ಮಂಗಳೂರಲ್ಲಿ ಚಾಕು ಇರಿತ : ನರ್ಸ್ ನಿಮ್ಮಿ ಕಾರ್ಯಕ್ಕೆ ಶ್ಲಾಘನೆ
ಮಂಗಳೂರು, ಜೂನ್ 30 : ಯುವಕನೊಬ್ಬ ಯುವತಿಗೆ ಚಾಕು ಇರಿದು ಬಳಿಕ ತಾನು ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಯುವತಿಯನ್ನು ರಕ್ಷಣೆ ಮಾಡಿದ ನರ್ಸ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಗಂಬಿಲದಲ್ಲಿ ನಡೆದ ಕೊಲೆ ಯತ್ನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ ಮತ್ತು ಯುವಕ ಇಬ್ಬರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಭಾನುವಾರ ಸಚಿವ ಯು.ಟಿ.ಖಾದರ್ ಯುವತಿ ಆರೋಗ್ಯ ವಿಚಾರಿಸಿದರು.
ಯುವಕ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸುವಾಗ ಹತ್ತಕ್ಕೂ ಅಧಿಕ ಜನರು ಸುತ್ತಮುತ್ತಲೂ ಇದ್ದರು. ಮನೆಯ ಮಹಡಿ ಮೇಲೆ ನಿಂತವರು ಘಟನೆಯ ವಿಡಿಯೋ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಯುವತಿಯನ್ನು ರಕ್ಷಣೆ ಮಾಡಲು ಮುಂದಾಗಿದ್ದು, ನರ್ಸ್ ನಿಮ್ಮಿ ಸ್ಟಿಫನ್.

ನಿಮ್ಮಿ ಯುವತಿ ರಕ್ಷಣೆ ಮಾಡಲು ಹೋಗುತ್ತಿರುವಾಗ ಬೇಡ ನಿಮ್ಮಿ ಬೇಡ ಎಂದು ಜನರು ಕೂಗುತ್ತಿರುವುದು ವಿಡಿಯೋದಲ್ಲಿ ಕೇಳುತ್ತದೆ. ಯುವಕನ ಕೈಯಲ್ಲಿ ಚಾಕುವಿದ್ದರೂ ಹೆದರದೇ ನಿಮ್ಮಿ ಯುವತಿಯ ರಕ್ಷಣೆಗೆ ಮುಂದಾಗಿದ್ದಾರೆ.
ದೇರಳಕಟ್ಟೆಯಲ್ಲಿರುವ ಜೆಕೆಎಸ್ಎಚ್ ಚಾರಿಟಬಲ್ ಆಸ್ಪತ್ರೆಯ ಸ್ಟಾಫ್ ನರ್ಸ್ ನಿಮ್ಮಿ ಸ್ಪಿಫನ್ ಕಾರ್ಯಕ್ಕೆ ಈಗ ವ್ಯಾಪಕ ಪ್ರಶಂಸೆ ಸಿಕ್ಕಿದೆ. ನಿಮ್ಮಿಯ ಸಾಹಸವನ್ನು ನಿಟ್ಟೆ ವಿಶ್ವವಿದ್ಯಾಲಯ ಶ್ಲಾಘಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಕೇರಳ ಮೂಲದ ನಿಮ್ಮಿ ಸ್ಟಿಫನ್ ಅವರು, 'ಹಲವಾರು ಜನರು ನನ್ನ ಹೆಸರು ಕೂಗಿ ಜಾಗ್ರತೆ ಇರಲಿ ಎಂದರೆ ಇನ್ನೂ ಕೆಲವರು ಹೋಗಬೇಡ ಎಂದು ಕೂಗುತ್ತಿದ್ದರು. ಆ ಕ್ಷಣದಲ್ಲಿ ನಾನು ಬೇರೆನೂ ಆಲೋಚಿಸಲಿಲ್ಲ. ಯುವತಿ ಕೆಳಗೆ ಬಿದ್ದಿದ್ದಾಳೆ. ಅವಳನ್ನು ರಕ್ಷಣೆ ಮಾಡುವುದು ಹೇಗೆ ಎಂಬುದು ನನ್ನ ಗುರಿಯಾಗಿತ್ತು' ಎಂದು ಹೇಳಿದ್ದಾರೆ.
ನಿಮ್ಮಿ ಸ್ಟಿಫನ್ ಅವರು ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ ಮುಗಿಸಿ 10 ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದಾರೆ. 'ಅಪರಾಧ ಪ್ರಕರಣಗಳಲ್ಲಿ ಗಾಯಗೊಂಡವರನ್ನು ಉಪಚರಿಸಿದ್ದೇನೆ. ಆದರೆ, ನನ್ನ ಕಣ್ಣಮುಂದೆಯೇ ಅಪರಾಧ ಕೃತ್ಯ ನಡೆದಿರುವುದು ಇದೇ ಮೊದಲು' ಎಂದು ನಿಮ್ಮಿ ತಿಳಿಸಿದ್ದಾರೆ.
-
Heat Wave Karnataka: ಕರಾವಳಿ ಬಿಸಿ ಕಾವಲಿಯ ಮೇಲೆ ಮಾಲಿನ್ಯದ ಥಡ್ಕಾ: ರಾಜಾರಾಂ ತಲ್ಲೂರು ಬರಹ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications