ್ ಭದ್ರತೆ ಹೊಂದಿದ್ದು, ರಸ್ತೆ ಮಾರ್ಗವಾಗಿ ಧರ್ಮಸ್ಥಳ ತಲುಪಿದರು.

ಇದೀಗ ಅವರ ಭದ್ರತೆಯ ದೃಷ್ಟಿಯಿಂದ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.












Click it and Unblock the Notifications